• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಅಂಡರ್ ವರ್ಲ್ಡ್ ಡಾನ್ ಬನ್ನಂಜೆ ರಾಜಾನ ತಾಯಿ ವಿಲಾಸಿನಿ ಶೆಟ್ಟಿಗಾರ್ ವಿಧಿವಶ

Tulunadu News Posted On August 26, 2018
0


0
Shares
  • Share On Facebook
  • Tweet It

ಉಡುಪಿ: ಭೂಗತ ಪಾತಕಿ ಬನ್ನಂಜೆ ರಾಜಾ ಅವರ ತಾಯಿ ವಿಲಾಸಿನಿ ಶೆಟ್ಟಿಗಾರ್ ವಿಧಿವಶರಾಗಿದ್ದಾರೆ. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಬನ್ನಂಜೆ ರಾಜಾ ಅವರ ತಾಯಿ ಮನೆಯಲ್ಲಿ ಕಾಲು ಜಾರಿ ಬಿದ್ದು ಇಂದು ಭಾನುವಾರ ಮೃತಪಟ್ಟಿದ್ದಾರೆ. ಜುಲೈ.9 ರಂದು ತಾಯಿಯನ್ನು ಭೇಟಿಯಾಗಲು ಭೂಗತ ಪಾತಕಿ ಬನ್ನಂಜೆ ರಾಜಾ ಉಡುಪಿಗೆ ಬಂದಿದ್ದ. ತಾಯಿಯೊಂದಿಗೆ ಕೆಲಕಾಲ ಮನೆಯಲ್ಲಿ ಕಳೆದಿದ್ದ. ನಂತರ ಮತ್ತೆ ಬೆಳಗಾವಿ ಹಿಂಡಲಗಾ ಜೈಲಿಗೆ ಕಳುಹಿಸಲಾಗಿತ್ತು.

ಮಲ್ಪೆಯ ಕಲ್ಮಾಡಿಯಲ್ಲಿ ಬನ್ನಂಜೆ ರಾಜನ ತಾಯಿ ಮನೆ ಇದ್ದು, ಮನೆಯಲ್ಲಿ ಕಾಲು ಜಾರಿ ಬಿದ್ದು ತಾಯಿ ವಿಲಾಸಿನಿ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಆ ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸುವಷ್ಡರಲ್ಲೇ ವಿಲಾಸಿನಿ ಅವರು ಮೃತಪಟ್ಟಿದ್ದಾರೆ. ಬನ್ನಂಜೆ ರಾಜಾನ ತಾಯಿ ವಿಲಾಸಿನಿ ಮೃತದೇಹ ಸದ್ಯ ಅಜ್ಜರಕಾಡಿನ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿದೆ.

ಬನ್ನಂಜೆ ರಾಜಾನ ಕರೆತರುವ ಬಗ್ಗೆ ಕುಟುಂಬ ವಕೀಲರ ಜೊತೆ ಮಾತುಕತೆ ನಡೆಸಲಿದೆ ಎಂದು ಹೇಳಲಾಗಿದ್ದು, ಬನ್ನಂಜೆ ರಾಜ ಸದ್ಯ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದಾನೆ. ಒಂದು ವೇಳೆ ಬನ್ನಂಜೆ ರಾಜಾಗೆ ಉಡುಪಿಗೆ ಬರಲು ನ್ಯಾಯಾಲಯ ಅನುಮತಿ ನೀಡಲಿದೆಯೇ ಎನ್ನುವುದು ತಿಳಿದಿಲ್ಲ. ಬನ್ನಂಜೆ ರಾಜಾನ ಆಗಮನದ ಮಾಹಿತಿ ನಂತರ ಕುಟುಂಬದ ನಿರ್ಧಾರದ ಬಳಿಕವೇ ತಾಯಿಯ ಶವ ದಹನ ಮಾಡಲಿದ್ದಾರೆ. ಈಗಾಗಲೇ ಬನ್ನಂಜೆ ರಾಜನ ಬಂಟರು ಸಕಲ ಸಿದ್ಧತೆಗಳನ್ನು ಮಾಡಿದ್ದು, ನ್ಯಾಯಾಲಯ ರಾಜಾನಿಗೆ ಅವಕಾಶ ನೀಡುವ ಬಗ್ಗೆ ಚರ್ಚೆಗಳಾಗುತ್ತಿದೆ.

0
Shares
  • Share On Facebook
  • Tweet It




Trending Now
ಕೇರಳ ಇನ್ನು ಮುಂದೆ ಕೇರಳಂ!
Tulunadu News February 24, 2026
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Tulunadu News February 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
  • Popular Posts

    • 1
      ಕೇರಳ ಇನ್ನು ಮುಂದೆ ಕೇರಳಂ!
    • 2
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!

  • Privacy Policy
  • Contact
© Tulunadu Infomedia.

Press enter/return to begin your search