• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಕೇರಳ, ಕೊಡಗಿನಲ್ಲಿ ಉಂಟಾದ ಪ್ರಾಕೃತಿಕ ವಿಕೋಪ; ಪ್ರವಾಸಿಗರಿಲ್ಲದೆ ಬಣಗುಡುತ್ತಿವೆ ಕರಾವಳಿ ಬೀಚ್ ಗಳು

Tulunadu News Posted On August 24, 2018
0


0
Shares
  • Share On Facebook
  • Tweet It

ಮಂಗಳೂರು: ಕೇರಳ, ಕೊಡಗಿನಲ್ಲಿ ಉಂಟಾದ ಪ್ರಾಕೃತಿಕ ವಿಕೋಪದ ಪರಿಣಾಮ ಕರಾವಳಿಗೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆಯಲ್ಲಿ ಭಾರಿ ಪ್ರಮಾಣದಲ್ಲಿ ಇಳಿಕೆಯಾಗಿದೆ. ಕೇರಳ ಮತ್ತು ಮಡಿಕೇರಿಯಲ್ಲಿ ಉಂಟಾದ ಜಲಪ್ರಳಯದ ಪರಿಣಾಮ ಶೇಕಡ. 80 ರಷ್ಟು ಪ್ರವಾಸಿಗರ ಸಂಖ್ಯೆ ಇಳಿಮುಖವಾಗಿದೆ ಎಂದು ಅಂದಾಜಿಸಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಪ್ರಮುಖವಾಗಿ ಸ್ಥಳೀಯರು ಸೇರಿದಂತೆ ರಾಜ್ಯ, ಹೊರರಾಜ್ಯಗಳ ಪ್ರವಾಸಿಗರನ್ನು ಆಕರ್ಷಿಸುತ್ತಿದ್ದ ಬೀಚ್ ಗಳು ಪ್ರವಾಸಿಗರಿಲ್ಲದೆ ಬಣಗುಡುತ್ತಿದೆ. ಮಳೆಗಾಲದಲ್ಲಿ ಸದಾ ಜನರಿಂದ ತುಂಬಿ ತುಳುಕುತ್ತಿದ್ದ ಮಲ್ಪೆ, ಪಣಂಬೂರು ಬೀಚ್ ಗಳು ಜನರಿಲ್ಲದೆ ಈಗ ಬಿಕೋ ಎನ್ನುತ್ತಿವೆ. ಕಳೆದ ಕೆಲವು ದಿನಗಳಿಂದ ಸುರಿದ ಮಹಾಮಳೆ ಜೊತೆಗೆ ಗಾಳಿಯ ಅಬ್ಬರದ ಹಿನ್ನಲೆಯಲ್ಲಿ ಸ್ಥಳೀಯರು ಕೂಡ ಬೀಚ್ ಕಡೆ ಮುಖ ಮಾಡುತ್ತಿಲ್ಲ. ಮಳೆಗಾಲದ ಸಂದರ್ಭದಲ್ಲಿ ದಿನನಿತ್ಯ ಸುಮಾರು 2 ಸಾವಿರಕ್ಕೂ ಅಧಿಕ ಬರುತ್ತಿದ್ದ ಬೀಚ್ ಗಳಲ್ಲಿ ಕಳೆದ ಭಾನುವಾರು ಕೇವಲ 150 ರಿಂದ 200 ರಷ್ಟು ಮಂದಿ ಮಾತ್ರ ಬೀಚ್ ನಲ್ಲಿ ಸುತ್ತಾಡುತ್ತಿರುವುದು ಕಂಡು ಬಂದಿದೆ.

ಮಂಗಳೂರಿನ ಪಣಂಬೂರು ಬೀಚ್, ಉಳ್ಳಾಲ ಸೋಮೇಶ್ವರ ಬೀಚ್ ಸೇರಿದಂತೆ ಉಡುಪಿಯ ಮಲ್ಪೆ ಬೀಚ್, ಸೈಂಟ್ ಮೇರಿಸ್, ಮರವಂತೆ, ಮುರುಡೇಶ್ವರ ಸೇರಿದಂತೆ ಪ್ರಮುಖ ಪ್ರವಾಸಿ ತಾಣಗಳಿಗೆ ಕೇರಳದ ರಾಜ್ಯದಿಂದ ಅತಿ ಹೆಚ್ಚು ಸಂಖ್ಯೆಯಲ್ಲಿ ಪ್ರವಾಸಿಗರು ಬರುತ್ತಾರೆ. ಪ್ರವಾಸಿಗರು ಬರುವುದು ಕಷ್ಟಸಾಧ್ಯ ಅದರಲ್ಲೂ ಸೈಂಟ್ ಮೇರಿಸ್ ದ್ವೀಪಕ್ಕೆ ಮತ್ತು ಮಲ್ಪೆ ಬೀಚ್ ಹಾಗೂ ಪಣಂಬೂರು ಬೀಚ್ ಗಳಿಗೆ ಬರುವ ಪ್ರವಾಸಿಗರಲ್ಲಿ ಕೇರಳದ ವಿದ್ಯಾರ್ಥಿಗಳು ಅಧಿಕ ಸಂಖ್ಯೆಯಲ್ಲಿರುತ್ತಾರೆ. ಕೇರಳ ಪ್ರಾಕೃತಿಕ ವಿಕೋಪದಿಂದ ತತ್ತರಿಸಿರುವ ಹಿನ್ನಲೆಯಲ್ಲಿ ಇನ್ನು ಕೆಲವು ತಿಂಗಳು ಕೇರಳ ಪ್ರವಾಸಿಗರು ಆಗಮಿಸುವುದು ಕಷ್ಟ ಸಾಧ್ಯ ಎಂದು ಹೇಳಲಾಗಿದೆ. ಸಣ್ಣ ಅಂಗಡಿಗಳು ತೆಗೆದಿರುತ್ತವೆ ಜಲಪ್ರವಾಹದ ಪರಿಣಾಮ ಪ್ರವಾಸಿಗರನ್ನೇ ನಂಬಿರುವ ಹೋಟೆಲ್ ಹಾಗೂ ಲಾಡ್ಜ್ ಉದ್ಯಮಕ್ಕೂ ಕೇರಳ ಹಾಗೂ ಮಡಿಕೇರಿಯ ಜಲಪ್ರಳಯದ ಬಿಸಿ ತಟ್ಟಿದೆ. ಪ್ರವಾಸಿಗರು ಬರದ ಹಿನ್ನಲೆಯಲ್ಲಿ ಬೀಚ್ ಪರಿಸರದಲ್ಲಿ ವ್ಯಾಪಾರದಲ್ಲಿ ತೊಡಗಿದ್ದ ಅಂಗಡಿಗಳು ಬಾಗಿಲು ಹಾಕಿವೆ. ಅದರಲ್ಲಿ ಕೆಲವೊಂದು ಸಣ್ಣ ಅಂಗಡಿಗಳು ಮಾತ್ರ ಸಂಜೆಯ ಸಮಯದಲ್ಲಿ ಬಾಗಿಲು ತೆರೆದು ಪ್ರವಾಸಿಗರಿಗಾಗಿ ಕಾದು ಕುಳಿತಿರುತ್ತಾರೆ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search