• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಕಂಕನಾಡಿಯಲ್ಲಿ ಲಿಫ್ಟ್ ನಲ್ಲಿ ಸಿಲುಕಿ ಸಾವನ್ನಪ್ಪಿದ 7 ವರ್ಷದ ಬಾಲಕ

Tulunadu News Posted On August 24, 2018
0


0
Shares
  • Share On Facebook
  • Tweet It

ಮಂಗಳೂರು: ಮಕ್ಕಳಿಗೆ ಲಿಫ್ಟ್ ನಲ್ಲಿ ಆಟವಾಡುವುದೆಂದರೆ ಎಲ್ಲಿಲ್ಲದ ಖುಷಿ. ಲಿಫ್ಟ್ ನಲ್ಲಿ ಒಂದು ಫ್ಲೋರ್ ನಿಂದ ಮತ್ತೊಂದು ಫ್ಲೋರ್ ಗೆ ಹೋಗಿ ವಾಪಾಸ್ ಬರುವುದು. ಲಿಫ್ಟ್ ಆಪರೇಟರ್ ಇಲ್ಲದಾಗ ತಾವೇ ಲಿಫ್ಟ್ ಚಲಾಯಿಸುವುದು ಇವೆಲ್ಲ ಮಕ್ಕಳಿಗೆ ಇನ್ನಿಲ್ಲದ ಖುಷಿ ಕೊಡುತ್ತವೆ.

ಆದರೆ ಮಕ್ಕಳ ಈ ಆಟ ಕೆಲವೊಮ್ಮೆ ಜೀವಕ್ಕೆ ಎರವಾಗುತ್ತವೆ. ಇಂತಹುದೇ ದುರಂತ ಮಂಗಳೂರಿನ ಕಂಕನಾಡಿ ಪರಿಸರದಲ್ಲಿ ನಡೆದಿದೆ. ಕಂಕನಾಡಿಯ ವಾಸ್ ಲೇನ್ ನಲ್ಲಿರುವ 25 ವರ್ಷ ಹಳೆಯ ಶಮಾ ಅಪಾರ್ಟ್ಮೆಂಟ್ ನಲ್ಲಿ ಈ ಘಟನೆ ಸಂಭವಿಸಿದೆ. ಬಾಲಕ ಮಹಮ್ಮದ್ ಸಿನಾನ್ (7) ಘಟನೆಯಲ್ಲಿ ಮೃತಪಟ್ಟ ದುರ್ದೈವಿ.

ನಿನ್ನೆ ಗುರುವಾರ ತಾಯಿ ಜೊತೆಗೆ ಮೂರು ಮಕ್ಕಳು ಶಾಪಿಂಗ್ ಗೆ ತೆರಳಲು ಸಿದ್ಧರಾಗಿ ನಿಂತಿದ್ದರು. ವಾಸವಿದ್ದ ಫ್ಲಾಟ್ ಗೆ ತಾಯಿ ಬೀಗ ಹಾಕುತ್ತಿದ್ದ ಸಂದರ್ಭ 7 ವರ್ಷದ ಸಿನಾನ್ ಏಕಾಏಕಿ ಲಿಫ್ಟ್ ನೊಳಗೆ ಹೋಗಿದ್ದಾನೆ. ಹಳೆ ಮಾದರಿಯ ಈ ಲಿಫ್ಟ್ ನೊಳಗೆ ಹೋಗಿ ಸರಿಯಾಗಿ ಬಾಗಿಲು ಭದ್ರಗೊಳಿಸದೇ ಲಿಫ್ಟ್ ನ ಕೆಳಹೋಗುವ ಬಟನ್ ಒತ್ತಿದ್ದಾನೆ ಎಂದು ಹೇಳಲಾಗಿದೆ. ಈ ಸಂದರ್ಭದಲ್ಲಿ ಬಾಲಕನ ತಲೆ ಲಿಫ್ಟ್ ನ ಸಂದಿಯಲ್ಲಿ ಸಿಲುಕಿದೆ.

ಬಾಲಕನ ಕಿರುಚಾಟ ಕೇಳಿ ತಾಯಿ ಓಡಿ ಬಂದಿದ್ದಾರೆ. ಇತರರ ಸಹಕಾರ ಪಡೆದು ಲಿಫ್ಟ್ ನ ಬಾಗಿಲು ಒಡೆದು ಬಾಲಕ ಸಿನನ್ ನನ್ನು ಆಸ್ಪತ್ರೆಗೆ ಕೊಂಡೊಯ್ಯಲಾಯಿತು . ಆದರೆ ಅದಾಗಲೇ ಬಾಲಕ ಸಿನಾನ್ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಮೃತ ಸಿನಾನ್ ಅಹಮ್ಮದ್ ಬಾಸಿಂ ಎಂಬುವವರ ಪುತ್ರನಾಗಿದ್ದು, ಈ ಘಟನೆಯ ಬಗ್ಗೆ ಕದ್ರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

0
Shares
  • Share On Facebook
  • Tweet It




Trending Now
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
  • Popular Posts

    • 1
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • 2
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 3
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 4
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!

  • Privacy Policy
  • Contact
© Tulunadu Infomedia.

Press enter/return to begin your search