• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮಂಗಳೂರಿನಲ್ಲಿ ವರುಣ ದೇವನ ಪ್ರೀತ್ಯರ್ಥಕ್ಕೆ ಪರ್ಜನ್ಯ ಜಪ

Tulunadu News Posted On August 19, 2018


  • Share On Facebook
  • Tweet It

ಮಂಗಳೂರು, ಆಗಸ್ಟ್ 18: ಜಲಪ್ರಳಯದಲ್ಲಿ ಸಂತ್ರಸ್ತರಾದವರಿಗೆ ಸಾಂತ್ವನ ವರುಣ ದೇವರ ಪ್ರೀತ್ಯರ್ಥ ಮಂಗಳೂರಿನಲ್ಲಿ ಪರ್ಜನ್ಯ ಜಪ ನಡೆದಿದೆ. ನಗರದ ಕ್ರದಿ ದೇವಾಲಯದಲ್ಲಿ ಈ ಜಪ ನಡೆಸಲಾಗಿದೆ. ಕೇರಳ ಸೇರಿದಂತೆ ರಾಜ್ಯದ ಕೊಡಗು ಹಾಗು ಪಶ್ಚಿಮ ಘಟ್ಟ ತಪ್ಪಲಲ್ಲಿ ಅತಿವೃಷ್ಟಿಯ ಪರಿಣಾಮ ಉಂಟಾಗಿರುವ ಪ್ರಾಣ ಹಾನಿ ಹಾಗೂ ಸಂತ್ರಸ್ತರಾದವರ ಪರವಾಗಿ ಶ್ರೀ ಕ್ಷೇತ್ರ ಕದ್ರಿಯಲ್ಲಿ ಅಖಿಲ ಭಾರತ ಬ್ರಾಹ್ಮಣ ಒಕ್ಕೂಟ ವತಿಯಿಂದ ವರುಣ ದೇವರ ಪ್ರೀತ್ಯರ್ಥ ಪರ್ಜನ್ಯ ಜಪ, ರುದ್ರ ಪಾರಾಯಣ ವಿಷ್ಣುಸಹಸ್ರನಾಮ ಪಠಣ ನಡೆಸಲಾಯಿತು.

ಮಂಗಳೂರು ನಗರದ ಇತಿಹಾಸ ಪ್ರಸಿದ್ದ ಕದ್ರಿ ದೇವಳದ ಗಂಗಾ ತೀರ್ಥದಲ್ಲಿ ಪರ್ಜನ್ಯ ಜಪ ನಡೆಯಿತು. ಅರ್ಚಕರಾದ ಪ್ರಭಾಕರ ಅಡಿಗ, ರವಿ ಅಡಿಗ, ರಾಘವೇಂದ್ರ ಅಡಿಗರ ನೇತೃತ್ವದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ವಿಪ್ರ ಸಮಾಜ ಲ್ಯಾಂಡ್ ಲಿಂಕ್ಸ್, ರುದ್ರ ಸಮಿತಿ ಭಾರತಿ ಕಾಲೇಜು ನಂತೂರು, ಸುಬ್ರಹ್ಮಣ್ಯ ಸಭಾ ಹಾಗೂ ಪರಿಸರದ ವಿಪ್ರ ಸಮಾಜದ ಬಂಧುಗಳು ಮತ್ತು ಸಾರ್ವಜನಿಕರು ಪಾಲ್ಗೊಂಡರು.

ಭಾರಿ ಮಳೆ ಹಾಗೂ ಭೂ ಕುಸಿತದಿಂದಾಗಿ ಬೆಂಗಳೂರು-ಮಂಗಳೂರು ನಡುವೆ ಸುಮಾರು 50 ಕಡೆಗಳಲ್ಲಿ ರೈಲು ಹಳಿ ಸಂಪರ್ಕ ಕಡಿತಗೊಂಡಿದ್ದು, ತಿಂಗಳುಗಳ ಕಾಲ ಈ ಮಾರ್ಗದಲ್ಲಿ ರೈಲು ಸಂಚಾರ ಅನುಮಾನ ಎಂದು ರೈಲ್ವೆ ಮೂಲಗಳು ತಿಳಿಸಿವೆ. ಈಗಾಗಲೇ ಭಾರೀ ಮಳೆಯಿಂದ ಶಿರಾಡಿಘಾಟ್ ಸ್ಥಗಿತಗೊಂಡಿದ್ದು, ಪ್ರಯಾಣಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

