• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಕಂಕನಾಡಿಯಲ್ಲಿ ಲಿಫ್ಟ್ ನಲ್ಲಿ ಸಿಲುಕಿ ಸಾವನ್ನಪ್ಪಿದ 7 ವರ್ಷದ ಬಾಲಕ

Tulunadu News Posted On August 24, 2018
0


0
Shares
  • Share On Facebook
  • Tweet It

ಮಂಗಳೂರು: ಮಕ್ಕಳಿಗೆ ಲಿಫ್ಟ್ ನಲ್ಲಿ ಆಟವಾಡುವುದೆಂದರೆ ಎಲ್ಲಿಲ್ಲದ ಖುಷಿ. ಲಿಫ್ಟ್ ನಲ್ಲಿ ಒಂದು ಫ್ಲೋರ್ ನಿಂದ ಮತ್ತೊಂದು ಫ್ಲೋರ್ ಗೆ ಹೋಗಿ ವಾಪಾಸ್ ಬರುವುದು. ಲಿಫ್ಟ್ ಆಪರೇಟರ್ ಇಲ್ಲದಾಗ ತಾವೇ ಲಿಫ್ಟ್ ಚಲಾಯಿಸುವುದು ಇವೆಲ್ಲ ಮಕ್ಕಳಿಗೆ ಇನ್ನಿಲ್ಲದ ಖುಷಿ ಕೊಡುತ್ತವೆ.

ಆದರೆ ಮಕ್ಕಳ ಈ ಆಟ ಕೆಲವೊಮ್ಮೆ ಜೀವಕ್ಕೆ ಎರವಾಗುತ್ತವೆ. ಇಂತಹುದೇ ದುರಂತ ಮಂಗಳೂರಿನ ಕಂಕನಾಡಿ ಪರಿಸರದಲ್ಲಿ ನಡೆದಿದೆ. ಕಂಕನಾಡಿಯ ವಾಸ್ ಲೇನ್ ನಲ್ಲಿರುವ 25 ವರ್ಷ ಹಳೆಯ ಶಮಾ ಅಪಾರ್ಟ್ಮೆಂಟ್ ನಲ್ಲಿ ಈ ಘಟನೆ ಸಂಭವಿಸಿದೆ. ಬಾಲಕ ಮಹಮ್ಮದ್ ಸಿನಾನ್ (7) ಘಟನೆಯಲ್ಲಿ ಮೃತಪಟ್ಟ ದುರ್ದೈವಿ.

ನಿನ್ನೆ ಗುರುವಾರ ತಾಯಿ ಜೊತೆಗೆ ಮೂರು ಮಕ್ಕಳು ಶಾಪಿಂಗ್ ಗೆ ತೆರಳಲು ಸಿದ್ಧರಾಗಿ ನಿಂತಿದ್ದರು. ವಾಸವಿದ್ದ ಫ್ಲಾಟ್ ಗೆ ತಾಯಿ ಬೀಗ ಹಾಕುತ್ತಿದ್ದ ಸಂದರ್ಭ 7 ವರ್ಷದ ಸಿನಾನ್ ಏಕಾಏಕಿ ಲಿಫ್ಟ್ ನೊಳಗೆ ಹೋಗಿದ್ದಾನೆ. ಹಳೆ ಮಾದರಿಯ ಈ ಲಿಫ್ಟ್ ನೊಳಗೆ ಹೋಗಿ ಸರಿಯಾಗಿ ಬಾಗಿಲು ಭದ್ರಗೊಳಿಸದೇ ಲಿಫ್ಟ್ ನ ಕೆಳಹೋಗುವ ಬಟನ್ ಒತ್ತಿದ್ದಾನೆ ಎಂದು ಹೇಳಲಾಗಿದೆ. ಈ ಸಂದರ್ಭದಲ್ಲಿ ಬಾಲಕನ ತಲೆ ಲಿಫ್ಟ್ ನ ಸಂದಿಯಲ್ಲಿ ಸಿಲುಕಿದೆ.

ಬಾಲಕನ ಕಿರುಚಾಟ ಕೇಳಿ ತಾಯಿ ಓಡಿ ಬಂದಿದ್ದಾರೆ. ಇತರರ ಸಹಕಾರ ಪಡೆದು ಲಿಫ್ಟ್ ನ ಬಾಗಿಲು ಒಡೆದು ಬಾಲಕ ಸಿನನ್ ನನ್ನು ಆಸ್ಪತ್ರೆಗೆ ಕೊಂಡೊಯ್ಯಲಾಯಿತು . ಆದರೆ ಅದಾಗಲೇ ಬಾಲಕ ಸಿನಾನ್ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಮೃತ ಸಿನಾನ್ ಅಹಮ್ಮದ್ ಬಾಸಿಂ ಎಂಬುವವರ ಪುತ್ರನಾಗಿದ್ದು, ಈ ಘಟನೆಯ ಬಗ್ಗೆ ಕದ್ರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

0
Shares
  • Share On Facebook
  • Tweet It




Trending Now
ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
Tulunadu News February 25, 2026
ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
Tulunadu News February 25, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
  • Popular Posts

    • 1
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 2
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • 3
      ಕೇರಳ ಇನ್ನು ಮುಂದೆ ಕೇರಳಂ!
    • 4
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!

  • Privacy Policy
  • Contact
© Tulunadu Infomedia.

Press enter/return to begin your search