• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಕೆಎಂಎಫ್ ಹಾಲಿನಲ್ಲಿ ವಿಷಪೂರಿತ ವಸ್ತುಗಳನ್ನು ಕಲಬೆರಕೆ ಮಾಡುತ್ತಿದ್ದ ಜಾಲ ಪತ್ತೆ: 9 ಜನರ ಬಂಧನ!

Tulunadu News Posted On August 28, 2018
0


0
Shares
  • Share On Facebook
  • Tweet It

ಚಿಕ್ಕಮಗಳೂರು: ನಿಗಮಕ್ಕೆ ಸರಬರಾಜಾಗುತ್ತಿದ್ದ ಹಾಲಿನಲ್ಲಿ ವಿಷಪೂರಿತ ವಸ್ತುಗಳನ್ನು ಕಲಬೆರಕೆ ಮಾಡುತ್ತಿದ್ದ 9 ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಕರ್ನಾಟಕ ಹಾಲು ಒಕ್ಕೂಟ(ಕೆಎಂಎಫ್) ಅಧಿಕಾರಿಗಳು ಹಾಗೂ ಪೊಲೀಸರ ತಂಡ ಯಶಸ್ವಿಯಾಗಿದೆ.

ಹಾಸನ ಹಾಲು ಒಕ್ಕೂಟಕ್ಕೆ ಸರಬರಾಜಾಗುತ್ತಿರುವ ಹಾಲಿಗೆ ವಿಷಕಾರ ಪದಾರ್ಥಗಳನ್ನು ಮಿಶ್ರಣಮಾಡಲಾಗುತ್ತಿದೆ ಎಂದು ಅನಾಮಿಕ ವ್ಯಕ್ತಿಯೊಬ್ಬರು ಮಾರ್ಚ್ 20 ರಂದು ಹಾಸನ ಕೆಎಂಎಫ್ ಘಟಕಕ್ಕೆ ಪತ್ರ ಬರೆದಿದ್ದರು. ಇದರಿಂದ ಎಚ್ಚೆತ್ತ ಅಧಿಕಾರಿಗಳು ಸುದೀರ್ಘ ವಿಚಾರಣೆ ನಡೆಸಿ, ಜಿಲ್ಲೆಯಲ್ಲಿನ ಸುಮಾರು 9 ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಗಳು ಹಾಲಿನ ಕ್ಯಾನ್ ಸಾಗಾಣೆ ಮಾಡುವ ವಾಹನಗಳಲ್ಲೇ ಮಿಕ್ಸಿಂಗ್ ಮಾಡುತ್ತಿದ್ದರು. ಹಾಸನ, ಸಕಲೇಶಪುರ, ಚಿಕ್ಕಮಗಳೂರು ಹಾಗೂ ಬೀರೂರು ಘಟಕಗಳಿಂದ ಜಾಲಕ್ಕೆ ಸಾಥ್ ನೀಡಲಾಗುತಿತ್ತು. ಅಷ್ಟೇ ಅಲ್ಲದೇ ಮಾಚೇನಹಳ್ಳಿಯಲ್ಲೂ ಸಹ ಕಲಬೆರಕೆ ಜಾಲ ನಡೆಯುತಿತ್ತು ಎನ್ನುವ ವಿಚಾರ ಪ್ರಾಥಮಿಕ ತನಿಖೆಯಿಂದ ಬೆಳಕಿಗೆ ಬಂದಿದೆ.

ಈ ದಂಧೆಗೆ ಕೆಎಂಎಫ್ ಅಧಿಕಾರಿಗಳೇ ಬೆಂಬಲ ನೀಡುತ್ತಿದ್ದರಿಂದ ತನಿಖೆ ವಿಳಂಬಗೊಂಡಿತ್ತು. ಖುದ್ದು ಕೆಎಂಎಫ್‍ನ ಅಧಿಕಾರಿ ಸೌಮ್ಯರವರು ಮರು ತನಿಖೆಗೆ ಆದೇಶ ನೀಡಿ, ಚುರುಕುಗೊಳಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ತನಿಖೆ ಮುಂದುವರಿಸಿದ್ದು, ಘಟನೆ ಸಂಬಂಧ ಚಿಕ್ಕಮಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

0
Shares
  • Share On Facebook
  • Tweet It




Trending Now
ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
Tulunadu News November 18, 2025
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
  • Popular Posts

    • 1
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search