• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಪೊಲೀಸರ ಮೇಲೆಯೇ ಕಾರು ಚಲಾಯಿಸಿದ ಕೇರಳದ ಯುವಕ; ಇಬ್ಬರು ಪೊಲೀಸ್ ಪೇದೆಗಳು ಗಾಯ

Tulunadu News Posted On August 26, 2018
0


0
Shares
  • Share On Facebook
  • Tweet It

ಮಂಗಳೂರು: ಕೇರಳದ ಯುವಕನೊಬ್ಬ ಪೊಲೀಸರ ಮೇಲೆಯೇ ಕಾರು ಚಲಾಯಿಸಿದ ಪರಿಣಾಮ ಇಬ್ಬರು ಪೊಲೀಸ್ ಪೇದೆಗಳು ಗಾಯಗೊಂಡಿರುವ ಘಟನೆ ನಗರದ ಪಂಪ್ ವೆಲ್ ಸರ್ಕಲ್ ಬಳಿ ನಡೆದಿದೆ.

ಮಹಮ್ಮದ್ ಕುಂಞ(18) ಬಂಧಿತ ಆರೋಪಿಯಾಗಿದ್ದು, ಮೂಲತಃ ಕಾಸರಗೋಡು ನಿವಾಸಿ ಎಂಬ ಮಾಹಿತಿ ಲಭಿಸಿದೆ. ಕೇರಳದಿಂದ ಕಾರಿನಲ್ಲಿ ಯುವತಿಯೊಂದಿಗೆ ಆಗಮಿಸಿದ ಮಹಮ್ಮದ್ ಪೊಲೀಸ್ ಚೆಕ್ ಪೋಸ್ಟ್ ಬಳಿ ಪರಿಶೀಲನೆ ನಡೆಸಲು ಮುಂದಾದ ವೇಳೆ ಪೊಲೀಸರ ಮೇಲೆಯೇ ಕಾರು ಚಲಾಯಿಸಿದ್ದಾನೆ.

 

ಮಹಮ್ಮದ್ ಕಾರು ಪರಿಶೀಲನೆ ವೇಳೆ ಪರಾರಿಯಾಗಲು ವೇಗವಾಗಿ ಕಾರು ಚಲಾಯಿಸಿದ್ದರಿಂದ ಪೊಲೀಸ್ ಪೇದೆಗಳಾದ ಮಾರಪ್ಪ, ಕೆ.ಬಿ.ಸ ಗಜೇಂದ್ರ ಗಾಯಗೊಂಡಿದ್ದಾರೆ. ಇದರ ನಡುವೆಯೂ ಪೊಲೀಸರು ಮಹಮ್ಮದ್ ಕಾರನ್ನು ತಡೆಯಲು ಯಶಸ್ವಿಯಾಗಿದ್ದು, ಸದ್ಯ ಆತನನ್ನು ವಶಕ್ಕೆ ಪಡೆದಿದ್ದಾರೆ. ಘಟನೆಯಲ್ಲಿ ಗಾಯಗೊಂಡಿದ್ದ ಪೊಲೀಸರು ಸ್ಥಳೀಯ ಆಸ್ಪತೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

ಮಂಗಳೂರು ಭಾಗದಲ್ಲಿ ಕೇರಳ ಯುವಕರು ಕಾರಿನಲ್ಲಿ ಯುವತಿರೊಂದಿಗೆ ಆಗಮಿಸಿ ಅನೈತಿಕ ಚಟುವಟಿಕೆಗಳಲ್ಲಿ ಭಾಗವಹಿಸುವುದು ಹೆಚ್ಚಾಗಿರುವ ಕುರಿತು ಸ್ಥಳೀಯರು ಮಾಹಿತಿ ನೀಡಿದ್ದರು. ಪೊಲೀಸ್ ಇಲಾಖೆಯೂ ಸಹ ಕಾನೂನು ಬಾಹಿರ ಕೃತ್ಯಗಳನ್ನು ತಡೆಯಲು ಹೆಚ್ಚಿನ ಕ್ರಮಗೊಂಡಿದ್ದು, ಕೇರಳದಿಂದ ಆಗಮಿಸುವ ವಾಹನ ಮೇಲೆ ನಿಗಾ ವಹಿಸಿದೆ. ಘಟನೆಯ ಕುರಿತು ಮಂಗಳೂರಿನ ಕದ್ರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

0
Shares
  • Share On Facebook
  • Tweet It




Trending Now
Fortune Clock Casino No Deposit Bonus Codes
Tulunadu News May 19, 2026
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • Fortune Clock Casino No Deposit Bonus Codes
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
  • Popular Posts

    • Fortune Clock Casino No Deposit Bonus Codes
    • 2
      ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!

  • Privacy Policy
  • Contact
© Tulunadu Infomedia.

Press enter/return to begin your search