• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಕೆಎಂಎಫ್ ಹಾಲಿನಲ್ಲಿ ವಿಷಪೂರಿತ ವಸ್ತುಗಳನ್ನು ಕಲಬೆರಕೆ ಮಾಡುತ್ತಿದ್ದ ಜಾಲ ಪತ್ತೆ: 9 ಜನರ ಬಂಧನ!

Tulunadu News Posted On August 28, 2018
0


0
Shares
  • Share On Facebook
  • Tweet It

ಚಿಕ್ಕಮಗಳೂರು: ನಿಗಮಕ್ಕೆ ಸರಬರಾಜಾಗುತ್ತಿದ್ದ ಹಾಲಿನಲ್ಲಿ ವಿಷಪೂರಿತ ವಸ್ತುಗಳನ್ನು ಕಲಬೆರಕೆ ಮಾಡುತ್ತಿದ್ದ 9 ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಕರ್ನಾಟಕ ಹಾಲು ಒಕ್ಕೂಟ(ಕೆಎಂಎಫ್) ಅಧಿಕಾರಿಗಳು ಹಾಗೂ ಪೊಲೀಸರ ತಂಡ ಯಶಸ್ವಿಯಾಗಿದೆ.

ಹಾಸನ ಹಾಲು ಒಕ್ಕೂಟಕ್ಕೆ ಸರಬರಾಜಾಗುತ್ತಿರುವ ಹಾಲಿಗೆ ವಿಷಕಾರ ಪದಾರ್ಥಗಳನ್ನು ಮಿಶ್ರಣಮಾಡಲಾಗುತ್ತಿದೆ ಎಂದು ಅನಾಮಿಕ ವ್ಯಕ್ತಿಯೊಬ್ಬರು ಮಾರ್ಚ್ 20 ರಂದು ಹಾಸನ ಕೆಎಂಎಫ್ ಘಟಕಕ್ಕೆ ಪತ್ರ ಬರೆದಿದ್ದರು. ಇದರಿಂದ ಎಚ್ಚೆತ್ತ ಅಧಿಕಾರಿಗಳು ಸುದೀರ್ಘ ವಿಚಾರಣೆ ನಡೆಸಿ, ಜಿಲ್ಲೆಯಲ್ಲಿನ ಸುಮಾರು 9 ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಗಳು ಹಾಲಿನ ಕ್ಯಾನ್ ಸಾಗಾಣೆ ಮಾಡುವ ವಾಹನಗಳಲ್ಲೇ ಮಿಕ್ಸಿಂಗ್ ಮಾಡುತ್ತಿದ್ದರು. ಹಾಸನ, ಸಕಲೇಶಪುರ, ಚಿಕ್ಕಮಗಳೂರು ಹಾಗೂ ಬೀರೂರು ಘಟಕಗಳಿಂದ ಜಾಲಕ್ಕೆ ಸಾಥ್ ನೀಡಲಾಗುತಿತ್ತು. ಅಷ್ಟೇ ಅಲ್ಲದೇ ಮಾಚೇನಹಳ್ಳಿಯಲ್ಲೂ ಸಹ ಕಲಬೆರಕೆ ಜಾಲ ನಡೆಯುತಿತ್ತು ಎನ್ನುವ ವಿಚಾರ ಪ್ರಾಥಮಿಕ ತನಿಖೆಯಿಂದ ಬೆಳಕಿಗೆ ಬಂದಿದೆ.

ಈ ದಂಧೆಗೆ ಕೆಎಂಎಫ್ ಅಧಿಕಾರಿಗಳೇ ಬೆಂಬಲ ನೀಡುತ್ತಿದ್ದರಿಂದ ತನಿಖೆ ವಿಳಂಬಗೊಂಡಿತ್ತು. ಖುದ್ದು ಕೆಎಂಎಫ್‍ನ ಅಧಿಕಾರಿ ಸೌಮ್ಯರವರು ಮರು ತನಿಖೆಗೆ ಆದೇಶ ನೀಡಿ, ಚುರುಕುಗೊಳಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ತನಿಖೆ ಮುಂದುವರಿಸಿದ್ದು, ಘಟನೆ ಸಂಬಂಧ ಚಿಕ್ಕಮಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search