• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಬೆಂಗ್ಳೂರು – ಮಂಗ್ಳೂರು ರೈಲ್ವೇ ಹಳಿ 50 ಕಡೆ ಗುಡ್ಡ ಕುಸಿತ – 1 ತಿಂಗ್ಳು ಸಂಚಾರ ಅನುಮಾನ

Tulunadu News Posted On August 18, 2018


  • Share On Facebook
  • Tweet It

ಹಾಸನ: ತಿಂಗಳುಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಜಿಲ್ಲೆಯಾದ್ಯಂತ ಜನರು ತತ್ತರಿಸಿಹೋಗಿದ್ದು, ಈಗ ಮಳೆಯ ರಭಸಕ್ಕೆ ರೈಲ್ವೇ ಸೇತುವೆಯೇ ಕೊಚ್ಚಿ ಹೋಗಿದೆ.

ಜಿಲ್ಲಯಲ್ಲಿ ಶುಕ್ರವಾರ ರಾತ್ರಿ ಜೋರಾದ ಮಳೆಯಾಗಿದ್ದು, ಪರಿಣಾಮ ಸಕಲೇಶಪುರ ತಾಲೂಕು ಎಡಕುಮೇರಿ ರೈಲು ಹಳಿಯ ಮೇಲೆ ಗುಡ್ಡ ಕುಸಿದಿದೆ. ಅಷ್ಟೇ ಅಲ್ಲದೇ ಬೆಂಗಳೂರು ಮಂಗಳೂರು ರೈಲ್ವೇ ಸಂಪರ್ಕದಲ್ಲಿ 50 ಕಡೆ ಗುಡ್ಡ ಕುಸಿತ ಉಂಟಾಗಿದೆ. ಇದರಿಂದ ಇನ್ನು ಒಂದು ತಿಂಗಳು ರೈಲು ಸಂಚಾರ ಅನುಮಾನವಾಗಿದೆ.

ಸದ್ಯಕ್ಕೆ ಸಕಲೇಶಪುರ ತಾಲೂಕು ಎಡಕುಮೇರಿ ಸುತ್ತಲು ರೈಲ್ವೇ ಸಿಬ್ಬಂದಿ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ. ತೆರವು ಕಾರ್ಯಾಚರಣೆಗೆ ಕಾರ್ಮಿಕರ ಕೊರತೆಯಿಂದ ಕಾರ್ಯ ವಿಳಂಬವಾಗುತ್ತಿದೆ. ಮಳೆಯಿಂದ ರೈಲ್ವೇ ಇಲಾಖೆಗೆ ಅಪಾರ ನಷ್ಟವಾಗಿದೆ. ಈಗಾಗಲೇ ಭಾರೀ ಮಳೆಯಿಂದ ಶಿರಾಡಿಘಾಟ್ ಸ್ಥಗಿತಗೊಂಡಿದ್ದು, ಪ್ರಯಾಣಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಕಳೆದ ನಾಲ್ಕು ದಿನಗಳಿಂದ ಕಾವೇರಿ ನದಿ ನೀರು ಅಪಾಯದ ಮಟ್ಟವನ್ನು ತಲುಪಿದೆ. ಪರಿಣಾಮ ಜಿಲ್ಲೆಯ ರಾಮನಾಥಪುರ ಪಟ್ಟಣದಲ್ಲಿ ಸಾಕಷ್ಟು ಅವಾಂತರಕ್ಕೆ ಕಾರಣವಾಗಿದೆ. ನೂರಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದ್ದು, ಕೆಲವು ಮನೆಗಳು ಕುಸಿದು ಬಿದ್ದಿವೆ. ಪಟ್ಟಣದಿಂದ ಮೈಸೂರು ಮತ್ತು ಮಡಿಕೇರಿಗಳಿಗೆ ಸಂಪರ್ಕ ರಸ್ತೆಗಳು ಜಲಾವೃತಗೊಂಡಿವೆ. ಪ್ರಸನ್ನ ಸುಬ್ರಮಣ್ಯ ದೇವಾಲಯದ ಬಳಿಯೂ ನೀರು ನುಗ್ಗಿದ್ದು, ಸದಾ ಭಕ್ತರಿಂದ ಇದ್ದ ಆಂಜನೇಯ ದೇವಾಲಯಗಳು ಮತ್ತು ರಾಮನಾಥಪುರ ದೇವಸ್ಥಾನಗಳು ಜಲಾವೃತಗೊಂಡಿವೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search