• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಕಂಕನಾಡಿಯಲ್ಲಿ ಲಿಫ್ಟ್ ನಲ್ಲಿ ಸಿಲುಕಿ ಸಾವನ್ನಪ್ಪಿದ 7 ವರ್ಷದ ಬಾಲಕ

Tulunadu News Posted On August 24, 2018
0


0
Shares
  • Share On Facebook
  • Tweet It

ಮಂಗಳೂರು: ಮಕ್ಕಳಿಗೆ ಲಿಫ್ಟ್ ನಲ್ಲಿ ಆಟವಾಡುವುದೆಂದರೆ ಎಲ್ಲಿಲ್ಲದ ಖುಷಿ. ಲಿಫ್ಟ್ ನಲ್ಲಿ ಒಂದು ಫ್ಲೋರ್ ನಿಂದ ಮತ್ತೊಂದು ಫ್ಲೋರ್ ಗೆ ಹೋಗಿ ವಾಪಾಸ್ ಬರುವುದು. ಲಿಫ್ಟ್ ಆಪರೇಟರ್ ಇಲ್ಲದಾಗ ತಾವೇ ಲಿಫ್ಟ್ ಚಲಾಯಿಸುವುದು ಇವೆಲ್ಲ ಮಕ್ಕಳಿಗೆ ಇನ್ನಿಲ್ಲದ ಖುಷಿ ಕೊಡುತ್ತವೆ.

ಆದರೆ ಮಕ್ಕಳ ಈ ಆಟ ಕೆಲವೊಮ್ಮೆ ಜೀವಕ್ಕೆ ಎರವಾಗುತ್ತವೆ. ಇಂತಹುದೇ ದುರಂತ ಮಂಗಳೂರಿನ ಕಂಕನಾಡಿ ಪರಿಸರದಲ್ಲಿ ನಡೆದಿದೆ. ಕಂಕನಾಡಿಯ ವಾಸ್ ಲೇನ್ ನಲ್ಲಿರುವ 25 ವರ್ಷ ಹಳೆಯ ಶಮಾ ಅಪಾರ್ಟ್ಮೆಂಟ್ ನಲ್ಲಿ ಈ ಘಟನೆ ಸಂಭವಿಸಿದೆ. ಬಾಲಕ ಮಹಮ್ಮದ್ ಸಿನಾನ್ (7) ಘಟನೆಯಲ್ಲಿ ಮೃತಪಟ್ಟ ದುರ್ದೈವಿ.

ನಿನ್ನೆ ಗುರುವಾರ ತಾಯಿ ಜೊತೆಗೆ ಮೂರು ಮಕ್ಕಳು ಶಾಪಿಂಗ್ ಗೆ ತೆರಳಲು ಸಿದ್ಧರಾಗಿ ನಿಂತಿದ್ದರು. ವಾಸವಿದ್ದ ಫ್ಲಾಟ್ ಗೆ ತಾಯಿ ಬೀಗ ಹಾಕುತ್ತಿದ್ದ ಸಂದರ್ಭ 7 ವರ್ಷದ ಸಿನಾನ್ ಏಕಾಏಕಿ ಲಿಫ್ಟ್ ನೊಳಗೆ ಹೋಗಿದ್ದಾನೆ. ಹಳೆ ಮಾದರಿಯ ಈ ಲಿಫ್ಟ್ ನೊಳಗೆ ಹೋಗಿ ಸರಿಯಾಗಿ ಬಾಗಿಲು ಭದ್ರಗೊಳಿಸದೇ ಲಿಫ್ಟ್ ನ ಕೆಳಹೋಗುವ ಬಟನ್ ಒತ್ತಿದ್ದಾನೆ ಎಂದು ಹೇಳಲಾಗಿದೆ. ಈ ಸಂದರ್ಭದಲ್ಲಿ ಬಾಲಕನ ತಲೆ ಲಿಫ್ಟ್ ನ ಸಂದಿಯಲ್ಲಿ ಸಿಲುಕಿದೆ.

ಬಾಲಕನ ಕಿರುಚಾಟ ಕೇಳಿ ತಾಯಿ ಓಡಿ ಬಂದಿದ್ದಾರೆ. ಇತರರ ಸಹಕಾರ ಪಡೆದು ಲಿಫ್ಟ್ ನ ಬಾಗಿಲು ಒಡೆದು ಬಾಲಕ ಸಿನನ್ ನನ್ನು ಆಸ್ಪತ್ರೆಗೆ ಕೊಂಡೊಯ್ಯಲಾಯಿತು . ಆದರೆ ಅದಾಗಲೇ ಬಾಲಕ ಸಿನಾನ್ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಮೃತ ಸಿನಾನ್ ಅಹಮ್ಮದ್ ಬಾಸಿಂ ಎಂಬುವವರ ಪುತ್ರನಾಗಿದ್ದು, ಈ ಘಟನೆಯ ಬಗ್ಗೆ ಕದ್ರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

0
Shares
  • Share On Facebook
  • Tweet It




Trending Now
ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
Tulunadu News July 15, 2025
ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
Tulunadu News July 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
    • ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
    • ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!
    • ಜಪಾನ್ ಮ್ಯಾರಥಾನ್.. 46 ಗಂಟೆ ನಿದ್ದೆ ಮಾಡದೇ ಓಡಿದ ಕನ್ನಡತಿ ಅಶ್ವಿನಿ!
    • ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
    • 7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
  • Popular Posts

    • 1
      ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
    • 2
      ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
    • 3
      ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • 4
      ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • 5
      ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!

  • Privacy Policy
  • Contact
© Tulunadu Infomedia.

Press enter/return to begin your search