• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಬೆಟ್ಟ ಕುಸಿದು ಅವಾಂತರ ಸೃಷ್ಟಿ; ಕೂಜುಮಲೆ, ಕಲ್ಮಕಾರಿನಲ್ಲಿ ನಡೆದ ದುರಂತವನ್ನು ಜಿಲ್ಲಾಡಳಿತ ಮುಚ್ಚಿಟ್ಟಿದ್ದೇಕೆ?

Tulunadu News Posted On August 22, 2018


  • Share On Facebook
  • Tweet It

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗ ಕೊಡಗಿನ ಜೋಡುಪಾಳ ಮತ್ತು ಮದೆನಾಡಿನಲ್ಲಿ ಸಂಭವಿಸಿದ ಭೂ ಕುಸಿತಕ್ಕೆ ಸಿಲುಕಿ ಅಪಾಯದಲ್ಲಿದ್ದ ಎಲ್ಲರನ್ನು ಎನ್ ಡಿ ಆರ್ ಎಫ್ ಹಾಗು ದಕ್ಷಿಣ ಕನ್ನಡ ಪೊಲೀಸರ ತಂಡ ರಕ್ಷಿಸಿ ಸುರಕ್ಷಿತ ಪ್ರದೇಶಗಳಿಗೆ ಸಾಗಿಸಿದೆ.  ಈ ದುರಂತದಲ್ಲಿ ಮನೆ ಕಳೆದುಕೊಂಡ 800ಕ್ಕೂ ಹೆಚ್ಚು ಜನರನ್ನು ಸಂಪಾಜೆ, ಅರಂತೋಡಿನ ಸಂತ್ರಸ್ತರ ಶಿಬಿರದಲ್ಲಿ ಇರಿಸಲಾಗಿದೆ. ಈ ನಡುವೆ ಜೋಡುಪಾಳ ಮತ್ತು ಮದೆನಾಡಿನಲ್ಲಿ ಭೂಕುಸಿತಕ್ಕಿಂತಲೂ ದೊಡ್ಡ ಪ್ರಮಾಣದ ದುರಂತಗಳು ಸಂಭವಿಸಿರುವುದು ಈಗ ಒಂದೊಂದಾಗಿ ಬೆಳಕಿಗೆ ಬರುತ್ತಿವೆ. ಮತ್ತೊಂದು ಕಡೆ ಬೃಹತ್ ಬೆಟ್ಟ ಕುಸಿದು ಅವಾಂತರ ಸೃಷ್ಟಿಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಕಟ್ಟಕಡೆಯ ಗ್ರಾಮ ಸುಳ್ಯ ತಾಲೂಕಿನ ಕಲ್ಮಕಾರಿನ ಬಳಿಯಿರುವ ಕಡಮಕಲ್ ಎಸ್ಟೇಟ್ ವ್ಯಾಪ್ತಿಯಲ್ಲಿ ಬೃಹತ್ ಬೆಟ್ಟ ಕುಸಿದಿರುವುದು ಬೆಳಕಿಗೆ ಬಂದಿದೆ. ಎಸ್ಟೇಟ್ ಒಳಗಿರುವ ಹೊಳೆಯ ಸೇತುವೆ ಕೊಚ್ಚಿ ಹೋಗಿದ್ದು, ಭಾರೀ ಗಾತ್ರದ ಬೃಹತ್ ಮರಗಳೂ ಛಿದ್ರಗೊಂಡು ಬಿದ್ದಿವೆ. ಮೂರು ದಿನಗಳ ಹಿಂದೆ ಈ ಭಾಗದಲ್ಲಿ ಭಾರೀ ಸ್ಫೋಟ ಸಂಭವಿಸಿದ ಸದ್ದು ಕೇಳಿಸಿತ್ತು. ಇದರಿಂದ ಎಸ್ಟೇಟ್ ಕಾರ್ಮಿಕರು ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ನಿವಾಸಿಗಳು ಭಯಭೀತರಾಗಿದ್ದರು. ಹಾಗೆಯೇ ಕೂಜುಮಲೆ ಅರಣ್ಯ ವ್ಯಾಪ್ತಿಯಲ್ಲಿ ಭೂಮಿ ಬಿರುಕು ಬಿಟ್ಟಿರುವುದು ಗೋಚರಿಸಿದೆ. ಅಲ್ಲೇ ಆಸುಪಾಸಿನ ಕಲ್ಮಕಾರು, ಬಾಳುಗೋಡು ಗ್ರಾಮಗಳ 30ಕ್ಕೂ ಹೆಚ್ಚು ಮನೆಗಳ ನಿವಾಸಿಗಳನ್ನು ಸ್ಥಳಾಂತರ ಮಾಡಲಾಗಿದೆ. ಅಲ್ಲದೆ, ಎಸ್ಟೇಟ್ ನಲ್ಲಿರುವ 40ಕ್ಕೂ ಹೆಚ್ಚು ತಮಿಳು ಕಾರ್ಮಿಕರು ಭಯದಿಂದ ಸ್ಥಳ ಬಿಟ್ಟು ಓಡಿಹೋಗಿದ್ದಾರೆ.

