• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕೆಎಂಎಫ್ ಹಾಲಿನಲ್ಲಿ ವಿಷಪೂರಿತ ವಸ್ತುಗಳನ್ನು ಕಲಬೆರಕೆ ಮಾಡುತ್ತಿದ್ದ ಜಾಲ ಪತ್ತೆ: 9 ಜನರ ಬಂಧನ!

Tulunadu News Posted On August 28, 2018


  • Share On Facebook
  • Tweet It

ಚಿಕ್ಕಮಗಳೂರು: ನಿಗಮಕ್ಕೆ ಸರಬರಾಜಾಗುತ್ತಿದ್ದ ಹಾಲಿನಲ್ಲಿ ವಿಷಪೂರಿತ ವಸ್ತುಗಳನ್ನು ಕಲಬೆರಕೆ ಮಾಡುತ್ತಿದ್ದ 9 ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಕರ್ನಾಟಕ ಹಾಲು ಒಕ್ಕೂಟ(ಕೆಎಂಎಫ್) ಅಧಿಕಾರಿಗಳು ಹಾಗೂ ಪೊಲೀಸರ ತಂಡ ಯಶಸ್ವಿಯಾಗಿದೆ.

ಹಾಸನ ಹಾಲು ಒಕ್ಕೂಟಕ್ಕೆ ಸರಬರಾಜಾಗುತ್ತಿರುವ ಹಾಲಿಗೆ ವಿಷಕಾರ ಪದಾರ್ಥಗಳನ್ನು ಮಿಶ್ರಣಮಾಡಲಾಗುತ್ತಿದೆ ಎಂದು ಅನಾಮಿಕ ವ್ಯಕ್ತಿಯೊಬ್ಬರು ಮಾರ್ಚ್ 20 ರಂದು ಹಾಸನ ಕೆಎಂಎಫ್ ಘಟಕಕ್ಕೆ ಪತ್ರ ಬರೆದಿದ್ದರು. ಇದರಿಂದ ಎಚ್ಚೆತ್ತ ಅಧಿಕಾರಿಗಳು ಸುದೀರ್ಘ ವಿಚಾರಣೆ ನಡೆಸಿ, ಜಿಲ್ಲೆಯಲ್ಲಿನ ಸುಮಾರು 9 ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಗಳು ಹಾಲಿನ ಕ್ಯಾನ್ ಸಾಗಾಣೆ ಮಾಡುವ ವಾಹನಗಳಲ್ಲೇ ಮಿಕ್ಸಿಂಗ್ ಮಾಡುತ್ತಿದ್ದರು. ಹಾಸನ, ಸಕಲೇಶಪುರ, ಚಿಕ್ಕಮಗಳೂರು ಹಾಗೂ ಬೀರೂರು ಘಟಕಗಳಿಂದ ಜಾಲಕ್ಕೆ ಸಾಥ್ ನೀಡಲಾಗುತಿತ್ತು. ಅಷ್ಟೇ ಅಲ್ಲದೇ ಮಾಚೇನಹಳ್ಳಿಯಲ್ಲೂ ಸಹ ಕಲಬೆರಕೆ ಜಾಲ ನಡೆಯುತಿತ್ತು ಎನ್ನುವ ವಿಚಾರ ಪ್ರಾಥಮಿಕ ತನಿಖೆಯಿಂದ ಬೆಳಕಿಗೆ ಬಂದಿದೆ.

ಈ ದಂಧೆಗೆ ಕೆಎಂಎಫ್ ಅಧಿಕಾರಿಗಳೇ ಬೆಂಬಲ ನೀಡುತ್ತಿದ್ದರಿಂದ ತನಿಖೆ ವಿಳಂಬಗೊಂಡಿತ್ತು. ಖುದ್ದು ಕೆಎಂಎಫ್‍ನ ಅಧಿಕಾರಿ ಸೌಮ್ಯರವರು ಮರು ತನಿಖೆಗೆ ಆದೇಶ ನೀಡಿ, ಚುರುಕುಗೊಳಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ತನಿಖೆ ಮುಂದುವರಿಸಿದ್ದು, ಘಟನೆ ಸಂಬಂಧ ಚಿಕ್ಕಮಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search