• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಮದೆನಾಡುಗಳಲ್ಲಿ ಸಂಭವಿಸಿದ ಜಲಪ್ರಳಯ; ಎದುರಾಗುತ್ತಿದೆ ಪಶ್ಚಿಮ ಘಟ್ಟದ ತಪ್ಪಲು ಕುಸಿಯುವ ಭೀತಿ!

Tulunadu News Posted On August 22, 2018
0


0
Shares
  • Share On Facebook
  • Tweet It

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗ ಕೊಡಗಿನ ಜೋಡುಪಾಳ ಹಾಗು ಮದೆನಾಡುಗಳಲ್ಲಿ ಸಂಭವಿಸಿದ ಜಲಪ್ರಳಯ ನಂತರ ಸುಳ್ಯ ಗಡಿಭಾಗಗಳಲ್ಲೂ ಗುಡ್ಡಗಳು ಕುಸಿಯುವ ಆತಂಕ ವ್ಯಕ್ತವಾಗುತ್ತಿವೆ . ಪಶ್ಚಿಮ ಘಟ್ಟದ ತಪ್ಪಲು ಕುಸಿಯುವ ಭೀತಿ ಈಗ ಎದುರಾಗುತ್ತಿದೆ.  ಸುಳ್ಯದ ಗಡಿಭಾಗ ಕೂಜುಮಲೆ, ಕಲ್ಮಕಾರು ಅರಣ್ಯದ ಬೆಟ್ಟ ಪ್ರದೇಶದಲ್ಲಿ ಭೂಮಿ ಬಿರುಕು ಬಿಟ್ಟಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಭಾಗದಲ್ಲಿ ನೆಲೆಸಿರುವ ಜನರಲ್ಲಿ ಆತಂಕ ಅರಂಭವಾಗಿದೆ.

ಕೆಲ ದಿನಗಳ ಹಿಂದೆ ಇಲ್ಲಿಗೆ ಸಮೀಪದ ಮಾಯಿಲ ಕೋಟೆ ಎಂಬಲ್ಲಿ ಭೂಮಿ ಅಡಿ ಭಾರೀ ಶಬ್ದ ಕೇಳಿ ಬಂದ ಹಿನ್ನೆಲೆಯಲ್ಲಿ ಸ್ಥಳೀಯ ಜನರು ಭಯದಿಂದ ಮನೆ ತೊರೆದು ಸುರಕ್ಷಿತ ಪ್ರದೇಶಕ್ಕೆ ತೆರಳಿದ್ದರು. ಈಗಾಗಲೇ ಬೆಳ್ತಂಗಡಿ ತಾಲೂಕಿನ ಸವಣಾಲು ಗ್ರಾಮದ ಜನರಲ್ಲಿ ಆತಂಕ ಸೃಷ್ಟಿಯಾಗಿದ್ದು, ಇಲ್ಲಿಯ ಬಾಡಡ್ಕ ಸುಂದರ ಮಲೆಕುಡಿಯರವರ ಮನೆಯ ಹಿಂಬದಿಯ ಗುಡ್ಡ ಸುಮಾರು 1 ಕಿ.ಮೀ. ದೂರ ಬಿರುಕು ಬಿಟ್ಟಿದೆ. ಗುಡ್ಡ ಜರಿದರೆ ಸುಂದರ ಮಲೆಕುಡಿಯರ ಮನೆ ಸಹಿತ ನೂರಾರು ಎಕರೆ ಕೃಷಿ ಜಮೀನು ಸಂಪೂರ್ಣ ನಾಶವಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

ಈ ನಡುವೆ ಸುಬ್ರಹ್ಮಣ್ಯ ಸಮೀಪದ ಅರಣ್ಯ ಪ್ರದೇಶ ಗುತ್ತಿಗಾರಿನ ದೇವಚಳ್ಳ, ಕರಂಗಲ್ಲು ಬೆಟ್ಟದಿಂದ ಭಾರೀ ಪ್ರಮಾಣದಲ್ಲಿ ನೀರು ಹರಿಯಲಾರಂಭಿಸಿದೆ. ಬೆಟ್ಟದ ಮೇಲಿಂದ ಭಾರೀ ಪ್ರಮಾಣದಲ್ಲಿ ಕಲ್ಲು ಮಣ್ಣು ಹರಿದು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಬೆಟ್ಟ ಕುಸಿಯುವ ಭೀತಿ ಎದುರಾಗಿದ್ದು, ಬೆಟ್ಟದ ತಪ್ಪಲಿನಲ್ಲಿರುವ ಹತ್ತಾರು ಎಕರೆ ಅಡಿಕೆ, ರಬ್ಬರ್ ತೋಟ ನಾಶವಾಗುವ ಆತಂಕ ಕಾಡಲಾರಂಭಿಸಿದೆ. ಪರಿಣಾಮ ದೇವಚಳ್ಳ, ಕರಂಗಲ್ಲು ಪ್ರದೇಶದಲ್ಲಿ ವಾಸಿಸುವ ಜನರಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ.

0
Shares
  • Share On Facebook
  • Tweet It




Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
  • Popular Posts

    • 1
      ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!

  • Privacy Policy
  • Contact
© Tulunadu Infomedia.

Press enter/return to begin your search