• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಕಂಕನಾಡಿಯಲ್ಲಿ ಲಿಫ್ಟ್ ನಲ್ಲಿ ಸಿಲುಕಿ ಸಾವನ್ನಪ್ಪಿದ 7 ವರ್ಷದ ಬಾಲಕ

Tulunadu News Posted On August 24, 2018
0


0
Shares
  • Share On Facebook
  • Tweet It

ಮಂಗಳೂರು: ಮಕ್ಕಳಿಗೆ ಲಿಫ್ಟ್ ನಲ್ಲಿ ಆಟವಾಡುವುದೆಂದರೆ ಎಲ್ಲಿಲ್ಲದ ಖುಷಿ. ಲಿಫ್ಟ್ ನಲ್ಲಿ ಒಂದು ಫ್ಲೋರ್ ನಿಂದ ಮತ್ತೊಂದು ಫ್ಲೋರ್ ಗೆ ಹೋಗಿ ವಾಪಾಸ್ ಬರುವುದು. ಲಿಫ್ಟ್ ಆಪರೇಟರ್ ಇಲ್ಲದಾಗ ತಾವೇ ಲಿಫ್ಟ್ ಚಲಾಯಿಸುವುದು ಇವೆಲ್ಲ ಮಕ್ಕಳಿಗೆ ಇನ್ನಿಲ್ಲದ ಖುಷಿ ಕೊಡುತ್ತವೆ.

ಆದರೆ ಮಕ್ಕಳ ಈ ಆಟ ಕೆಲವೊಮ್ಮೆ ಜೀವಕ್ಕೆ ಎರವಾಗುತ್ತವೆ. ಇಂತಹುದೇ ದುರಂತ ಮಂಗಳೂರಿನ ಕಂಕನಾಡಿ ಪರಿಸರದಲ್ಲಿ ನಡೆದಿದೆ. ಕಂಕನಾಡಿಯ ವಾಸ್ ಲೇನ್ ನಲ್ಲಿರುವ 25 ವರ್ಷ ಹಳೆಯ ಶಮಾ ಅಪಾರ್ಟ್ಮೆಂಟ್ ನಲ್ಲಿ ಈ ಘಟನೆ ಸಂಭವಿಸಿದೆ. ಬಾಲಕ ಮಹಮ್ಮದ್ ಸಿನಾನ್ (7) ಘಟನೆಯಲ್ಲಿ ಮೃತಪಟ್ಟ ದುರ್ದೈವಿ.

ನಿನ್ನೆ ಗುರುವಾರ ತಾಯಿ ಜೊತೆಗೆ ಮೂರು ಮಕ್ಕಳು ಶಾಪಿಂಗ್ ಗೆ ತೆರಳಲು ಸಿದ್ಧರಾಗಿ ನಿಂತಿದ್ದರು. ವಾಸವಿದ್ದ ಫ್ಲಾಟ್ ಗೆ ತಾಯಿ ಬೀಗ ಹಾಕುತ್ತಿದ್ದ ಸಂದರ್ಭ 7 ವರ್ಷದ ಸಿನಾನ್ ಏಕಾಏಕಿ ಲಿಫ್ಟ್ ನೊಳಗೆ ಹೋಗಿದ್ದಾನೆ. ಹಳೆ ಮಾದರಿಯ ಈ ಲಿಫ್ಟ್ ನೊಳಗೆ ಹೋಗಿ ಸರಿಯಾಗಿ ಬಾಗಿಲು ಭದ್ರಗೊಳಿಸದೇ ಲಿಫ್ಟ್ ನ ಕೆಳಹೋಗುವ ಬಟನ್ ಒತ್ತಿದ್ದಾನೆ ಎಂದು ಹೇಳಲಾಗಿದೆ. ಈ ಸಂದರ್ಭದಲ್ಲಿ ಬಾಲಕನ ತಲೆ ಲಿಫ್ಟ್ ನ ಸಂದಿಯಲ್ಲಿ ಸಿಲುಕಿದೆ.

ಬಾಲಕನ ಕಿರುಚಾಟ ಕೇಳಿ ತಾಯಿ ಓಡಿ ಬಂದಿದ್ದಾರೆ. ಇತರರ ಸಹಕಾರ ಪಡೆದು ಲಿಫ್ಟ್ ನ ಬಾಗಿಲು ಒಡೆದು ಬಾಲಕ ಸಿನನ್ ನನ್ನು ಆಸ್ಪತ್ರೆಗೆ ಕೊಂಡೊಯ್ಯಲಾಯಿತು . ಆದರೆ ಅದಾಗಲೇ ಬಾಲಕ ಸಿನಾನ್ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಮೃತ ಸಿನಾನ್ ಅಹಮ್ಮದ್ ಬಾಸಿಂ ಎಂಬುವವರ ಪುತ್ರನಾಗಿದ್ದು, ಈ ಘಟನೆಯ ಬಗ್ಗೆ ಕದ್ರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

