• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮದೆನಾಡುಗಳಲ್ಲಿ ಸಂಭವಿಸಿದ ಜಲಪ್ರಳಯ; ಎದುರಾಗುತ್ತಿದೆ ಪಶ್ಚಿಮ ಘಟ್ಟದ ತಪ್ಪಲು ಕುಸಿಯುವ ಭೀತಿ!

Tulunadu News Posted On August 22, 2018


  • Share On Facebook
  • Tweet It

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗ ಕೊಡಗಿನ ಜೋಡುಪಾಳ ಹಾಗು ಮದೆನಾಡುಗಳಲ್ಲಿ ಸಂಭವಿಸಿದ ಜಲಪ್ರಳಯ ನಂತರ ಸುಳ್ಯ ಗಡಿಭಾಗಗಳಲ್ಲೂ ಗುಡ್ಡಗಳು ಕುಸಿಯುವ ಆತಂಕ ವ್ಯಕ್ತವಾಗುತ್ತಿವೆ . ಪಶ್ಚಿಮ ಘಟ್ಟದ ತಪ್ಪಲು ಕುಸಿಯುವ ಭೀತಿ ಈಗ ಎದುರಾಗುತ್ತಿದೆ.  ಸುಳ್ಯದ ಗಡಿಭಾಗ ಕೂಜುಮಲೆ, ಕಲ್ಮಕಾರು ಅರಣ್ಯದ ಬೆಟ್ಟ ಪ್ರದೇಶದಲ್ಲಿ ಭೂಮಿ ಬಿರುಕು ಬಿಟ್ಟಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಭಾಗದಲ್ಲಿ ನೆಲೆಸಿರುವ ಜನರಲ್ಲಿ ಆತಂಕ ಅರಂಭವಾಗಿದೆ.

ಕೆಲ ದಿನಗಳ ಹಿಂದೆ ಇಲ್ಲಿಗೆ ಸಮೀಪದ ಮಾಯಿಲ ಕೋಟೆ ಎಂಬಲ್ಲಿ ಭೂಮಿ ಅಡಿ ಭಾರೀ ಶಬ್ದ ಕೇಳಿ ಬಂದ ಹಿನ್ನೆಲೆಯಲ್ಲಿ ಸ್ಥಳೀಯ ಜನರು ಭಯದಿಂದ ಮನೆ ತೊರೆದು ಸುರಕ್ಷಿತ ಪ್ರದೇಶಕ್ಕೆ ತೆರಳಿದ್ದರು. ಈಗಾಗಲೇ ಬೆಳ್ತಂಗಡಿ ತಾಲೂಕಿನ ಸವಣಾಲು ಗ್ರಾಮದ ಜನರಲ್ಲಿ ಆತಂಕ ಸೃಷ್ಟಿಯಾಗಿದ್ದು, ಇಲ್ಲಿಯ ಬಾಡಡ್ಕ ಸುಂದರ ಮಲೆಕುಡಿಯರವರ ಮನೆಯ ಹಿಂಬದಿಯ ಗುಡ್ಡ ಸುಮಾರು 1 ಕಿ.ಮೀ. ದೂರ ಬಿರುಕು ಬಿಟ್ಟಿದೆ. ಗುಡ್ಡ ಜರಿದರೆ ಸುಂದರ ಮಲೆಕುಡಿಯರ ಮನೆ ಸಹಿತ ನೂರಾರು ಎಕರೆ ಕೃಷಿ ಜಮೀನು ಸಂಪೂರ್ಣ ನಾಶವಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

ಈ ನಡುವೆ ಸುಬ್ರಹ್ಮಣ್ಯ ಸಮೀಪದ ಅರಣ್ಯ ಪ್ರದೇಶ ಗುತ್ತಿಗಾರಿನ ದೇವಚಳ್ಳ, ಕರಂಗಲ್ಲು ಬೆಟ್ಟದಿಂದ ಭಾರೀ ಪ್ರಮಾಣದಲ್ಲಿ ನೀರು ಹರಿಯಲಾರಂಭಿಸಿದೆ. ಬೆಟ್ಟದ ಮೇಲಿಂದ ಭಾರೀ ಪ್ರಮಾಣದಲ್ಲಿ ಕಲ್ಲು ಮಣ್ಣು ಹರಿದು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಬೆಟ್ಟ ಕುಸಿಯುವ ಭೀತಿ ಎದುರಾಗಿದ್ದು, ಬೆಟ್ಟದ ತಪ್ಪಲಿನಲ್ಲಿರುವ ಹತ್ತಾರು ಎಕರೆ ಅಡಿಕೆ, ರಬ್ಬರ್ ತೋಟ ನಾಶವಾಗುವ ಆತಂಕ ಕಾಡಲಾರಂಭಿಸಿದೆ. ಪರಿಣಾಮ ದೇವಚಳ್ಳ, ಕರಂಗಲ್ಲು ಪ್ರದೇಶದಲ್ಲಿ ವಾಸಿಸುವ ಜನರಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ.

  • Share On Facebook
  • Tweet It


- Advertisement -


Trending Now
ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
Tulunadu News May 31, 2023
ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
Tulunadu News May 30, 2023
Leave A Reply

  • Recent Posts

    • ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
    • ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
    • ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!
    • ಮೇ ಮಳೆ ತೆರೆದಿಟ್ಟಿತ್ತು ಹಣೆಬರಹ!
    • ಚುನಾವಣೆ ಪ್ರಜಾಪ್ರಭುತ್ವದ ಹಬ್ಬ ಬೆಟ್ಟಿಂಗ್ ನವರಿಗೆ!!
    • ಕೇರಳ ಸ್ಟೋರಿ ಮೇ ಮೇರಾ ಅಬ್ದುಲ್ಲಾ ಅಲಗ್ ಹೇ?
    • ಪ್ರಣಾಳಿಕೆಯಲ್ಲಿ ಪಾರ್ಕಿಂಗ್ ಸಮಸ್ಯೆ ಪರಿಹರಿಸಲು ಮೂರು ಸೂತ್ರ!!
    • ಫೇಕ್ ನ್ಯೂಸ್ ಜಮಾನದಲ್ಲಿ ಸಂತೋಷ್ ವಿರುದ್ಧ ಷಡ್ಯಂತ್ರ!!
  • Popular Posts

    • 1
      ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
    • 2
      ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • 3
      ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
    • 4
      ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • 5
      ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search