• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕುಮಾರಸ್ವಾಮಿಯವರೇ ನಿಮಗೇಕೆ ಉತ್ತರ ಕರ್ನಾಟಕ ಎಂದರೆ ಇಷ್ಟು ಸಿಟ್ಟು?

TNN Correspondent Posted On August 17, 2018
0


0
Shares
  • Share On Facebook
  • Tweet It

ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗುವ ತನಕ ಅಥವಾ ಚುನಾವಣೆ ಮುಗಿಯುವರೆಗೆ ನಾನು ಅಧಿಕಾರಕ್ಕೆ ಬಂದರೆ 24 ಗಂಟೆಯಲ್ಲಿ ಸಾಲ ಮನ್ನಾ ಮಾಡುತ್ತೇನೆ, ಅಖಂಡ ರಾಜ್ಯ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದರು. ಆದರೆ ಅಧಿಕಾರ ಸಿಗುತ್ತಲೇ ಸಾಲ ಮನ್ನಾ ಮಾಡಲು ಸರ್ಕಾರದ ಬಳಿ ಹಣವಿಲ್ಲ, ಸ್ವಲ್ಪ ಸಮಯ ಕೊಡಿ ಎಂದರು. ಮತ್ತೂ ಮುಂದುವರಿದು ನಾನು ಕಾಂಗ್ರೆಸ್ ಮರ್ಜಿಯಲ್ಲಿರುವ ಮುಖ್ಯಮಂತ್ರಿ ಎನ್ನುವ ಮೂಲಕ ಕುಮಾರಸ್ವಾಮಿಯವರಿಗೆ ಎರಡು ನಾಲಿಗೆ ಇವೆಯೇನೋ ಎನ್ನುವಷ್ಟರಮಟ್ಟಿಗೆ ನಡೆದುಕೊಂಡರು.

ಅದರಲ್ಲೂ ಉತ್ತರ ಕರ್ನಾಟಕದಲ್ಲಿ ಜೆಡಿಎಸ್ ಪ್ರಾಬಲ್ಯವಿಲ್ಲ ಎಂಬ ಕಾರಣಕ್ಕಾಗಿಯೇನೋ, ಮುಖ್ಯಮಂತ್ರಿ ಕುಮಾರಸ್ವಾಮಿಯವರು ಉತ್ತರ ಕರ್ನಾಟಕದ ಅಭಿವೃದ್ಧಿಯನ್ನು ನಿರ್ಲಕ್ಷಿಸುತ್ತಿದ್ದಾರೆ. ಇತ್ತೀಚೆಗಷ್ಟೇ ಕೆಶಿಪ್ ವರ್ಗಾವಣೆ ಮಾಡುವ ಮೂಲಕ ಕುಮಾರಸ್ವಾಮಿ ಉತ್ತರ ಕರ್ನಾಟಕದ ಜನರ ಕೆಂಗಣ್ಣಿಗೆ ಗುರಿಯಾಗಿದ್ದರು.

ಇಷ್ಟಾದರೂ ಉತ್ತರ ಕರ್ನಾಟಕದ ಮೇಲೆ ಮುನಿಸು ಬಿಟ್ಟಂತೆ ಕಾಣದ ಕುಮಾರಸ್ವಾಮಿಯವರು ಈಗ ಉತ್ತರ ಕರ್ನಾಟಕಕ್ಕೆ ಮತ್ತೊಂದು ಶಾಕ್ ನೀಡಿದ್ದು, ಬೆಳಗಾವಿಯಲ್ಲಿ ನಿರ್ಮಾಣವಾಗಬೇಕಿದ್ದ ಆಯುಷ್ ಔಷಧ ತಯಾರಿಕಾ ಘಟಕವನ್ನು ಬೆಂಗಳೂರಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸುವ ಮೂಲಕ ಉತ್ತರ ಕರ್ನಾಟಕದ ಮೇಲಿರುವ ಸಿಟ್ಟನ್ನು ಬಹಿರಂಗವಾಗಿಯೇ ವ್ಯಕ್ತಪಡಿಸಿದೆ ಎನ್ನಲಾಗುತ್ತಿದೆ.

2017ರಲ್ಲಿ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ ಬೆಳಗಾವಿಗೆ ಆಯುಷ್ ಔಷಧ ತಯಾರಿಕೆ ಘಟಕವನ್ನು ಘೋಷಿಸಿದ್ದರು. ಅಲ್ಲದೆ ಬಜೆಟ್ ನಲ್ಲಿ ಔಷಧ ಘಟಕ ಸ್ಥಾಪನೆಗೆ 25 ಕೋಟಿ ರೂಪಾಯಿ ಅನುದಾನ ಸಹ ಮೀಸಲಿಟ್ಟಿದ್ದರು, ಆದರೆ ಈಗ ಬಂದಿರುವ ಕುಮಾರಸ್ವಾಮಿ ಸರ್ಕಾರ ಘಟಕವನ್ನು ಬೆಂಗಳೂರಿಗೆ ವರ್ಗಾಯಿಸಿದೆ.

ಸಚಿವ ಸಂಪುಟದಲ್ಲಿ ಅನುಮೋದನೆ ಪಡೆದಿಲ್ಲ ಹಾಗೂ ಬೆಂಗಳೂರಿನ ಜಯನಗರದಲ್ಲಿರುವ ಸರ್ಕಾರಿ ಕೇಂದ್ರೀಯ ಔಷಧ ಘಟಕ ಪುನರುಜ್ಜೀವನಗೊಳಿಸುವ ನಿಟ್ಟಿನಲ್ಲಿ ಬೆಳಗಾವಿಯ ಘಟಕವನ್ನು ಬೆಂಗಳೂರಿಗೆ ಸ್ಥಳಾಂತರಿಸುವಂತೆ ಸರ್ಕಾರ ಆದೇಶ ಹೊರಡಿಸಿದೆ. ಹೇಳಿ ಕುಮಾರಸ್ವಾಮಿಯವರೇ ನಿಮಗೇಕೆ ಉತ್ತರ ಕರ್ನಾಟಕದ ಜನರ ಮೇಲೆ ಇಷ್ಟೊಂದು ಸಿಟ್ಟು? ನೀವು ಹೀಗೆಯೇ ಮಾಡಿದರೆ ಮುಂದೆ ನಿಮಗೆ ಉತ್ತರ ಕರ್ನಾಟಕದ ಜನ ಪಾಠ ಕಲಿಸದೆ ಬಿಡುತ್ತಾರೆಯೇ? ಅಷ್ಟಕ್ಕೂ ನೀವು ಅಖಂಡ ಕರ್ನಾಟಕದ ಸಿಎಂ ಅಲ್ಲವೇ?

0
Shares
  • Share On Facebook
  • Tweet It




Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search