• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಅತಿವೃಷ್ಟಿ ಹಾಗೂ ಗುಡ್ಡ ಕುಸಿತದಿಂದ ನಲುಗಿದ ಪ್ರದೇಶಕ್ಕೆ ಸದಾನಂದ ಗೌಡ, ನಳಿನ್ ಕುಮಾರ್ ಕಟೀಲ್ ಭೇಟಿ

Tulunadu News Posted On August 19, 2018
0


0
Shares
  • Share On Facebook
  • Tweet It

ಮಂಗಳೂರು: ಅತಿವೃಷ್ಟಿ ಹಾಗೂ ಗುಡ್ಡ ಕುಸಿತದಿಂದ ನಲುಗಿದ ಜೋಡುಪಾಳ ಪ್ರದೇಶಕ್ಕೆ ಇಂದು ಭಾನುವಾರ ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಹಾಗು ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿದ್ದಾರೆ. ಮಂಗಳೂರಿನಿಂದ ನೇರವಾಗಿ ಸುಳ್ಯಕ್ಕೆ ತೆರಳಿದ ಕೇಂದ್ರ ಸಚಿವ ಡಿ ವಿ ಸದಾನಂದ ಗೌಡ, ಸುಳ್ಯ ಪ್ರವಾಸಿ ಮಂದಿರದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಸ್ಥಳೀಯ ಶಾಸಕ ಅಂಗಾರ ಅವರನ್ನು ಭೇಟಿಮಾಡಿದರು.

ಭೇಟಿ ಸಂದರ್ಭದಲ್ಲಿ ನೆರೆ ಪೀಡಿತ ಪ್ರದೇಶಗಳ ಮಾಹಿತಿ ಪಡೆದರಲ್ಲದೇ ಜೋಡುಪಾಳ ಪ್ರದೇಶದಲ್ಲಿ ಉಂಟಾದ ಅನಾಹುತಗಳ ಬಗ್ಗೆ ಮಾಹಿತಿ ಕಲೆ ಹಾಕಿದರು.ನಂತರ ಜೋಡುಪಾಳ ಪ್ರದೇಶಕ್ಕೆ ತೆರಳಿ ಹಾನಿಗೊಂಡ ಪ್ರದೇಶದ ಪರಿಶೀಲನೆ ನಡೆಸಿದರು. ನಂತರ ಸಂಪಾಜೆ ನೆರೆಪೀಡಿತ ಪ್ರದೇಶದಲ್ಲಿ ರಚಿಸಲಾಗಿರುವ ನಿರಾಶ್ರಿತರ ಶಿಬಿರಕ್ಕೆ ತೆರಳಿದರು.

ಮನೆ, ಮಠ ಕಳೆದುಕೊಂಡು ಸಂತ್ರಸ್ತರಾಗಿರುವ 240 ಜನರಿಗೆ ಸಾಂತ್ವನ ಹೇಳಿ ಅವರ ಆರೋಗ್ಯ ವಿಚಾರಿಸಿದರು. ಈ ನಡುವೆ ಕೊಡಗಿನಲ್ಲಿ ಜಲಪ್ರಳಯ, ಪಶ್ಚಿಮ ಘಟ್ಟ ಬಾಯ್ದೆರೆಯುತ್ತಿವೆ. ಪಶ್ಚಿಮ ಘಟ್ಟಗಳ ತಪ್ಪಲು ಪ್ರದೇಶದಲ್ಲಿ ಜನರು ಭಯಗ್ರಸ್ಥರಾಗಿದ್ದಾರೆ. ಭಾರೀ ಮಳೆಯಿಂದಾಗಿ ಘಟ್ಟ ಪ್ರದೇಶದ ಉದ್ದಕ್ಕೂ ಭೂಮಿ ಬಿರುಕು ಬಿಡುತ್ತಿದೆ. ಕುದುರೆ ಮುಖ ಪ್ರದೇಶದಲ್ಲೂ ಭೂಕುಸಿತ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಜನರಲ್ಲಿ ಆತಂಕ ಮನೆಮಾಡಿದೆ.

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
  • Popular Posts

    • 1
      ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!

  • Privacy Policy
  • Contact
© Tulunadu Infomedia.

Press enter/return to begin your search