• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಜೋಡುಪಾಳದಲ್ಲಿ ಅಪಾಯದಲ್ಲಿದ್ದ 700 ಕ್ಕೂ‌ ಹೆಚ್ಚು ಜನರ ರಕ್ಷಣೆ

Tulunadu News Posted On August 20, 2018
0


0
Shares
  • Share On Facebook
  • Tweet It

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಕೊಡಗಿನ ಜೋಡುಪಾಳದಲ್ಲಾದ ಜಲಪ್ರಳಯ ದುರಂತ ದ್ರಶ್ಯಗಳು ಒಂದೊಂದಾಗಿ ಬೆಳಕಿಗೆ ಬರುತ್ತಿದೆ. ಜೋಡುಪಾಳದಲ್ಲಿ ಅಪಾಯದಲ್ಲಿದ್ದ ಹಾಗು ಸಂತ್ರಸ್ತರಾದ 700 ಕ್ಕೂ‌ಹೆಚ್ಚು ಜನರ ರಕ್ಷಣೆ ಮಾಡಿ ಸುರಕ್ಷಿತ ಸ್ಥಳಕ್ಕೆ ಕರೆತರಲಾಗಿದೆ. ಜೋಡುಪಾಳದ ದುರಂತ ಮಾನವ ಸಂಬಂಧಗಳನ್ನೂ ತಟ್ಟುವ ಕೆಲ ಅಪರೂಪದ ಪ್ರಸಂಗಗಳಿಗೂ ಸಾಕ್ಷಿಯಾಗಿದೆ.

ಜೋಡುಪಾಳದ ಮನೆಯೊಂದರಲ್ಲಿ ಅನಾಥವಾಗಿ ಉಳಿದಿದ್ದ ಮುದ್ದಿನ ಸಾಕು ನಾಯಿಯನ್ನು ರಕ್ಷಣೆ ಮಾಡಲು ಯುವಕ ಸಾವು ಬದುಕಿನ ದಾರಿಯ ನಡುವೆ ಮಡಿಕೇರಿಯಿಂದ 15 ಕಿ.ಮೀ ನಡೆದುಕೊಂಡು ಬಂದು ನಾಯಿಯನ್ನು ರಕ್ಷಣೆ ಮಾಡಿದ್ದಾನೆ. ಕಿಶೋರ್ ಭರತ್ ಎಂಬ ಯುವಕ ಜೋಡುಪಾಳದ ನೆರೆ ಆವರಿಸಿದ ಮನೆಯಲ್ಲಿ ಕಳೆದ ಮೂರು ದಿನಗಳಿಂದ ಗೂಡಿನೊಳಗಿದ್ದ ತನ್ನ ಮುದ್ದಿನ ನಾಯಿ ಸ್ಯಾಂಡಿಯನ್ನು ಕಾಣಲು ಗುಡ್ಡ ಕುಸಿತದ ಪ್ರದೇಶಗಳ ನಡುವೆ ರಾತ್ರಿ ಹಗಲು ನಡೆದುಕೊಂಡು ಬಂದಿದ್ದಾನೆ. ಸ್ಯಾಂಡಿ ತನ್ನ ಪ್ರೀತಿಯ ಒಡೆಯ ಕಿಶೋರ್ ಭರತ್ ರನ್ನು ಕಂಡ ಕ್ಷಣ ಖುಷಿಯಾಗಿದ್ದು ಓಡೋಡಿ ಬಂದಿದೆ. ಈ ದೃಶ್ಯವನ್ನು ಕಂಡು ಎನ್‌ಡಿಆರ್‌ಎಫ್‌ ಸಿಬ್ಬಂದಿಗಳು ಸಂತಸ ಪಟ್ಟರು. ಒಡೆಯನ ಜೊತೆ ಸ್ಯಾಂಡಿ ಮಡಿಕೇರಿಗೆ ತೆರಳಿದೆ.

0
Shares
  • Share On Facebook
  • Tweet It




Trending Now
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
  • Popular Posts

    • 1
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search