• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಕೇರಳ ಹಾಗು ಕೊಡಗಿನ ಸಂತ್ರಸ್ತರಿಗೆ ಪಿಗ್ಗಿ ಬ್ಯಾಂಕ್ ಮುಡುಪಿಟ್ಟ ಕಂದಮ್ಮಗಳು

Tulunadu News Posted On August 26, 2018
0


0
Shares
  • Share On Facebook
  • Tweet It

ಮಂಗಳೂರು: ಕೇರಳ ಹಾಗು ಕೊಡಗಿನಲ್ಲಿನಿರಂತರವಾಗಿ ಸುರಿದ ಮಳೆ ಅಪಾರ ನಷ್ಟವನ್ನು ಉಂಟು ಮಾಡಿದೆ. ಭೂ ಕುಸಿತ ಸೇರಿದಂತೆ ಸುರಿದ ಭಾರೀ ಮಳೆ ದುರಂತ ಪರಿಸ್ಥಿತಿಯನ್ನೇ ಸೃಷ್ಠಿಸಿದೆ. ಮಳೆಯ ತೀವ್ರತೆಗೆ ಕೊಡಗಿನಲ್ಲಿ ಭೂಮಿ ಕುಸಿಯುತ್ತಿದೆ. ಹಲವು ರಸ್ತೆಗಳು ಮುಚ್ಚಿ ಹೋಗಿವೆ , ಮನೆಗಳು ತರಗೆಲೆಗಳಂತೆ ಧರೆಗುರುಳಿವೆ. ಕೇರಳ ಸೇರದಂತೆ ಕೊಡಗಿನಲ್ಲಿ ಸಾವಿರಾರು ಜನ ಮನೆ ಮಠ ಕಳೆದುಕೊಂಡು ಅಕ್ಷರಸಹ ದಾರಿಗೆ ಬಿದ್ದಿದ್ದಾರೆ. ಸಂಭವಿಸಿರುವ ದುರಂತಕ್ಕೆ ಕೊಡಗು ಹಾಗು ಕೇರಳದ 13 ಜಿಲ್ಲೆಗಳು ನಲುಗಿ ಹೋಗಿದೆ.

ಭಾರೀ ಮಳೆ ಹಾಗು ಬೂ ಕುಸಿತ ದಿಂದಾದ ನಷ್ಟಗಳ ಬಗ್ಗೆ ಲೆಕ್ಕಾಚಾರ ಆರಂಭವಾಗಿದೆ. ಕೊಡಗು ಹಾಗು ಕೇರಳದ ಸಂತ್ರಸ್ತರಿಗಾಗಿ ದೇಶದ ಮೂಲೆ ಮೂಲೆ ಯಿಂದ ಸಹಾಯ ಹಸ್ತ ಹರಿದು ಬರುತ್ತಿದೆ. ಸ್ವಯಂ ಸೇವಾ ಸಂಸ್ಥೆಗಳು ,ಸಂಘಟನೆಗಳು ಟ್ರಸ್ಟ್ ಗಳು ನೆರೆ ಸಂತ್ರಸ್ತರ ನೆರವಿಗೆ ದಾವಿಸುತ್ತಿವೆ. ಎಲ್ಲೆಡೆಯಿಂದ ಸಹಾಯದ ಮಹಾಪೂರವೇ ಹರಿದು ಬರುತ್ತಿದೆ. ಈ ಮಧ್ಯೆ ಇಬ್ಬರು ಮುದ್ದು ಕಂದಮ್ಮಗಳ ಹೃದಯ ಈ ನೆರೆ ಸಂಗ್ರಸ್ತರಿಗಾಗಿ ಮಿಡಿದಿದೆ. ಈ ಮುದ್ದು ಕಂದಮ್ಮಗಳು ತಮ್ಮ ದೇಣಿಗೆ ಯನ್ನು ನೆರೆ ಸಂತೃಸ್ತರಿಗೆ ಅರ್ಪಿಸಿದ್ದಾರೆ. ಈ ಕಂದಮ್ಮಗಳ ನೆರವು ಸಾಮಜಿಕ ಜಾಲತಾಣಗಳಲ್ಲಿ ಬಾರಿ ಪ್ರಶಂಸೆಗೆ ಕಾರಣವಾಗಿದೆ.

ಬೆಂಗಳೂರಿನಲ್ಲಿ ನೆಲೆಸಿರುವ , ಕರಾವಳಿ ಮೂಲದ ಇಬ್ಬರು ಎಲ್ ಕೆ ಜಿ ಓದುತ್ತಿರುವ ಕಂದಮ್ಮಗಳು ತಮ್ಮ ಪಿಗ್ಗಿ ಬ್ಯಾಂಕ್ ನಲ್ಲಿ ಕೂಡಿಟ್ಟ ಹಣವನ್ನು ನೆರೆ ಪೀಡಿತರಿಗಾಗಿ ನೀಡಿದ್ದಾರೆ. ಬೆಂಗಳೂರಿನಲ್ಲಿ ಸಿವಿಲ್ ಎಂಜೀನಿಯರ್ ಅಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಡ್ಪಿನಂಗಡಿಯ ಪ್ರಶಾಂತ್ ರೈ ಯವರ ಪುತ್ರಿ ಪ್ರಾಪ್ತಿ ರೈ ಹಾಗೂ ಬೆಂಗಳೂರಿನ ಖಾಸಗಿ ಕಂಪೆನಿಯ ಉದ್ಯೋಗಿ ಕಾರ್ಕಳ ಮೂಲದ ಗೋಪಾಲ ಪೂಜಾರಿಯವರ ಮಗಳು ಜೀವಿತಾ ತಾವು ಉಳಿಸಿದ ಪಿಗ್ಗಿ ಬ್ಯಾಂಕಿನ ಹಣವನ್ನು ನೆರೆ ಸಂತ್ರಸ್ತರಿಗೆ ಕೊಡುವ ಮೂಲಕ ಕೇರಳ ಹಾಗು ಕೊಡಗಿನ ದುರಂತಕ್ಕೆ ಮಿಡಿದಿದ್ದಾರೆ. ಅಪ್ಪ, ಅಮ್ಮ, ಅಕ್ಕ,ಅಜ್ಜಾ, ಅಜ್ಜಿ , ಅಣ್ಣ, ಮಾಮ, ಹೀಗೆ ಪ್ರೀತಿಯಿಂದ ನೀಡಿದ ಚಿಕ್ಕ ಚಿಕ್ಕ ಮೊತ್ತವನ್ನು ಪಿಗ್ಗಿ ಬ್ಯಾಂಕ್ ನಲ್ಲಿ ಸಂಗ್ರಹಿಸಿದ್ದ ಈ ಪೋರಿಯರು ಹಣವನ್ನು ನೆರೆ ಸಂತ್ರಸ್ತರ ಪರವಾಗಿ ಧನ ಸಂಗ್ರಹ ಕ್ಕೆ ನೀಡಿದ್ದಾರೆ. ಈ ಮುದ್ದು ಮರಿಗಳ ಈ ಉದಾರತೆ ಇತರರಿಗೂ ಮಾದರಿ ಯಾಗಿದ್ದು ಸಮಾಜಿಕ ಜಾಲತಾಣದಲ್ಲಿ ಭಾರೀ ಪ್ರಶಂಸೆ ವ್ಯಕ್ತ ವಾಗಿದೆ.

0
Shares
  • Share On Facebook
  • Tweet It




Trending Now
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
Tulunadu News April 6, 2026
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
  • Popular Posts

    • 1
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search