• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಮುದ್ದಿನ ನಾಯಿ ರಕ್ಷಿಸಲು ಮಡಿಕೇರಿಯಿಂದ ನಡೆದುಕೊಂಡು ಬಂದ ಯುವಕ

Tulunadu News Posted On August 20, 2018
0


0
Shares
  • Share On Facebook
  • Tweet It

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗ ಕೊಡಗಿನ ಜೋಡುಪಾಳ, ಮೊಣ್ಣಂಗೇರಿ, ಮಾದೆನಾಡು ಸುತ್ತಮುತ್ತ ಸಂಭವಿಸಿದ ಜಲಪ್ರಳಯ ಹಾಗು ಭಾರೀ ಭೂಕುಸಿತದಲ್ಲಿ ಸಂಭವಿಸಿದ ದುರಂತ ದೃಶ್ಯಗಳು ಒಂದೊಂದಾಗಿ ಹೊರ ಜಗತ್ತಿಗೆ ಗೋಚರಿಸುತ್ತಿವೆ. ಜೋಳುಪಾಳ , ಮೊಣ್ಣಂಗೇರಿ, ಮಾದೆನಾಡು ಪ್ರದೇಶದಲ್ಲಿ ಸಾವಿರಕ್ಕೂ ಹೆಚ್ಚು ಮಂದಿ ಮನೆಮಠ ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ಅಪಾಯದಲ್ಲಿದ್ದವರನ್ನು ರಕ್ಷಣೆ ಮಾಡಿ ಸುರಕ್ಷಿತ ಸ್ಥಳಕ್ಕೆ ಕರೆತರಲಾಗಿದೆ.

ಜೋಡುಪಾಳದ ದುರಂತ ಮಾನವನ ಸಂಬಂಧಗಳನ್ನೂ ತಟ್ಟುವ ಕೆಲ ಅಪರೂಪದ ಪ್ರಸಂಗಗಳಿಗೂ ಸಾಕ್ಷಿಯಾಗಿದೆ. ಜೋಡುಪಾಳದ ಮನೆಯೊಂದರಲ್ಲಿ ಅನಾಥವಾಗಿ ಉಳಿದಿದ್ದ ಮುದ್ದಿನ ಸಾಕು ನಾಯಿಯನ್ನು ರಕ್ಷಣೆ ಮಾಡಲು ಯುವಕ ಸಾವು ಬದುಕಿನ ದಾರಿಯ ನಡುವೆ ಮಡಿಕೇರಿಯಿಂದ 15 ಕೀ.ಮೀ ನಡೆದುಕೊಂಡು ಬಂದು ನಾಯಿಯನ್ನು ರಕ್ಷಣೆ ಮಾಡಿದ್ದಾನೆ. ಆ ಯುವಕನ ಹೆಸರು ಜೋಡುಪಾಳದ ಕಿಶೋರ್ ಭರತ್. ಆಗಸ್ಟ್ 17 ರಂದು ಸಂಭವಿಸಿದ ಅತಿವೃಷ್ಟಿ ಹಾಗು ಭಾರೀ ಭೂಕುಸಿತದಿಂದ ಕಿಶೋರ್ ಭರತ್ ಅವರ ಮನೆ ಅಪಾಯಕ್ಕೆ ಸಿಲುಕಿತ್ತು. ಆದರೆ ಕಿಶೋರ್ ಕುಟುಂಬ ಆ ಸಂದರ್ಭದಲ್ಲಿ ಜೋಡುಪಾಳದಲ್ಲಿರಲ್ಲಿಲ್ಲ.

ಆದರೆ ಜೋಡುಪಾಳದ ನೆರೆ ಆವರಿಸಿದ ಮನೆಯಲ್ಲಿ ಕಳೆದ ಮೂರು ದಿನಗಳಿಂದ ಗೂಡಿನೊಳಗೆ ಕಿಶೋರ್ ಭರತ್ ಅವರ ಮುದ್ದಿನ ನಾಯಿ ಸ್ಯಾಂಡಿ ಸಿಲುಕಿಕೊಂಡಿತ್ತು. ತನ್ನ ಮುದ್ದಿನ ನಾಯಿ ಸ್ಯಾಂಡಿಯ ರಕ್ಷಣೆಗೆ ಗುಡ್ಡ ಕುಸಿತದ ಪ್ರದೇಶಗಳ ನಡುವೆ ರಾತ್ರಿ ಹಗಲು ನಡೆದುಕೊಂಡು ಬಂದಿದ್ದರು ಕಿಶೋರ್ ಭರತ್. ಸ್ಯಾಂಡಿ ತನ್ನ ಪ್ರೀತಿಯ ಒಡೆಯ ಕಿಶೋರ್ ಭರತ್ ರನ್ನು ಕಂಡ ಕ್ಷಣವೇ ಖುಷಿಯಾಗಿದೆ. ತನ್ನ ರಕ್ಷಣೆಗೆ ಬಂದ ಕಿಶೋರ್ ಅವರನ್ನು ಕಂಡ ಕೂಡಲೇ ಸ್ಯಾಂಡಿಯ ಹರ್ಷದ ತೋರ್ಪಡಿಕೆ ಅಕ್ಷರಗಳಲ್ಲಿ ವಿವರಿಸಲು ಸಾಧ್ಯವಿಲ್ಲ. ಅದನ್ನು ನೋಡಿಯೇ ಆನಂದಿಸಬೇಕು. ಈಗ ಸ್ಯಾಂಡಿ ತನ್ನ ಪ್ರೀತಿಯ ಒಡೆಯ ಕಿಶೋರ್ ಭರತ್ ಜೊತೆ ಸುರಕ್ಷಿತವಾಗಿ ಮರಳಿ ಮಡಿಕೇರಿಗೆ ತೆರಳಿದೆ

0
Shares
  • Share On Facebook
  • Tweet It




Trending Now
20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
Tulunadu News July 5, 2025
20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
Tulunadu News July 5, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು
    • ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳೆಗೆ ಪಟ್ಟ?
    • ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
  • Popular Posts

    • 1
      20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 2
      20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • 3
      ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • 4
      ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • 5
      ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು

  • Privacy Policy
  • Contact
© Tulunadu Infomedia.

Press enter/return to begin your search