• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಕೇರಳ, ಕೊಡಗಿನಲ್ಲಿ ಉಂಟಾದ ಪ್ರಾಕೃತಿಕ ವಿಕೋಪ; ಪ್ರವಾಸಿಗರಿಲ್ಲದೆ ಬಣಗುಡುತ್ತಿವೆ ಕರಾವಳಿ ಬೀಚ್ ಗಳು

Tulunadu News Posted On August 24, 2018
0


0
Shares
  • Share On Facebook
  • Tweet It

ಮಂಗಳೂರು: ಕೇರಳ, ಕೊಡಗಿನಲ್ಲಿ ಉಂಟಾದ ಪ್ರಾಕೃತಿಕ ವಿಕೋಪದ ಪರಿಣಾಮ ಕರಾವಳಿಗೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆಯಲ್ಲಿ ಭಾರಿ ಪ್ರಮಾಣದಲ್ಲಿ ಇಳಿಕೆಯಾಗಿದೆ. ಕೇರಳ ಮತ್ತು ಮಡಿಕೇರಿಯಲ್ಲಿ ಉಂಟಾದ ಜಲಪ್ರಳಯದ ಪರಿಣಾಮ ಶೇಕಡ. 80 ರಷ್ಟು ಪ್ರವಾಸಿಗರ ಸಂಖ್ಯೆ ಇಳಿಮುಖವಾಗಿದೆ ಎಂದು ಅಂದಾಜಿಸಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಪ್ರಮುಖವಾಗಿ ಸ್ಥಳೀಯರು ಸೇರಿದಂತೆ ರಾಜ್ಯ, ಹೊರರಾಜ್ಯಗಳ ಪ್ರವಾಸಿಗರನ್ನು ಆಕರ್ಷಿಸುತ್ತಿದ್ದ ಬೀಚ್ ಗಳು ಪ್ರವಾಸಿಗರಿಲ್ಲದೆ ಬಣಗುಡುತ್ತಿದೆ. ಮಳೆಗಾಲದಲ್ಲಿ ಸದಾ ಜನರಿಂದ ತುಂಬಿ ತುಳುಕುತ್ತಿದ್ದ ಮಲ್ಪೆ, ಪಣಂಬೂರು ಬೀಚ್ ಗಳು ಜನರಿಲ್ಲದೆ ಈಗ ಬಿಕೋ ಎನ್ನುತ್ತಿವೆ. ಕಳೆದ ಕೆಲವು ದಿನಗಳಿಂದ ಸುರಿದ ಮಹಾಮಳೆ ಜೊತೆಗೆ ಗಾಳಿಯ ಅಬ್ಬರದ ಹಿನ್ನಲೆಯಲ್ಲಿ ಸ್ಥಳೀಯರು ಕೂಡ ಬೀಚ್ ಕಡೆ ಮುಖ ಮಾಡುತ್ತಿಲ್ಲ. ಮಳೆಗಾಲದ ಸಂದರ್ಭದಲ್ಲಿ ದಿನನಿತ್ಯ ಸುಮಾರು 2 ಸಾವಿರಕ್ಕೂ ಅಧಿಕ ಬರುತ್ತಿದ್ದ ಬೀಚ್ ಗಳಲ್ಲಿ ಕಳೆದ ಭಾನುವಾರು ಕೇವಲ 150 ರಿಂದ 200 ರಷ್ಟು ಮಂದಿ ಮಾತ್ರ ಬೀಚ್ ನಲ್ಲಿ ಸುತ್ತಾಡುತ್ತಿರುವುದು ಕಂಡು ಬಂದಿದೆ.

ಮಂಗಳೂರಿನ ಪಣಂಬೂರು ಬೀಚ್, ಉಳ್ಳಾಲ ಸೋಮೇಶ್ವರ ಬೀಚ್ ಸೇರಿದಂತೆ ಉಡುಪಿಯ ಮಲ್ಪೆ ಬೀಚ್, ಸೈಂಟ್ ಮೇರಿಸ್, ಮರವಂತೆ, ಮುರುಡೇಶ್ವರ ಸೇರಿದಂತೆ ಪ್ರಮುಖ ಪ್ರವಾಸಿ ತಾಣಗಳಿಗೆ ಕೇರಳದ ರಾಜ್ಯದಿಂದ ಅತಿ ಹೆಚ್ಚು ಸಂಖ್ಯೆಯಲ್ಲಿ ಪ್ರವಾಸಿಗರು ಬರುತ್ತಾರೆ. ಪ್ರವಾಸಿಗರು ಬರುವುದು ಕಷ್ಟಸಾಧ್ಯ ಅದರಲ್ಲೂ ಸೈಂಟ್ ಮೇರಿಸ್ ದ್ವೀಪಕ್ಕೆ ಮತ್ತು ಮಲ್ಪೆ ಬೀಚ್ ಹಾಗೂ ಪಣಂಬೂರು ಬೀಚ್ ಗಳಿಗೆ ಬರುವ ಪ್ರವಾಸಿಗರಲ್ಲಿ ಕೇರಳದ ವಿದ್ಯಾರ್ಥಿಗಳು ಅಧಿಕ ಸಂಖ್ಯೆಯಲ್ಲಿರುತ್ತಾರೆ. ಕೇರಳ ಪ್ರಾಕೃತಿಕ ವಿಕೋಪದಿಂದ ತತ್ತರಿಸಿರುವ ಹಿನ್ನಲೆಯಲ್ಲಿ ಇನ್ನು ಕೆಲವು ತಿಂಗಳು ಕೇರಳ ಪ್ರವಾಸಿಗರು ಆಗಮಿಸುವುದು ಕಷ್ಟ ಸಾಧ್ಯ ಎಂದು ಹೇಳಲಾಗಿದೆ. ಸಣ್ಣ ಅಂಗಡಿಗಳು ತೆಗೆದಿರುತ್ತವೆ ಜಲಪ್ರವಾಹದ ಪರಿಣಾಮ ಪ್ರವಾಸಿಗರನ್ನೇ ನಂಬಿರುವ ಹೋಟೆಲ್ ಹಾಗೂ ಲಾಡ್ಜ್ ಉದ್ಯಮಕ್ಕೂ ಕೇರಳ ಹಾಗೂ ಮಡಿಕೇರಿಯ ಜಲಪ್ರಳಯದ ಬಿಸಿ ತಟ್ಟಿದೆ. ಪ್ರವಾಸಿಗರು ಬರದ ಹಿನ್ನಲೆಯಲ್ಲಿ ಬೀಚ್ ಪರಿಸರದಲ್ಲಿ ವ್ಯಾಪಾರದಲ್ಲಿ ತೊಡಗಿದ್ದ ಅಂಗಡಿಗಳು ಬಾಗಿಲು ಹಾಕಿವೆ. ಅದರಲ್ಲಿ ಕೆಲವೊಂದು ಸಣ್ಣ ಅಂಗಡಿಗಳು ಮಾತ್ರ ಸಂಜೆಯ ಸಮಯದಲ್ಲಿ ಬಾಗಿಲು ತೆರೆದು ಪ್ರವಾಸಿಗರಿಗಾಗಿ ಕಾದು ಕುಳಿತಿರುತ್ತಾರೆ.

0
Shares
  • Share On Facebook
  • Tweet It




Trending Now
ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
Tulunadu News July 11, 2025
ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
Tulunadu News July 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
  • Popular Posts

    • 1
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 2
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • 3
      ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • 4
      ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • 5
      ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!

  • Privacy Policy
  • Contact
© Tulunadu Infomedia.

Press enter/return to begin your search