• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಅತಿವೃಷ್ಟಿ ಹಾಗೂ ಗುಡ್ಡ ಕುಸಿತದಿಂದ ನಲುಗಿದ ಪ್ರದೇಶಕ್ಕೆ ಸದಾನಂದ ಗೌಡ, ನಳಿನ್ ಕುಮಾರ್ ಕಟೀಲ್ ಭೇಟಿ

Tulunadu News Posted On August 19, 2018
0


0
Shares
  • Share On Facebook
  • Tweet It

ಮಂಗಳೂರು: ಅತಿವೃಷ್ಟಿ ಹಾಗೂ ಗುಡ್ಡ ಕುಸಿತದಿಂದ ನಲುಗಿದ ಜೋಡುಪಾಳ ಪ್ರದೇಶಕ್ಕೆ ಇಂದು ಭಾನುವಾರ ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಹಾಗು ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿದ್ದಾರೆ. ಮಂಗಳೂರಿನಿಂದ ನೇರವಾಗಿ ಸುಳ್ಯಕ್ಕೆ ತೆರಳಿದ ಕೇಂದ್ರ ಸಚಿವ ಡಿ ವಿ ಸದಾನಂದ ಗೌಡ, ಸುಳ್ಯ ಪ್ರವಾಸಿ ಮಂದಿರದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಸ್ಥಳೀಯ ಶಾಸಕ ಅಂಗಾರ ಅವರನ್ನು ಭೇಟಿಮಾಡಿದರು.

ಭೇಟಿ ಸಂದರ್ಭದಲ್ಲಿ ನೆರೆ ಪೀಡಿತ ಪ್ರದೇಶಗಳ ಮಾಹಿತಿ ಪಡೆದರಲ್ಲದೇ ಜೋಡುಪಾಳ ಪ್ರದೇಶದಲ್ಲಿ ಉಂಟಾದ ಅನಾಹುತಗಳ ಬಗ್ಗೆ ಮಾಹಿತಿ ಕಲೆ ಹಾಕಿದರು.ನಂತರ ಜೋಡುಪಾಳ ಪ್ರದೇಶಕ್ಕೆ ತೆರಳಿ ಹಾನಿಗೊಂಡ ಪ್ರದೇಶದ ಪರಿಶೀಲನೆ ನಡೆಸಿದರು. ನಂತರ ಸಂಪಾಜೆ ನೆರೆಪೀಡಿತ ಪ್ರದೇಶದಲ್ಲಿ ರಚಿಸಲಾಗಿರುವ ನಿರಾಶ್ರಿತರ ಶಿಬಿರಕ್ಕೆ ತೆರಳಿದರು.

ಮನೆ, ಮಠ ಕಳೆದುಕೊಂಡು ಸಂತ್ರಸ್ತರಾಗಿರುವ 240 ಜನರಿಗೆ ಸಾಂತ್ವನ ಹೇಳಿ ಅವರ ಆರೋಗ್ಯ ವಿಚಾರಿಸಿದರು. ಈ ನಡುವೆ ಕೊಡಗಿನಲ್ಲಿ ಜಲಪ್ರಳಯ, ಪಶ್ಚಿಮ ಘಟ್ಟ ಬಾಯ್ದೆರೆಯುತ್ತಿವೆ. ಪಶ್ಚಿಮ ಘಟ್ಟಗಳ ತಪ್ಪಲು ಪ್ರದೇಶದಲ್ಲಿ ಜನರು ಭಯಗ್ರಸ್ಥರಾಗಿದ್ದಾರೆ. ಭಾರೀ ಮಳೆಯಿಂದಾಗಿ ಘಟ್ಟ ಪ್ರದೇಶದ ಉದ್ದಕ್ಕೂ ಭೂಮಿ ಬಿರುಕು ಬಿಡುತ್ತಿದೆ. ಕುದುರೆ ಮುಖ ಪ್ರದೇಶದಲ್ಲೂ ಭೂಕುಸಿತ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಜನರಲ್ಲಿ ಆತಂಕ ಮನೆಮಾಡಿದೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search