• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಶಾಸಕ ವೇದವ್ಯಾಸ ಕಾಮತ್ ವಿನಂತಿ ಮೇರೆಗೆ ನಾಗಾಲ್ಯಾಂಡ್ ರಾಜ್ಯಪಾಲರಿಂದ ಕೊಡಗು ಜಿಲ್ಲೆಗೆ 5 ಲಕ್ಷ ರೂ. ದೇಣಿಗೆ

Tulunadu News Posted On August 22, 2018
0


0
Shares
  • Share On Facebook
  • Tweet It

ಮಂಗಳೂರು : ಮಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಅವರ ವಿನಂತಿ ಮೇರೆಗೆ ನಾಗಾಲ್ಯಾಂಡ್ ಮತ್ತು ಅರುಣಾಚಲ ಪ್ರದೇಶ ರಾಜ್ಯಪಾಲ ಪಿ.ಬಿ.ಆಚಾರ್ಯ ಅವರು ಪ್ರವಾಹ ಪೀಡಿತ ಕೊಡಗು ಜಿಲ್ಲೆಗೆ 5 ಲಕ್ಷ ರೂ. ದೇಣಿಗೆಯನ್ನು ವೈಯ್ಯಕ್ತಿಕವಾಗಿ ನೀಡಿದ್ದಾರೆ. ವೇದವ್ಯಾಸ ಕಾಮತ್ ಅವರು ನಾಗಾಲ್ಯಾಂಡ್ ಮತ್ತು ಅರುಣಾಚಲ ಪ್ರದೇಶ ರಾಜ್ಯಪಾಲ ಪಿ.ಬಿ.ಆಚಾರ್ಯ ಅವರಿಗೆ ಕೇರಳ ಮತ್ತು ಕೊಡಗಿನ ಪ್ರವಾಹಕ್ಕೆ ದೇಣಿಗೆ ನೀಡುವಂತೆ ಮನವು ಮಾಡಿದ್ದರು.

ಶಾಸಕ ವೇದವ್ಯಾಸ ಕಾಮತ್ ಅವರ ವಿನಂತಿಯ ಮೇರೆಗೆ ರಾಜ್ಯಪಾಲರು ಕೇರಳದ ನೆರೆಪೀಡಿತ ಪ್ರದೇಶಕ್ಕೆ 1 ಕೋಟಿ ರೂಪಾಯಿ ಪರಿಹಾರ ಘೋಷಿಸಲು ರಾಜ್ಯ ಸರಕಾರಕ್ಕೆ ಶಿಫಾರಸು ಮಾಡಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದಾಗಿರು ಹಾನಿಗೆ ಪರಿಹಾರವಾಗಿ ನಾಗಾಲ್ಯಾಂಡ್ ರಾಜ್ಯ ಸರಕಾರದ ವತಿಯಿಂದ 20 ಲಕ್ಷ ರೂಪಾಯಿಯನ್ನು ಶಾಸಕರ ಮನವಿಯಂತೆ ಬಿಡುಗಡೆ ಮಾಡಲಾಗಿದೆ. ತಮ್ಮ ವಿನಂತಿಯನ್ನು ಪುರಸ್ಕರಿಸಿ ನೆರೆಪೀಡಿತ ಪ್ರದೇಶಕ್ಕೆ ಶೀಘ್ರದಲ್ಲಿ ಹಣ ಬಿಡುಗಡೆ ಮಾಡಲು ಸಹಕರಿಸಿದ ರಾಜ್ಯಪಾಲ ಪಿ.ಬಿ.ಆಚಾರ್ಯ ಅವರಿಗೆ ಶಾಸಕ ಡಿ.ವೇದವ್ಯಾಸ ಕಾಮತ್ ಕೃತಜ್ಞತೆ ಸಲ್ಲಿಸಿದ್ದಾರೆ.

ಸಂಕಷ್ಟದಲ್ಲಿ ಜನರಿಗಾಗಿ ಪಿ.ಬಿ.ಆಚಾರ್ಯ ಅವರ ಮನಸ್ಸು ಯಾವಾಗಲೂ ಮಿಡಿಯುತ್ತದೆ. ಕೇರಳ ಮತ್ತು ಕೊಡಗು ಜನರು ಆದಷ್ಟು ಬೇಗ ಸಹಜ ಜೀವನಕ್ಕೆ ಮರಳಲಿ ಎಂದು ಪಿ.ಬಿ.ಆಚಾರ್ಯ ಅವರು ಹಾರೈಸಿದ್ದಾರೆ ಎಂದು ಶಾಸಕರು ಹೇಳಿದ್ದಾರೆ. ಬಿಜೆಪಿ ಸಂಸದರು, ಶಾಸಕರ ಒಂದು ತಿಂಗಳ ವೇತನ : ‘ಕೊಡಗು ಜಿಲ್ಲೆಯ ಪ್ರವಾಹ ಪೀಡಿತ ಸಂತ್ರಸ್ಥರ ನಿಧಿಗೆ ಬಿಜೆಪಿಯ ಎಲ್ಲಾ ಶಾಸಕರು, ವಿಧಾನಪರಿಷತ್ ಸದಸ್ಯರು, ಸಂಸದರ ಒಂದು ತಿಂಗಳ ವೇತನ ನೀಡಲಾಗುತ್ತದೆ’ ಎಂದು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
  • Popular Posts

    • 1
      ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!

  • Privacy Policy
  • Contact
© Tulunadu Infomedia.

Press enter/return to begin your search