• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮದೆನಾಡುಗಳಲ್ಲಿ ಸಂಭವಿಸಿದ ಜಲಪ್ರಳಯ; ಎದುರಾಗುತ್ತಿದೆ ಪಶ್ಚಿಮ ಘಟ್ಟದ ತಪ್ಪಲು ಕುಸಿಯುವ ಭೀತಿ!

Tulunadu News Posted On August 22, 2018


  • Share On Facebook
  • Tweet It

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗ ಕೊಡಗಿನ ಜೋಡುಪಾಳ ಹಾಗು ಮದೆನಾಡುಗಳಲ್ಲಿ ಸಂಭವಿಸಿದ ಜಲಪ್ರಳಯ ನಂತರ ಸುಳ್ಯ ಗಡಿಭಾಗಗಳಲ್ಲೂ ಗುಡ್ಡಗಳು ಕುಸಿಯುವ ಆತಂಕ ವ್ಯಕ್ತವಾಗುತ್ತಿವೆ . ಪಶ್ಚಿಮ ಘಟ್ಟದ ತಪ್ಪಲು ಕುಸಿಯುವ ಭೀತಿ ಈಗ ಎದುರಾಗುತ್ತಿದೆ.  ಸುಳ್ಯದ ಗಡಿಭಾಗ ಕೂಜುಮಲೆ, ಕಲ್ಮಕಾರು ಅರಣ್ಯದ ಬೆಟ್ಟ ಪ್ರದೇಶದಲ್ಲಿ ಭೂಮಿ ಬಿರುಕು ಬಿಟ್ಟಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಭಾಗದಲ್ಲಿ ನೆಲೆಸಿರುವ ಜನರಲ್ಲಿ ಆತಂಕ ಅರಂಭವಾಗಿದೆ.

ಕೆಲ ದಿನಗಳ ಹಿಂದೆ ಇಲ್ಲಿಗೆ ಸಮೀಪದ ಮಾಯಿಲ ಕೋಟೆ ಎಂಬಲ್ಲಿ ಭೂಮಿ ಅಡಿ ಭಾರೀ ಶಬ್ದ ಕೇಳಿ ಬಂದ ಹಿನ್ನೆಲೆಯಲ್ಲಿ ಸ್ಥಳೀಯ ಜನರು ಭಯದಿಂದ ಮನೆ ತೊರೆದು ಸುರಕ್ಷಿತ ಪ್ರದೇಶಕ್ಕೆ ತೆರಳಿದ್ದರು. ಈಗಾಗಲೇ ಬೆಳ್ತಂಗಡಿ ತಾಲೂಕಿನ ಸವಣಾಲು ಗ್ರಾಮದ ಜನರಲ್ಲಿ ಆತಂಕ ಸೃಷ್ಟಿಯಾಗಿದ್ದು, ಇಲ್ಲಿಯ ಬಾಡಡ್ಕ ಸುಂದರ ಮಲೆಕುಡಿಯರವರ ಮನೆಯ ಹಿಂಬದಿಯ ಗುಡ್ಡ ಸುಮಾರು 1 ಕಿ.ಮೀ. ದೂರ ಬಿರುಕು ಬಿಟ್ಟಿದೆ. ಗುಡ್ಡ ಜರಿದರೆ ಸುಂದರ ಮಲೆಕುಡಿಯರ ಮನೆ ಸಹಿತ ನೂರಾರು ಎಕರೆ ಕೃಷಿ ಜಮೀನು ಸಂಪೂರ್ಣ ನಾಶವಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

ಈ ನಡುವೆ ಸುಬ್ರಹ್ಮಣ್ಯ ಸಮೀಪದ ಅರಣ್ಯ ಪ್ರದೇಶ ಗುತ್ತಿಗಾರಿನ ದೇವಚಳ್ಳ, ಕರಂಗಲ್ಲು ಬೆಟ್ಟದಿಂದ ಭಾರೀ ಪ್ರಮಾಣದಲ್ಲಿ ನೀರು ಹರಿಯಲಾರಂಭಿಸಿದೆ. ಬೆಟ್ಟದ ಮೇಲಿಂದ ಭಾರೀ ಪ್ರಮಾಣದಲ್ಲಿ ಕಲ್ಲು ಮಣ್ಣು ಹರಿದು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಬೆಟ್ಟ ಕುಸಿಯುವ ಭೀತಿ ಎದುರಾಗಿದ್ದು, ಬೆಟ್ಟದ ತಪ್ಪಲಿನಲ್ಲಿರುವ ಹತ್ತಾರು ಎಕರೆ ಅಡಿಕೆ, ರಬ್ಬರ್ ತೋಟ ನಾಶವಾಗುವ ಆತಂಕ ಕಾಡಲಾರಂಭಿಸಿದೆ. ಪರಿಣಾಮ ದೇವಚಳ್ಳ, ಕರಂಗಲ್ಲು ಪ್ರದೇಶದಲ್ಲಿ ವಾಸಿಸುವ ಜನರಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ.

  • Share On Facebook
  • Tweet It


- Advertisement -


Trending Now
ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
Tulunadu News February 3, 2023
ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
Tulunadu News February 2, 2023
Leave A Reply

  • Recent Posts

    • ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
    • ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
    • ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!
    • ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?
    • ವೆನಲಾಕ್ ನಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಯಾಕಿಲ್ಲ!!
    • ನಕಲಿ ಕಾಂತಾರಗಳು ನಮ್ಮ ನಂಬಿಕೆಗೆ ಪೆಟ್ಟು ಕೊಡಬಾರದು!!
  • Popular Posts

    • 1
      ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
    • 2
      ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
    • 3
      ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • 4
      ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • 5
      ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search