• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಅಂಡರ್ ವರ್ಲ್ಡ್ ಡಾನ್ ಬನ್ನಂಜೆ ರಾಜಾನ ತಾಯಿ ವಿಲಾಸಿನಿ ಶೆಟ್ಟಿಗಾರ್ ವಿಧಿವಶ

Tulunadu News Posted On August 26, 2018
0


0
Shares
  • Share On Facebook
  • Tweet It

ಉಡುಪಿ: ಭೂಗತ ಪಾತಕಿ ಬನ್ನಂಜೆ ರಾಜಾ ಅವರ ತಾಯಿ ವಿಲಾಸಿನಿ ಶೆಟ್ಟಿಗಾರ್ ವಿಧಿವಶರಾಗಿದ್ದಾರೆ. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಬನ್ನಂಜೆ ರಾಜಾ ಅವರ ತಾಯಿ ಮನೆಯಲ್ಲಿ ಕಾಲು ಜಾರಿ ಬಿದ್ದು ಇಂದು ಭಾನುವಾರ ಮೃತಪಟ್ಟಿದ್ದಾರೆ. ಜುಲೈ.9 ರಂದು ತಾಯಿಯನ್ನು ಭೇಟಿಯಾಗಲು ಭೂಗತ ಪಾತಕಿ ಬನ್ನಂಜೆ ರಾಜಾ ಉಡುಪಿಗೆ ಬಂದಿದ್ದ. ತಾಯಿಯೊಂದಿಗೆ ಕೆಲಕಾಲ ಮನೆಯಲ್ಲಿ ಕಳೆದಿದ್ದ. ನಂತರ ಮತ್ತೆ ಬೆಳಗಾವಿ ಹಿಂಡಲಗಾ ಜೈಲಿಗೆ ಕಳುಹಿಸಲಾಗಿತ್ತು.

ಮಲ್ಪೆಯ ಕಲ್ಮಾಡಿಯಲ್ಲಿ ಬನ್ನಂಜೆ ರಾಜನ ತಾಯಿ ಮನೆ ಇದ್ದು, ಮನೆಯಲ್ಲಿ ಕಾಲು ಜಾರಿ ಬಿದ್ದು ತಾಯಿ ವಿಲಾಸಿನಿ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಆ ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸುವಷ್ಡರಲ್ಲೇ ವಿಲಾಸಿನಿ ಅವರು ಮೃತಪಟ್ಟಿದ್ದಾರೆ. ಬನ್ನಂಜೆ ರಾಜಾನ ತಾಯಿ ವಿಲಾಸಿನಿ ಮೃತದೇಹ ಸದ್ಯ ಅಜ್ಜರಕಾಡಿನ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿದೆ.

ಬನ್ನಂಜೆ ರಾಜಾನ ಕರೆತರುವ ಬಗ್ಗೆ ಕುಟುಂಬ ವಕೀಲರ ಜೊತೆ ಮಾತುಕತೆ ನಡೆಸಲಿದೆ ಎಂದು ಹೇಳಲಾಗಿದ್ದು, ಬನ್ನಂಜೆ ರಾಜ ಸದ್ಯ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದಾನೆ. ಒಂದು ವೇಳೆ ಬನ್ನಂಜೆ ರಾಜಾಗೆ ಉಡುಪಿಗೆ ಬರಲು ನ್ಯಾಯಾಲಯ ಅನುಮತಿ ನೀಡಲಿದೆಯೇ ಎನ್ನುವುದು ತಿಳಿದಿಲ್ಲ. ಬನ್ನಂಜೆ ರಾಜಾನ ಆಗಮನದ ಮಾಹಿತಿ ನಂತರ ಕುಟುಂಬದ ನಿರ್ಧಾರದ ಬಳಿಕವೇ ತಾಯಿಯ ಶವ ದಹನ ಮಾಡಲಿದ್ದಾರೆ. ಈಗಾಗಲೇ ಬನ್ನಂಜೆ ರಾಜನ ಬಂಟರು ಸಕಲ ಸಿದ್ಧತೆಗಳನ್ನು ಮಾಡಿದ್ದು, ನ್ಯಾಯಾಲಯ ರಾಜಾನಿಗೆ ಅವಕಾಶ ನೀಡುವ ಬಗ್ಗೆ ಚರ್ಚೆಗಳಾಗುತ್ತಿದೆ.

