• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಕಂಕನಾಡಿಯಲ್ಲಿ ಲಿಫ್ಟ್ ನಲ್ಲಿ ಸಿಲುಕಿ ಸಾವನ್ನಪ್ಪಿದ 7 ವರ್ಷದ ಬಾಲಕ

Tulunadu News Posted On August 24, 2018
0


0
Shares
  • Share On Facebook
  • Tweet It

ಮಂಗಳೂರು: ಮಕ್ಕಳಿಗೆ ಲಿಫ್ಟ್ ನಲ್ಲಿ ಆಟವಾಡುವುದೆಂದರೆ ಎಲ್ಲಿಲ್ಲದ ಖುಷಿ. ಲಿಫ್ಟ್ ನಲ್ಲಿ ಒಂದು ಫ್ಲೋರ್ ನಿಂದ ಮತ್ತೊಂದು ಫ್ಲೋರ್ ಗೆ ಹೋಗಿ ವಾಪಾಸ್ ಬರುವುದು. ಲಿಫ್ಟ್ ಆಪರೇಟರ್ ಇಲ್ಲದಾಗ ತಾವೇ ಲಿಫ್ಟ್ ಚಲಾಯಿಸುವುದು ಇವೆಲ್ಲ ಮಕ್ಕಳಿಗೆ ಇನ್ನಿಲ್ಲದ ಖುಷಿ ಕೊಡುತ್ತವೆ.

ಆದರೆ ಮಕ್ಕಳ ಈ ಆಟ ಕೆಲವೊಮ್ಮೆ ಜೀವಕ್ಕೆ ಎರವಾಗುತ್ತವೆ. ಇಂತಹುದೇ ದುರಂತ ಮಂಗಳೂರಿನ ಕಂಕನಾಡಿ ಪರಿಸರದಲ್ಲಿ ನಡೆದಿದೆ. ಕಂಕನಾಡಿಯ ವಾಸ್ ಲೇನ್ ನಲ್ಲಿರುವ 25 ವರ್ಷ ಹಳೆಯ ಶಮಾ ಅಪಾರ್ಟ್ಮೆಂಟ್ ನಲ್ಲಿ ಈ ಘಟನೆ ಸಂಭವಿಸಿದೆ. ಬಾಲಕ ಮಹಮ್ಮದ್ ಸಿನಾನ್ (7) ಘಟನೆಯಲ್ಲಿ ಮೃತಪಟ್ಟ ದುರ್ದೈವಿ.

ನಿನ್ನೆ ಗುರುವಾರ ತಾಯಿ ಜೊತೆಗೆ ಮೂರು ಮಕ್ಕಳು ಶಾಪಿಂಗ್ ಗೆ ತೆರಳಲು ಸಿದ್ಧರಾಗಿ ನಿಂತಿದ್ದರು. ವಾಸವಿದ್ದ ಫ್ಲಾಟ್ ಗೆ ತಾಯಿ ಬೀಗ ಹಾಕುತ್ತಿದ್ದ ಸಂದರ್ಭ 7 ವರ್ಷದ ಸಿನಾನ್ ಏಕಾಏಕಿ ಲಿಫ್ಟ್ ನೊಳಗೆ ಹೋಗಿದ್ದಾನೆ. ಹಳೆ ಮಾದರಿಯ ಈ ಲಿಫ್ಟ್ ನೊಳಗೆ ಹೋಗಿ ಸರಿಯಾಗಿ ಬಾಗಿಲು ಭದ್ರಗೊಳಿಸದೇ ಲಿಫ್ಟ್ ನ ಕೆಳಹೋಗುವ ಬಟನ್ ಒತ್ತಿದ್ದಾನೆ ಎಂದು ಹೇಳಲಾಗಿದೆ. ಈ ಸಂದರ್ಭದಲ್ಲಿ ಬಾಲಕನ ತಲೆ ಲಿಫ್ಟ್ ನ ಸಂದಿಯಲ್ಲಿ ಸಿಲುಕಿದೆ.

ಬಾಲಕನ ಕಿರುಚಾಟ ಕೇಳಿ ತಾಯಿ ಓಡಿ ಬಂದಿದ್ದಾರೆ. ಇತರರ ಸಹಕಾರ ಪಡೆದು ಲಿಫ್ಟ್ ನ ಬಾಗಿಲು ಒಡೆದು ಬಾಲಕ ಸಿನನ್ ನನ್ನು ಆಸ್ಪತ್ರೆಗೆ ಕೊಂಡೊಯ್ಯಲಾಯಿತು . ಆದರೆ ಅದಾಗಲೇ ಬಾಲಕ ಸಿನಾನ್ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಮೃತ ಸಿನಾನ್ ಅಹಮ್ಮದ್ ಬಾಸಿಂ ಎಂಬುವವರ ಪುತ್ರನಾಗಿದ್ದು, ಈ ಘಟನೆಯ ಬಗ್ಗೆ ಕದ್ರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
  • Popular Posts

    • 1
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 2
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 3
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 4
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 5
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!

  • Privacy Policy
  • Contact
© Tulunadu Infomedia.

Press enter/return to begin your search