• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕುಮಾರಸ್ವಾಮಿಯವರೇ ನಿಮಗೇಕೆ ಉತ್ತರ ಕರ್ನಾಟಕ ಎಂದರೆ ಇಷ್ಟು ಸಿಟ್ಟು?

TNN Correspondent Posted On August 17, 2018
0


0
Shares
  • Share On Facebook
  • Tweet It

ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗುವ ತನಕ ಅಥವಾ ಚುನಾವಣೆ ಮುಗಿಯುವರೆಗೆ ನಾನು ಅಧಿಕಾರಕ್ಕೆ ಬಂದರೆ 24 ಗಂಟೆಯಲ್ಲಿ ಸಾಲ ಮನ್ನಾ ಮಾಡುತ್ತೇನೆ, ಅಖಂಡ ರಾಜ್ಯ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದರು. ಆದರೆ ಅಧಿಕಾರ ಸಿಗುತ್ತಲೇ ಸಾಲ ಮನ್ನಾ ಮಾಡಲು ಸರ್ಕಾರದ ಬಳಿ ಹಣವಿಲ್ಲ, ಸ್ವಲ್ಪ ಸಮಯ ಕೊಡಿ ಎಂದರು. ಮತ್ತೂ ಮುಂದುವರಿದು ನಾನು ಕಾಂಗ್ರೆಸ್ ಮರ್ಜಿಯಲ್ಲಿರುವ ಮುಖ್ಯಮಂತ್ರಿ ಎನ್ನುವ ಮೂಲಕ ಕುಮಾರಸ್ವಾಮಿಯವರಿಗೆ ಎರಡು ನಾಲಿಗೆ ಇವೆಯೇನೋ ಎನ್ನುವಷ್ಟರಮಟ್ಟಿಗೆ ನಡೆದುಕೊಂಡರು.

ಅದರಲ್ಲೂ ಉತ್ತರ ಕರ್ನಾಟಕದಲ್ಲಿ ಜೆಡಿಎಸ್ ಪ್ರಾಬಲ್ಯವಿಲ್ಲ ಎಂಬ ಕಾರಣಕ್ಕಾಗಿಯೇನೋ, ಮುಖ್ಯಮಂತ್ರಿ ಕುಮಾರಸ್ವಾಮಿಯವರು ಉತ್ತರ ಕರ್ನಾಟಕದ ಅಭಿವೃದ್ಧಿಯನ್ನು ನಿರ್ಲಕ್ಷಿಸುತ್ತಿದ್ದಾರೆ. ಇತ್ತೀಚೆಗಷ್ಟೇ ಕೆಶಿಪ್ ವರ್ಗಾವಣೆ ಮಾಡುವ ಮೂಲಕ ಕುಮಾರಸ್ವಾಮಿ ಉತ್ತರ ಕರ್ನಾಟಕದ ಜನರ ಕೆಂಗಣ್ಣಿಗೆ ಗುರಿಯಾಗಿದ್ದರು.

ಇಷ್ಟಾದರೂ ಉತ್ತರ ಕರ್ನಾಟಕದ ಮೇಲೆ ಮುನಿಸು ಬಿಟ್ಟಂತೆ ಕಾಣದ ಕುಮಾರಸ್ವಾಮಿಯವರು ಈಗ ಉತ್ತರ ಕರ್ನಾಟಕಕ್ಕೆ ಮತ್ತೊಂದು ಶಾಕ್ ನೀಡಿದ್ದು, ಬೆಳಗಾವಿಯಲ್ಲಿ ನಿರ್ಮಾಣವಾಗಬೇಕಿದ್ದ ಆಯುಷ್ ಔಷಧ ತಯಾರಿಕಾ ಘಟಕವನ್ನು ಬೆಂಗಳೂರಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸುವ ಮೂಲಕ ಉತ್ತರ ಕರ್ನಾಟಕದ ಮೇಲಿರುವ ಸಿಟ್ಟನ್ನು ಬಹಿರಂಗವಾಗಿಯೇ ವ್ಯಕ್ತಪಡಿಸಿದೆ ಎನ್ನಲಾಗುತ್ತಿದೆ.

2017ರಲ್ಲಿ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ ಬೆಳಗಾವಿಗೆ ಆಯುಷ್ ಔಷಧ ತಯಾರಿಕೆ ಘಟಕವನ್ನು ಘೋಷಿಸಿದ್ದರು. ಅಲ್ಲದೆ ಬಜೆಟ್ ನಲ್ಲಿ ಔಷಧ ಘಟಕ ಸ್ಥಾಪನೆಗೆ 25 ಕೋಟಿ ರೂಪಾಯಿ ಅನುದಾನ ಸಹ ಮೀಸಲಿಟ್ಟಿದ್ದರು, ಆದರೆ ಈಗ ಬಂದಿರುವ ಕುಮಾರಸ್ವಾಮಿ ಸರ್ಕಾರ ಘಟಕವನ್ನು ಬೆಂಗಳೂರಿಗೆ ವರ್ಗಾಯಿಸಿದೆ.

ಸಚಿವ ಸಂಪುಟದಲ್ಲಿ ಅನುಮೋದನೆ ಪಡೆದಿಲ್ಲ ಹಾಗೂ ಬೆಂಗಳೂರಿನ ಜಯನಗರದಲ್ಲಿರುವ ಸರ್ಕಾರಿ ಕೇಂದ್ರೀಯ ಔಷಧ ಘಟಕ ಪುನರುಜ್ಜೀವನಗೊಳಿಸುವ ನಿಟ್ಟಿನಲ್ಲಿ ಬೆಳಗಾವಿಯ ಘಟಕವನ್ನು ಬೆಂಗಳೂರಿಗೆ ಸ್ಥಳಾಂತರಿಸುವಂತೆ ಸರ್ಕಾರ ಆದೇಶ ಹೊರಡಿಸಿದೆ. ಹೇಳಿ ಕುಮಾರಸ್ವಾಮಿಯವರೇ ನಿಮಗೇಕೆ ಉತ್ತರ ಕರ್ನಾಟಕದ ಜನರ ಮೇಲೆ ಇಷ್ಟೊಂದು ಸಿಟ್ಟು? ನೀವು ಹೀಗೆಯೇ ಮಾಡಿದರೆ ಮುಂದೆ ನಿಮಗೆ ಉತ್ತರ ಕರ್ನಾಟಕದ ಜನ ಪಾಠ ಕಲಿಸದೆ ಬಿಡುತ್ತಾರೆಯೇ? ಅಷ್ಟಕ್ಕೂ ನೀವು ಅಖಂಡ ಕರ್ನಾಟಕದ ಸಿಎಂ ಅಲ್ಲವೇ?

0
Shares
  • Share On Facebook
  • Tweet It




Trending Now
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
  • Popular Posts

    • 1
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • 2
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 3
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..

  • Privacy Policy
  • Contact
© Tulunadu Infomedia.

Press enter/return to begin your search