• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಬೆಂಗ್ಳೂರು – ಮಂಗ್ಳೂರು ರೈಲ್ವೇ ಹಳಿ 50 ಕಡೆ ಗುಡ್ಡ ಕುಸಿತ – 1 ತಿಂಗ್ಳು ಸಂಚಾರ ಅನುಮಾನ

Tulunadu News Posted On August 18, 2018


  • Share On Facebook
  • Tweet It

ಹಾಸನ: ತಿಂಗಳುಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಜಿಲ್ಲೆಯಾದ್ಯಂತ ಜನರು ತತ್ತರಿಸಿಹೋಗಿದ್ದು, ಈಗ ಮಳೆಯ ರಭಸಕ್ಕೆ ರೈಲ್ವೇ ಸೇತುವೆಯೇ ಕೊಚ್ಚಿ ಹೋಗಿದೆ.

ಜಿಲ್ಲಯಲ್ಲಿ ಶುಕ್ರವಾರ ರಾತ್ರಿ ಜೋರಾದ ಮಳೆಯಾಗಿದ್ದು, ಪರಿಣಾಮ ಸಕಲೇಶಪುರ ತಾಲೂಕು ಎಡಕುಮೇರಿ ರೈಲು ಹಳಿಯ ಮೇಲೆ ಗುಡ್ಡ ಕುಸಿದಿದೆ. ಅಷ್ಟೇ ಅಲ್ಲದೇ ಬೆಂಗಳೂರು ಮಂಗಳೂರು ರೈಲ್ವೇ ಸಂಪರ್ಕದಲ್ಲಿ 50 ಕಡೆ ಗುಡ್ಡ ಕುಸಿತ ಉಂಟಾಗಿದೆ. ಇದರಿಂದ ಇನ್ನು ಒಂದು ತಿಂಗಳು ರೈಲು ಸಂಚಾರ ಅನುಮಾನವಾಗಿದೆ.

ಸದ್ಯಕ್ಕೆ ಸಕಲೇಶಪುರ ತಾಲೂಕು ಎಡಕುಮೇರಿ ಸುತ್ತಲು ರೈಲ್ವೇ ಸಿಬ್ಬಂದಿ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ. ತೆರವು ಕಾರ್ಯಾಚರಣೆಗೆ ಕಾರ್ಮಿಕರ ಕೊರತೆಯಿಂದ ಕಾರ್ಯ ವಿಳಂಬವಾಗುತ್ತಿದೆ. ಮಳೆಯಿಂದ ರೈಲ್ವೇ ಇಲಾಖೆಗೆ ಅಪಾರ ನಷ್ಟವಾಗಿದೆ. ಈಗಾಗಲೇ ಭಾರೀ ಮಳೆಯಿಂದ ಶಿರಾಡಿಘಾಟ್ ಸ್ಥಗಿತಗೊಂಡಿದ್ದು, ಪ್ರಯಾಣಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಕಳೆದ ನಾಲ್ಕು ದಿನಗಳಿಂದ ಕಾವೇರಿ ನದಿ ನೀರು ಅಪಾಯದ ಮಟ್ಟವನ್ನು ತಲುಪಿದೆ. ಪರಿಣಾಮ ಜಿಲ್ಲೆಯ ರಾಮನಾಥಪುರ ಪಟ್ಟಣದಲ್ಲಿ ಸಾಕಷ್ಟು ಅವಾಂತರಕ್ಕೆ ಕಾರಣವಾಗಿದೆ. ನೂರಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದ್ದು, ಕೆಲವು ಮನೆಗಳು ಕುಸಿದು ಬಿದ್ದಿವೆ. ಪಟ್ಟಣದಿಂದ ಮೈಸೂರು ಮತ್ತು ಮಡಿಕೇರಿಗಳಿಗೆ ಸಂಪರ್ಕ ರಸ್ತೆಗಳು ಜಲಾವೃತಗೊಂಡಿವೆ. ಪ್ರಸನ್ನ ಸುಬ್ರಮಣ್ಯ ದೇವಾಲಯದ ಬಳಿಯೂ ನೀರು ನುಗ್ಗಿದ್ದು, ಸದಾ ಭಕ್ತರಿಂದ ಇದ್ದ ಆಂಜನೇಯ ದೇವಾಲಯಗಳು ಮತ್ತು ರಾಮನಾಥಪುರ ದೇವಸ್ಥಾನಗಳು ಜಲಾವೃತಗೊಂಡಿವೆ.

  • Share On Facebook
  • Tweet It


- Advertisement -


Trending Now
ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
Tulunadu News July 1, 2022
ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
Tulunadu News June 30, 2022
Leave A Reply

  • Recent Posts

    • ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!
    • ನೂಪುರ್ ಹೇಳಿಕೆಗೆ ಮುಸ್ಲಿಮರು ದೇಶದಲ್ಲಿ ಬೆಂಕಿ ಇಟ್ಟರು, ಶೈಲಜಾ ಹೇಳಿಕೆಗೆ??
  • Popular Posts

    • 1
      ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • 2
      ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • 3
      ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • 4
      ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • 5
      ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search