0
Shares
  • Share On Facebook
  • Tweet It


- Advertisement -


Trending Now
ಸ್ಮೃತಿ ಇರಾನಿ ಸಾಸ್ ಬಿ ಕಬಿ ಭಹೂ ತೀ - 2 ನಿಂದ ಮತ್ತೆ ಕಿರುತೆರೆಗೆ ವಾಪಾಸ್!
Tulunadu News May 31, 2025
ದುಬೈಯಲ್ಲಿ ಕೇರಳ ಸಮಾಜದ ಕಾರ್ಯಕ್ರಮಕ್ಕೆ ಅಫ್ರಿದಿ ಅತಿಥಿ!
Tulunadu News May 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸ್ಮೃತಿ ಇರಾನಿ ಸಾಸ್ ಬಿ ಕಬಿ ಭಹೂ ತೀ - 2 ನಿಂದ ಮತ್ತೆ ಕಿರುತೆರೆಗೆ ವಾಪಾಸ್!
    • ದುಬೈಯಲ್ಲಿ ಕೇರಳ ಸಮಾಜದ ಕಾರ್ಯಕ್ರಮಕ್ಕೆ ಅಫ್ರಿದಿ ಅತಿಥಿ!
    • ದಯವಿಟ್ಟು 500 ರೂಪಾಯಿ ನೋಟ್ ಬ್ಯಾನ್ ಮಾಡಿ - ಮೋದಿಗೆ ಚಂದ್ರಬಾಬು ನಾಯ್ಡು ಮತ್ತೆ ಮನವಿ!
    • ಅಯೋಧ್ಯೆಯಲ್ಲಿ ಇನ್ನು ಮಾಂಸಹಾರ, ಮದ್ಯ ಸಂಪೂರ್ಣ ನಿಷೇಧ!
    • ಪೊಲೀಸ್ ಕಮೀಷನರ್, ಎಸ್ಪಿ ವರ್ಗಾವಣೆ ಮಾಡಿ ಡ್ಯಾಮೇಜ್ ಕಂಟ್ರೋಲ್ ಮಾಡಿದ ಸರಕಾರ!
    • ಜಬ್ಬಾರ್ ನಿಂದ ರಹೀಂ ತನಕ, ದಕ್ಷಿಣ ಕನ್ನಡದ ಅಧ್ಯಾಯದಲ್ಲಿ ರಕ್ತದ ಸಹಿ ಕಂಡ ಪುಟಗಳು!
    • ಹುಬ್ಬಳ್ಳಿ ಕ್ರಿಮಿನಲ್ ಪ್ರಕರಣ ಹಿಂದೆಗೆದುಕೊಳ್ಳುವಂತಿಲ್ಲ - ಹೈಕೋರ್ಟ್ ಆದೇಶ... ರಾಜ್ಯ ಸರಕಾರಕ್ಕೆ ಮುಖಭಂಗ!
    • ಹನಿಮೂನಿಗೆ ಶಿಲ್ಲಾಂಗಿಗೆ ಹೋದ ನವಜೋಡಿ ಕಣ್ಮರೆ! ನಾಪತ್ತೆಯಾದ ಪ್ರದೇಶ ತುಂಬಾ ಡೇಂಜರ್!
    • ತಮಿಳಿನಿಂದಲೇ ಕನ್ನಡ ಹುಟ್ಟಿದ್ದು- ಕಮಲ್ ಹಾಸನ್ ಹೇಳಿಕೆಗೆ ಕರ್ನಾಟಕದಲ್ಲಿ ವಿರೋಧ..
    • ಬೆಂಗಳೂರಿನಲ್ಲಿ ಟ್ರೋಯಿಂಗ್ ಶುರು, ಮಂಗಳೂರಿನಲ್ಲಿಯೂ ಆರಂಭವಾಗಬೇಕಾ?

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search