• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಮುದ್ದಿನ ನಾಯಿ ರಕ್ಷಿಸಲು ಮಡಿಕೇರಿಯಿಂದ ನಡೆದುಕೊಂಡು ಬಂದ ಯುವಕ

Tulunadu News Posted On August 20, 2018
0


0
Shares
  • Share On Facebook
  • Tweet It

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗ ಕೊಡಗಿನ ಜೋಡುಪಾಳ, ಮೊಣ್ಣಂಗೇರಿ, ಮಾದೆನಾಡು ಸುತ್ತಮುತ್ತ ಸಂಭವಿಸಿದ ಜಲಪ್ರಳಯ ಹಾಗು ಭಾರೀ ಭೂಕುಸಿತದಲ್ಲಿ ಸಂಭವಿಸಿದ ದುರಂತ ದೃಶ್ಯಗಳು ಒಂದೊಂದಾಗಿ ಹೊರ ಜಗತ್ತಿಗೆ ಗೋಚರಿಸುತ್ತಿವೆ. ಜೋಳುಪಾಳ , ಮೊಣ್ಣಂಗೇರಿ, ಮಾದೆನಾಡು ಪ್ರದೇಶದಲ್ಲಿ ಸಾವಿರಕ್ಕೂ ಹೆಚ್ಚು ಮಂದಿ ಮನೆಮಠ ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ಅಪಾಯದಲ್ಲಿದ್ದವರನ್ನು ರಕ್ಷಣೆ ಮಾಡಿ ಸುರಕ್ಷಿತ ಸ್ಥಳಕ್ಕೆ ಕರೆತರಲಾಗಿದೆ.

ಜೋಡುಪಾಳದ ದುರಂತ ಮಾನವನ ಸಂಬಂಧಗಳನ್ನೂ ತಟ್ಟುವ ಕೆಲ ಅಪರೂಪದ ಪ್ರಸಂಗಗಳಿಗೂ ಸಾಕ್ಷಿಯಾಗಿದೆ. ಜೋಡುಪಾಳದ ಮನೆಯೊಂದರಲ್ಲಿ ಅನಾಥವಾಗಿ ಉಳಿದಿದ್ದ ಮುದ್ದಿನ ಸಾಕು ನಾಯಿಯನ್ನು ರಕ್ಷಣೆ ಮಾಡಲು ಯುವಕ ಸಾವು ಬದುಕಿನ ದಾರಿಯ ನಡುವೆ ಮಡಿಕೇರಿಯಿಂದ 15 ಕೀ.ಮೀ ನಡೆದುಕೊಂಡು ಬಂದು ನಾಯಿಯನ್ನು ರಕ್ಷಣೆ ಮಾಡಿದ್ದಾನೆ. ಆ ಯುವಕನ ಹೆಸರು ಜೋಡುಪಾಳದ ಕಿಶೋರ್ ಭರತ್. ಆಗಸ್ಟ್ 17 ರಂದು ಸಂಭವಿಸಿದ ಅತಿವೃಷ್ಟಿ ಹಾಗು ಭಾರೀ ಭೂಕುಸಿತದಿಂದ ಕಿಶೋರ್ ಭರತ್ ಅವರ ಮನೆ ಅಪಾಯಕ್ಕೆ ಸಿಲುಕಿತ್ತು. ಆದರೆ ಕಿಶೋರ್ ಕುಟುಂಬ ಆ ಸಂದರ್ಭದಲ್ಲಿ ಜೋಡುಪಾಳದಲ್ಲಿರಲ್ಲಿಲ್ಲ.

ಆದರೆ ಜೋಡುಪಾಳದ ನೆರೆ ಆವರಿಸಿದ ಮನೆಯಲ್ಲಿ ಕಳೆದ ಮೂರು ದಿನಗಳಿಂದ ಗೂಡಿನೊಳಗೆ ಕಿಶೋರ್ ಭರತ್ ಅವರ ಮುದ್ದಿನ ನಾಯಿ ಸ್ಯಾಂಡಿ ಸಿಲುಕಿಕೊಂಡಿತ್ತು. ತನ್ನ ಮುದ್ದಿನ ನಾಯಿ ಸ್ಯಾಂಡಿಯ ರಕ್ಷಣೆಗೆ ಗುಡ್ಡ ಕುಸಿತದ ಪ್ರದೇಶಗಳ ನಡುವೆ ರಾತ್ರಿ ಹಗಲು ನಡೆದುಕೊಂಡು ಬಂದಿದ್ದರು ಕಿಶೋರ್ ಭರತ್. ಸ್ಯಾಂಡಿ ತನ್ನ ಪ್ರೀತಿಯ ಒಡೆಯ ಕಿಶೋರ್ ಭರತ್ ರನ್ನು ಕಂಡ ಕ್ಷಣವೇ ಖುಷಿಯಾಗಿದೆ. ತನ್ನ ರಕ್ಷಣೆಗೆ ಬಂದ ಕಿಶೋರ್ ಅವರನ್ನು ಕಂಡ ಕೂಡಲೇ ಸ್ಯಾಂಡಿಯ ಹರ್ಷದ ತೋರ್ಪಡಿಕೆ ಅಕ್ಷರಗಳಲ್ಲಿ ವಿವರಿಸಲು ಸಾಧ್ಯವಿಲ್ಲ. ಅದನ್ನು ನೋಡಿಯೇ ಆನಂದಿಸಬೇಕು. ಈಗ ಸ್ಯಾಂಡಿ ತನ್ನ ಪ್ರೀತಿಯ ಒಡೆಯ ಕಿಶೋರ್ ಭರತ್ ಜೊತೆ ಸುರಕ್ಷಿತವಾಗಿ ಮರಳಿ ಮಡಿಕೇರಿಗೆ ತೆರಳಿದೆ

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search