ಪಶ್ಚಿಮ ಘಟ್ಟ ಸ್ಫೋಟಗೊಂಡು ಇಡೀ ಪ್ರದೇಶವೇ ನೀರಿನಲ್ಲಿ ಕೊಚ್ಚಿಕೊಂಡು ಹೋಗುವ ಭಯದಿಂದ ಕಾರ್ಮಿಕರು ಓಡಿದ್ದಾರೆ. ಇಲ್ಲಿ ಈ ಪ್ರಮಾಣದ ಭಾರೀ ದುರಂತ ನಡೆದಿದ್ದರೂ ಜನಸಂಚಾರ ವಿರಳವಾಗಿರುವ ಕಾರಣ ಘಟನೆಯನ್ನು ಜಿಲ್ಲಾಡಳಿತ ಮುಚ್ಚಿಟ್ಟಿತ್ತು ಎಂದು ಆರೋಪಿಸಲಾಗಿದೆ. ಈ ಪ್ರದೇಶ ಅತ್ಯಂತ ಕುಗ್ರಾಮ ಆಗಿರುವ ಕಾರಣ ಯಾವುದೇ ಅಧಿಕಾರಿ ವರ್ಗ ಸ್ಥಳಕ್ಕೆ ತೆರಳಿರಲಿಲ್ಲ. ಸ್ಥಳೀಯರ ಮಾಹಿತಿ ಮೇರೆಗೆ ಮಾಧ್ಯಮದಲ್ಲಿ ವರದಿಯಾಗಿತ್ತು. ಇದೀಗ ಎಚ್ಚೆತ್ತುಕೊಂಡಿರುವ ಪುತ್ತೂರು ವಿಭಾಗಾಧಿಕಾರಿ ಕೃಷ್ಣಮೂರ್ತಿ ಸ್ಥಳಕ್ಕೆ ತೆರಳಿದ್ದು, ಬೆಟ್ಟಗಳ ಮೇಲೆ ಏನೋ ದುರಂತ ಸಂಭವಿಸಿರುವ ಸಾಧ್ಯತೆಯಿದೆ ಅಂತ ಒಪ್ಪಿಕೊಂಡಿದ್ದಾರೆ.

  • Share On Facebook
  • Tweet It


- Advertisement -


Trending Now
ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
Tulunadu News May 24, 2025
ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
Tulunadu News May 23, 2025
Leave A Reply

  • Recent Posts

    • ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
    • ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!
    • ಮಾವೋವಾದಿ ರಾಷ್ಟ್ರೀಯ ನಾಯಕ, 1.5 ಕೋಟಿ ಘೋಷಿತ ನಕ್ಸಲ್ ಬಸವರಾಜ್ ಫಿನಿಶ್!
    • ಜೂನ್ 5 ಕ್ಕೆ ಅಯೋಧ್ಯೆ ರಾಮ ದರ್ಬಾರ್ ಪ್ರಾಣ ಪ್ರತಿಷ್ಟೆಗೆ ದಿನ ನಿಗದಿ... ಕೆಲಸಕಾರ್ಯಗಳು ಅಂತಿಮ ಹಂತಕ್ಕೆ!
    • ಕನ್ನಡತಿಯ ಮುಸ್ಲಿಂ ಹೆಣ್ಣುಮಕ್ಕಳ ದೈನಂದಿನ ಬದುಕಿನ ಕತೆಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
    • ಕನ್ನಡ ಮಾತಾಡಲ್ಲ ಎಂದು ದರ್ಪ ತೋರಿದ ಬ್ಯಾಂಕ್ ಮ್ಯಾನೇಜರ್ ಟ್ರಾನ್ಫರ್! ಉಳಿದವರಿಗೆ ಎಚ್ಚರಿಕೆ ಗಂಟೆ..
  • Popular Posts

    • 1
      ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
    • 2
      ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • 3
      ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • 4
      ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • 5
      ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search