• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕಂಕನಾಡಿಯಲ್ಲಿ ಲಿಫ್ಟ್ ನಲ್ಲಿ ಸಿಲುಕಿ ಸಾವನ್ನಪ್ಪಿದ 7 ವರ್ಷದ ಬಾಲಕ

Tulunadu News Posted On August 24, 2018


  • Share On Facebook
  • Tweet It

ಮಂಗಳೂರು: ಮಕ್ಕಳಿಗೆ ಲಿಫ್ಟ್ ನಲ್ಲಿ ಆಟವಾಡುವುದೆಂದರೆ ಎಲ್ಲಿಲ್ಲದ ಖುಷಿ. ಲಿಫ್ಟ್ ನಲ್ಲಿ ಒಂದು ಫ್ಲೋರ್ ನಿಂದ ಮತ್ತೊಂದು ಫ್ಲೋರ್ ಗೆ ಹೋಗಿ ವಾಪಾಸ್ ಬರುವುದು. ಲಿಫ್ಟ್ ಆಪರೇಟರ್ ಇಲ್ಲದಾಗ ತಾವೇ ಲಿಫ್ಟ್ ಚಲಾಯಿಸುವುದು ಇವೆಲ್ಲ ಮಕ್ಕಳಿಗೆ ಇನ್ನಿಲ್ಲದ ಖುಷಿ ಕೊಡುತ್ತವೆ.

ಆದರೆ ಮಕ್ಕಳ ಈ ಆಟ ಕೆಲವೊಮ್ಮೆ ಜೀವಕ್ಕೆ ಎರವಾಗುತ್ತವೆ. ಇಂತಹುದೇ ದುರಂತ ಮಂಗಳೂರಿನ ಕಂಕನಾಡಿ ಪರಿಸರದಲ್ಲಿ ನಡೆದಿದೆ. ಕಂಕನಾಡಿಯ ವಾಸ್ ಲೇನ್ ನಲ್ಲಿರುವ 25 ವರ್ಷ ಹಳೆಯ ಶಮಾ ಅಪಾರ್ಟ್ಮೆಂಟ್ ನಲ್ಲಿ ಈ ಘಟನೆ ಸಂಭವಿಸಿದೆ. ಬಾಲಕ ಮಹಮ್ಮದ್ ಸಿನಾನ್ (7) ಘಟನೆಯಲ್ಲಿ ಮೃತಪಟ್ಟ ದುರ್ದೈವಿ.

ನಿನ್ನೆ ಗುರುವಾರ ತಾಯಿ ಜೊತೆಗೆ ಮೂರು ಮಕ್ಕಳು ಶಾಪಿಂಗ್ ಗೆ ತೆರಳಲು ಸಿದ್ಧರಾಗಿ ನಿಂತಿದ್ದರು. ವಾಸವಿದ್ದ ಫ್ಲಾಟ್ ಗೆ ತಾಯಿ ಬೀಗ ಹಾಕುತ್ತಿದ್ದ ಸಂದರ್ಭ 7 ವರ್ಷದ ಸಿನಾನ್ ಏಕಾಏಕಿ ಲಿಫ್ಟ್ ನೊಳಗೆ ಹೋಗಿದ್ದಾನೆ. ಹಳೆ ಮಾದರಿಯ ಈ ಲಿಫ್ಟ್ ನೊಳಗೆ ಹೋಗಿ ಸರಿಯಾಗಿ ಬಾಗಿಲು ಭದ್ರಗೊಳಿಸದೇ ಲಿಫ್ಟ್ ನ ಕೆಳಹೋಗುವ ಬಟನ್ ಒತ್ತಿದ್ದಾನೆ ಎಂದು ಹೇಳಲಾಗಿದೆ. ಈ ಸಂದರ್ಭದಲ್ಲಿ ಬಾಲಕನ ತಲೆ ಲಿಫ್ಟ್ ನ ಸಂದಿಯಲ್ಲಿ ಸಿಲುಕಿದೆ.

ಬಾಲಕನ ಕಿರುಚಾಟ ಕೇಳಿ ತಾಯಿ ಓಡಿ ಬಂದಿದ್ದಾರೆ. ಇತರರ ಸಹಕಾರ ಪಡೆದು ಲಿಫ್ಟ್ ನ ಬಾಗಿಲು ಒಡೆದು ಬಾಲಕ ಸಿನನ್ ನನ್ನು ಆಸ್ಪತ್ರೆಗೆ ಕೊಂಡೊಯ್ಯಲಾಯಿತು . ಆದರೆ ಅದಾಗಲೇ ಬಾಲಕ ಸಿನಾನ್ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಮೃತ ಸಿನಾನ್ ಅಹಮ್ಮದ್ ಬಾಸಿಂ ಎಂಬುವವರ ಪುತ್ರನಾಗಿದ್ದು, ಈ ಘಟನೆಯ ಬಗ್ಗೆ ಕದ್ರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

  • Share On Facebook
  • Tweet It


- Advertisement -


Trending Now
ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
Tulunadu News June 29, 2022
ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
Tulunadu News June 27, 2022
Leave A Reply

  • Recent Posts

    • ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!
    • ನೂಪುರ್ ಹೇಳಿಕೆಗೆ ಮುಸ್ಲಿಮರು ದೇಶದಲ್ಲಿ ಬೆಂಕಿ ಇಟ್ಟರು, ಶೈಲಜಾ ಹೇಳಿಕೆಗೆ??
    • ಪತ್ನಿ ಸದಸ್ಯರಾದರೆ ಗಂಡ ಅಧಿಕಾರ ಚಲಾಯಿಸುವುದು ಬಂದ್!!
    • ಭಾರತದಲ್ಲಿ ಬಾಲ ಬಿಚ್ಚಿದ ಹಾಗೆ ಕುವೈಟ್ ನಲ್ಲಿ ನಡೆಯಲ್ಲ!!
  • Popular Posts

    • 1
      ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • 2
      ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • 3
      ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • 4
      ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • 5
      ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search