0
Shares
  • Share On Facebook
  • Tweet It




Trending Now
ಡ್ರೋಣ್ ಕ್ಷೇತ್ರದ ಬಗ್ಗೆ ರಾಹುಲ್ ಗಾಂಧಿಯವರ ಹೇಳಿಕೆಗೆ ಡಿಎಫ್ ಐ ಅಧ್ಯಕ್ಷರ ಕೌಂಟರ್!
Tulunadu News July 30, 2025
ಧರ್ಮಸ್ಥಳದ ಶವ ಹೂತಿಟ್ಟ ಸ್ಥಳಗಳ ಅಗೆತಕ್ಕೆ ಜೆಸಿಬಿ ಬರಬೇಕಾಯ್ತು!
Tulunadu News July 29, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಡ್ರೋಣ್ ಕ್ಷೇತ್ರದ ಬಗ್ಗೆ ರಾಹುಲ್ ಗಾಂಧಿಯವರ ಹೇಳಿಕೆಗೆ ಡಿಎಫ್ ಐ ಅಧ್ಯಕ್ಷರ ಕೌಂಟರ್!
    • ಧರ್ಮಸ್ಥಳದ ಶವ ಹೂತಿಟ್ಟ ಸ್ಥಳಗಳ ಅಗೆತಕ್ಕೆ ಜೆಸಿಬಿ ಬರಬೇಕಾಯ್ತು!
    • ಸಮಸ್ಯೆ ಬಗೆಹರಿಯದಿದ್ದರೆ ಉಗ್ರ ಹೋರಾಟ ಅನಿವಾರ್ಯ -ನಳಿನ್ ಕುಮಾರ್ ಕಟೀಲ್
    • SSLC ಮಕ್ಕಳಿಗೆ ರಾಜ್ಯ ಸರಕಾರದಿಂದ ಶುಭ ಸುದ್ದಿ!
    • ಬಹುಮುಖ ಪ್ರತಿಭೆ ರಾಜಶ್ರೀ ಪೂಜಾರಿ ಇನ್ನಿಲ್ಲ!
    • ಚಕ್ರವರ್ತಿ ವಿರುದ್ಧದ FIR ರದ್ದು! ಸುಪ್ರೀಂ ಕೋರ್ಟಿನಲ್ಲಿ ಅರುಣ್ ಶ್ಯಾಮ್ ವಾದ
    • 6 ಡ್ರೋನ್ ಗಳಲ್ಲಿ ಪಾಕ್ ನಿಂದ ಪಿಸ್ತೂಲ್, ಹೆರಾಯಿನ್ ಸಾಗಾಟ: ಧರೆಗುರುಳಿಸಿದ ಬಿಎಸ್ ಎಫ್..
    • ಶಿವದೂತ ಗುಳಿಗೆ ನಾಟಕದ "ಭೀಮರಾವ್" ರಮೇಶ್ ಕಲ್ಲಡ್ಕ ನಿಧನ!
    • ನೂರಾರು ಜನರಿಗೆ ಸಾಲಕೊಡಿಸುವ ನೆಪದಲ್ಲಿ ವಂಚನೆ: ರೋಶನ್ ಸಲ್ದಾನಾ ಪ್ರಕರಣ ಸಿಐಡಿಗೆ
    • ಕರ್ನಾಟಕದಲ್ಲಿ "ಮನೆಮನೆಗೆ ಪೊಲೀಸ್" ಏನು ಕಥೆ!
  • Popular Posts

    • 1
      ಡ್ರೋಣ್ ಕ್ಷೇತ್ರದ ಬಗ್ಗೆ ರಾಹುಲ್ ಗಾಂಧಿಯವರ ಹೇಳಿಕೆಗೆ ಡಿಎಫ್ ಐ ಅಧ್ಯಕ್ಷರ ಕೌಂಟರ್!
    • 2
      ಧರ್ಮಸ್ಥಳದ ಶವ ಹೂತಿಟ್ಟ ಸ್ಥಳಗಳ ಅಗೆತಕ್ಕೆ ಜೆಸಿಬಿ ಬರಬೇಕಾಯ್ತು!
    • 3
      ಸಮಸ್ಯೆ ಬಗೆಹರಿಯದಿದ್ದರೆ ಉಗ್ರ ಹೋರಾಟ ಅನಿವಾರ್ಯ -ನಳಿನ್ ಕುಮಾರ್ ಕಟೀಲ್
    • 4
      SSLC ಮಕ್ಕಳಿಗೆ ರಾಜ್ಯ ಸರಕಾರದಿಂದ ಶುಭ ಸುದ್ದಿ!
    • 5
      ಬಹುಮುಖ ಪ್ರತಿಭೆ ರಾಜಶ್ರೀ ಪೂಜಾರಿ ಇನ್ನಿಲ್ಲ!

  • Privacy Policy
  • Contact
© Tulunadu Infomedia.

Press enter/return to begin your search