• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಬೆಟ್ಟ ಕುಸಿದು ಅವಾಂತರ ಸೃಷ್ಟಿ; ಕೂಜುಮಲೆ, ಕಲ್ಮಕಾರಿನಲ್ಲಿ ನಡೆದ ದುರಂತವನ್ನು ಜಿಲ್ಲಾಡಳಿತ ಮುಚ್ಚಿಟ್ಟಿದ್ದೇಕೆ?

Tulunadu News Posted On August 22, 2018
0


0
Shares
  • Share On Facebook
  • Tweet It

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗ ಕೊಡಗಿನ ಜೋಡುಪಾಳ ಮತ್ತು ಮದೆನಾಡಿನಲ್ಲಿ ಸಂಭವಿಸಿದ ಭೂ ಕುಸಿತಕ್ಕೆ ಸಿಲುಕಿ ಅಪಾಯದಲ್ಲಿದ್ದ ಎಲ್ಲರನ್ನು ಎನ್ ಡಿ ಆರ್ ಎಫ್ ಹಾಗು ದಕ್ಷಿಣ ಕನ್ನಡ ಪೊಲೀಸರ ತಂಡ ರಕ್ಷಿಸಿ ಸುರಕ್ಷಿತ ಪ್ರದೇಶಗಳಿಗೆ ಸಾಗಿಸಿದೆ.  ಈ ದುರಂತದಲ್ಲಿ ಮನೆ ಕಳೆದುಕೊಂಡ 800ಕ್ಕೂ ಹೆಚ್ಚು ಜನರನ್ನು ಸಂಪಾಜೆ, ಅರಂತೋಡಿನ ಸಂತ್ರಸ್ತರ ಶಿಬಿರದಲ್ಲಿ ಇರಿಸಲಾಗಿದೆ. ಈ ನಡುವೆ ಜೋಡುಪಾಳ ಮತ್ತು ಮದೆನಾಡಿನಲ್ಲಿ ಭೂಕುಸಿತಕ್ಕಿಂತಲೂ ದೊಡ್ಡ ಪ್ರಮಾಣದ ದುರಂತಗಳು ಸಂಭವಿಸಿರುವುದು ಈಗ ಒಂದೊಂದಾಗಿ ಬೆಳಕಿಗೆ ಬರುತ್ತಿವೆ. ಮತ್ತೊಂದು ಕಡೆ ಬೃಹತ್ ಬೆಟ್ಟ ಕುಸಿದು ಅವಾಂತರ ಸೃಷ್ಟಿಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಕಟ್ಟಕಡೆಯ ಗ್ರಾಮ ಸುಳ್ಯ ತಾಲೂಕಿನ ಕಲ್ಮಕಾರಿನ ಬಳಿಯಿರುವ ಕಡಮಕಲ್ ಎಸ್ಟೇಟ್ ವ್ಯಾಪ್ತಿಯಲ್ಲಿ ಬೃಹತ್ ಬೆಟ್ಟ ಕುಸಿದಿರುವುದು ಬೆಳಕಿಗೆ ಬಂದಿದೆ. ಎಸ್ಟೇಟ್ ಒಳಗಿರುವ ಹೊಳೆಯ ಸೇತುವೆ ಕೊಚ್ಚಿ ಹೋಗಿದ್ದು, ಭಾರೀ ಗಾತ್ರದ ಬೃಹತ್ ಮರಗಳೂ ಛಿದ್ರಗೊಂಡು ಬಿದ್ದಿವೆ. ಮೂರು ದಿನಗಳ ಹಿಂದೆ ಈ ಭಾಗದಲ್ಲಿ ಭಾರೀ ಸ್ಫೋಟ ಸಂಭವಿಸಿದ ಸದ್ದು ಕೇಳಿಸಿತ್ತು. ಇದರಿಂದ ಎಸ್ಟೇಟ್ ಕಾರ್ಮಿಕರು ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ನಿವಾಸಿಗಳು ಭಯಭೀತರಾಗಿದ್ದರು. ಹಾಗೆಯೇ ಕೂಜುಮಲೆ ಅರಣ್ಯ ವ್ಯಾಪ್ತಿಯಲ್ಲಿ ಭೂಮಿ ಬಿರುಕು ಬಿಟ್ಟಿರುವುದು ಗೋಚರಿಸಿದೆ. ಅಲ್ಲೇ ಆಸುಪಾಸಿನ ಕಲ್ಮಕಾರು, ಬಾಳುಗೋಡು ಗ್ರಾಮಗಳ 30ಕ್ಕೂ ಹೆಚ್ಚು ಮನೆಗಳ ನಿವಾಸಿಗಳನ್ನು ಸ್ಥಳಾಂತರ ಮಾಡಲಾಗಿದೆ. ಅಲ್ಲದೆ, ಎಸ್ಟೇಟ್ ನಲ್ಲಿರುವ 40ಕ್ಕೂ ಹೆಚ್ಚು ತಮಿಳು ಕಾರ್ಮಿಕರು ಭಯದಿಂದ ಸ್ಥಳ ಬಿಟ್ಟು ಓಡಿಹೋಗಿದ್ದಾರೆ.

ಪಶ್ಚಿಮ ಘಟ್ಟ ಸ್ಫೋಟಗೊಂಡು ಇಡೀ ಪ್ರದೇಶವೇ ನೀರಿನಲ್ಲಿ ಕೊಚ್ಚಿಕೊಂಡು ಹೋಗುವ ಭಯದಿಂದ ಕಾರ್ಮಿಕರು ಓಡಿದ್ದಾರೆ. ಇಲ್ಲಿ ಈ ಪ್ರಮಾಣದ ಭಾರೀ ದುರಂತ ನಡೆದಿದ್ದರೂ ಜನಸಂಚಾರ ವಿರಳವಾಗಿರುವ ಕಾರಣ ಘಟನೆಯನ್ನು ಜಿಲ್ಲಾಡಳಿತ ಮುಚ್ಚಿಟ್ಟಿತ್ತು ಎಂದು ಆರೋಪಿಸಲಾಗಿದೆ. ಈ ಪ್ರದೇಶ ಅತ್ಯಂತ ಕುಗ್ರಾಮ ಆಗಿರುವ ಕಾರಣ ಯಾವುದೇ ಅಧಿಕಾರಿ ವರ್ಗ ಸ್ಥಳಕ್ಕೆ ತೆರಳಿರಲಿಲ್ಲ. ಸ್ಥಳೀಯರ ಮಾಹಿತಿ ಮೇರೆಗೆ ಮಾಧ್ಯಮದಲ್ಲಿ ವರದಿಯಾಗಿತ್ತು. ಇದೀಗ ಎಚ್ಚೆತ್ತುಕೊಂಡಿರುವ ಪುತ್ತೂರು ವಿಭಾಗಾಧಿಕಾರಿ ಕೃಷ್ಣಮೂರ್ತಿ ಸ್ಥಳಕ್ಕೆ ತೆರಳಿದ್ದು, ಬೆಟ್ಟಗಳ ಮೇಲೆ ಏನೋ ದುರಂತ ಸಂಭವಿಸಿರುವ ಸಾಧ್ಯತೆಯಿದೆ ಅಂತ ಒಪ್ಪಿಕೊಂಡಿದ್ದಾರೆ.

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
  • Popular Posts

    • 1
      ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!

  • Privacy Policy
  • Contact
© Tulunadu Infomedia.

Press enter/return to begin your search