  • Share On Facebook
  • Tweet It


- Advertisement -


Trending Now
ಉದಯನಿಧಿ ಮಾಡಿದ ಡ್ಯಾಮೇಜ್ ಸರಿಯಾಗಿಲ್ಲ!
Tulunadu News December 6, 2023
9 ಬಾರಿ ಅಂಬಾರಿ ಹೊತ್ತ ಅರ್ಜುನನಿಗೆ ಸ್ವಲ್ಪವೂ ಮಹತ್ವವಿಲ್ಲವೇ!
Tulunadu News December 6, 2023
Leave A Reply

  • Recent Posts

    • ಉದಯನಿಧಿ ಮಾಡಿದ ಡ್ಯಾಮೇಜ್ ಸರಿಯಾಗಿಲ್ಲ!
    • 9 ಬಾರಿ ಅಂಬಾರಿ ಹೊತ್ತ ಅರ್ಜುನನಿಗೆ ಸ್ವಲ್ಪವೂ ಮಹತ್ವವಿಲ್ಲವೇ!
    • ಊರಿನ ಬಹುತೇಕ ಜನ ಒಂದೇ ಬಿಲ್ಡಿಂಗ್ ನಲ್ಲಿ ವಾಸ!
    • ಇ.0.ಡಿ.ಯಾ ಮೈತ್ರಿಕೂಟದ ಸಭೆಗೆ ನಿತೀಶ್, ಅಖಿಲೇಶ್, ಮಮತಾ ಡೌಟ್!
    • #ಮೆಲೋಡಿ ಹ್ಯಾಶ್ ಟ್ಯಾಗ್ ಸಿಕ್ಕಾಪಟ್ಟೆ ವೈರಲ್!
    • ಜನವರಿ 21 ರ ಮೊದಲೇ ಅಯೋಧ್ಯೆಗೆ ಬಂದರೆ ಉತ್ತಮ ಎಂದು ಟ್ರಸ್ಟ್ ಮನವಿ!
    • ತೆಲಂಗಾಣ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಗೆದ್ದರೆ, ಕನುಗೋಳು ಹಿಡಿಯುವವರಿಲ್ಲ!
    • ಯುವಕರನ್ನು ಕಿಡ್ನಾಪ್ ಮಾಡಿ ಮದುವೆ ಮಾಡಿಸುವ ಗ್ಯಾಂಗ್ ಪಕ್ಡ್ವಾ!
    • ಡಚ್ ಯುವತಿಯ ಪ್ರೇಮಕ್ಕೆ ಬಿದ್ದ ಯುಪಿ ಯುವಕ, ಕಂಕಣಭಾಗ್ಯ!
    • ಪಾಕ್ ಕ್ರಿಕೆಟಿಗರ ಸ್ವಾಗತಕ್ಕೆ ಸಿಡ್ನಿ ವಿಮಾನ ನಿಲ್ದಾಣದಲ್ಲಿ ಯಾರೂ ಬಂದಿಲ್ಲ!
  • Popular Posts

    • 1
      ಉದಯನಿಧಿ ಮಾಡಿದ ಡ್ಯಾಮೇಜ್ ಸರಿಯಾಗಿಲ್ಲ!
    • 2
      9 ಬಾರಿ ಅಂಬಾರಿ ಹೊತ್ತ ಅರ್ಜುನನಿಗೆ ಸ್ವಲ್ಪವೂ ಮಹತ್ವವಿಲ್ಲವೇ!
    • 3
      ಊರಿನ ಬಹುತೇಕ ಜನ ಒಂದೇ ಬಿಲ್ಡಿಂಗ್ ನಲ್ಲಿ ವಾಸ!
    • 4
      ಇ.0.ಡಿ.ಯಾ ಮೈತ್ರಿಕೂಟದ ಸಭೆಗೆ ನಿತೀಶ್, ಅಖಿಲೇಶ್, ಮಮತಾ ಡೌಟ್!
    • 5
      #ಮೆಲೋಡಿ ಹ್ಯಾಶ್ ಟ್ಯಾಗ್ ಸಿಕ್ಕಾಪಟ್ಟೆ ವೈರಲ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search