• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಕೊಡಗಿನ ಜೋಡುಪಾಲ, ಮದೆನಾಡಿನಲ್ಲಿ ದುರಂತ ಎದುರಾಗಿ ಹತ್ತು ದಿನ; ಸಾವಿರಾರು ನಿವಾಸಿಗಳು ಕೇಂದ್ರದಲ್ಲೇ!

Tulunadu News Posted On August 27, 2018
0


0
Shares
  • Share On Facebook
  • Tweet It

ಮಂಗಳೂರು: ಕೊಡಗಿನ ಜೋಡುಪಾಲ, ಮದೆನಾಡಿನಲ್ಲಿ ದುರಂತ ಎದುರಾಗಿ ಹತ್ತು ದಿನ ಕಳೆದಿವೆ. ಆದರೂ ಅಲ್ಲಿನ ಮೂರು ಗ್ರಾಮಗಳ ಸಾವಿರಾರು ನಿವಾಸಿಗಳು ಇನ್ನು ಕಲ್ಲುಗುಂಡಿ, ಸಂಪಾಜೆಯಲ್ಲಿರುವ ಕೇಂದ್ರದಲ್ಲೇ ತಂಗಿದ್ದಾರೆ.

ಈ ನಡುವೆ ತಮ್ಮ ತಮ್ಮ ಮನೆಗಳನ್ನು ನೋಡಿ ಹೋಗಲು ಬರುವ ಬಹುತೇಕ ನಿವಾಸಿಗಳು ಅಲ್ಲಿಂದ ಸಾಮಾಗ್ರಿಗಳನ್ನು ಹೊತ್ತು ಒಯ್ಯುತ್ತಿದ್ದಾರೆ. ಕೆಲವು ಮನೆಗಳಿಗೆ ಹಾನಿ ಆಗದಿದ್ದರೂ, ಇಲ್ಲಿ ಮತ್ತೆ ಮಳೆಯಾಗಿ ಭೂಕುಸಿತವಾದರೆ ಅಪಾಯ ಅನ್ನುವ ಭಾವನೆ ನಿವಾಸಿಗಳಲ್ಲಿದೆ. ಹೀಗಾಗಿ ಸರ್ಕಾರದಿಂದ ಸೂಕ್ತ ಜಾಗದಲ್ಲಿ ಪುನರ್ವಸತಿ ಮಾಡಿಕೊಟ್ಟರೆ ತಮ್ಮ ಮನೆಗಳನ್ನು ಬಿಟ್ಟು ಅಲ್ಲಿಗೆ ತೆರಳಲು ರೆಡಿಯಾಗಿದ್ದಾರೆ. ಅದಕ್ಕಾಗಿ ಸ್ವಯಂಸೇವಕರ ಜೊತೆಗೆ ಮನೆಗೆ ತೆರಳಿ, ಅಗತ್ಯ ವಸ್ತುಗಳನ್ನು ಮೂಟೆ ಕಟ್ಟಿ ಸಂತ್ರಸ್ತರ ಕೇಂದ್ರಕ್ಕೆ ಹೊತ್ತು ತರುತ್ತಿದ್ದಾರೆ.

ಇತ್ತೀಚೆಗೆ ಪ್ರಕೃತಿ ವಿಕೋಪ ನಿರ್ವಹಣಾ ಕೇಂದ್ರದ ತಜ್ಞರು ಸ್ಥಳ ಪರಿಶೀಲಿಸಿದ ಸಂದರ್ಭದಲ್ಲಿ ಜೋಡುಪಾಲ, ಮದೆನಾಡು, ಮಣ್ಣಂಗೇರಿ ಪ್ರದೇಶಗಳು ವಾಸಕ್ಕೆ ಯೋಗ್ಯವಲ್ಲ ಎಂದಿದ್ದರು. ಹೀಗಾಗಿ ದುರಂತದ ಭಯ ಸಂತ್ರಸ್ತರಲ್ಲಿ ಆವರಿಸಿದ್ದು, ಮತ್ತೆ ಬೆಟ್ಟಗಳ ಮಧ್ಯೆ ವಾಸ ಇರುವುದು ಬೇಡ ಎಂಬ ತೀರ್ಮಾನಕ್ಕೆ ಬಂದಿದ್ದಾರೆ.

ಇನ್ನೊಂದೆಡೆ ಘಟ್ಟಗಳ ವ್ಯಾಪ್ತಿಯಲ್ಲಿ ಈಗಾಗಲೇ ಬಿರುಕು ಬಿಟ್ಟು ನಿಂತಿರುವ ಕಾರಣ, ರಾಜ್ಯ ಸರ್ಕಾರ ಈ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಬೇಕಾಗಿದೆ. ಪಶ್ಚಿಮ ಘಟ್ಟಗಳ ವ್ಯಾಪ್ತಿಯಲ್ಲಿ ಮಾನವ ವಾಸ ತಕ್ಕುದಾಗಿಲ್ಲವಾದರೆ, ಬಡವರಿಗೆ ಪ್ರತ್ಯೇಕ ವಸತಿ ನಿರ್ಮಿಸಿ, ಅಲ್ಲಿರುವ ಕಾಫಿ ಎಸ್ಟೇಟ್‍ಗಳನ್ನು ವಶಕ್ಕೆ ತೆಗೆದುಕೊಳ್ಳುವ ದಿಟ್ಟ ನಿರ್ಧಾರ ಕೈಗೊಳ್ಳಬೇಕು ಎನ್ನುವ ಮಾತು ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • 4
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!

  • Privacy Policy
  • Contact
© Tulunadu Infomedia.

Press enter/return to begin your search