• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ರಾಜೀವ್ ಗಾಂಧಿ ಮಾದರಿಯಲ್ಲಿ ಮೋದಿ ಹತ್ಯೆಗೆ ಸಂಚು, 6 ಶಂಕಿತರ ವಶ

Tulunadu News Posted On August 28, 2018


  • Share On Facebook
  • Tweet It

ಹೈದರಾಬಾದ್: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರನ್ನು ಹತ್ಯೆ ಮಾಡಿದ ಮಾದರಿಯಲ್ಲಿಯೇ ನರೇಂದ್ರ ಮೋದಿ ಅವರನ್ನು ಕೊಲ್ಲಲು ಸಂಚು ನಡೆಸಿದ್ದ ಕೆಲವು ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ತೆಲಂಗಾಣ, ಆಂದ್ರಪ್ರದೇಶದ ಕ್ರಾಂತಿಕಾರಿ ಕವಿ ಪಿ.ವರವರರಾವ್ ಅವರನ್ನು ಸೇರಿಸಿ ಒಟ್ಟು ಆರು ಮಂದಿಯನ್ನು ವಶಕ್ಕೆ ಪಡೆದಿರುವ ವಿಶೇಷ ಪೊಲೀಸರು ಆರೋಪಿಗಳ ಸತತ ವಿಚಾರಣೆ ನಡೆಸುತ್ತಿದ್ದಾರೆ.

ವಶಕ್ಕೆ ಪಡೆದಿರುವ ಎಲ್ಲರಿಗೂ ನಿಷೇಧಿತ ಮಾವೋವಾದಿ ಸಂಘಟನೆಗಳ ನಂಟಿದ್ದು, ಕವಿ ವರವರರಾವ್ ಅವರ ಪುತ್ರ ಆಂಧ್ರಪ್ರದೇಶ, ಗೋವಾ, ತೆಲಂಗಾಣ ಸೇರಿದಂತೆ ಹಲವು ರಾಜ್ಯಗಳ ಕೆಲವರಿಗೆ ‘ಮೋದಿ ಹತ್ಯೆಗೆ ಆರ್ಥಿಕ ನೆರವು ಬೇಕು’ ಎಂದು ಸಂದೇಶ ಕಳುಹಿಸಿದ್ದ ಎಂದು ಆರೋಪಿಸಲಾಗಿದೆ.

ಕ್ರಾಂತಿಕಾರಿ ಕವಿಯ ಬಂಧನ; ಪುಣೆಯಿಂದ ಇಂದು ಬೆಳ್ಳಂಬೆಳಿಗ್ಗೆ ಆಗಮಿಸಿದ ವಿಶೇಷ ಪೊಲೀಸರು, ಹೈದರಾಬಾದ್‌ನಲ್ಲಿರುವ ವರವರರಾವ್ ಅವರ ಮನೆ ಮೇಲೆ ದಾಳಿ ನಡೆಸಿ ಎಲ್ಲ ಸಂಪರ್ಕಗಳನ್ನು ಕಡಿದು, ಸತತ ಎಂಟು ಗಂಟೆಗಳ ಕಾಲ ಮನೆ ಸದಸ್ಯರ ವಿಚಾರಣೆ ನಡೆಸಿ ವರವರರಾವ್ ಅವರನ್ನು ಬಂಧಿಸಿದ್ದಾರೆ.

ಇಬ್ಬರು ಪತ್ರಕರ್ತರು, ಒಬ್ಬ ಪ್ರೊಫೆಸರ್ ವಶಕ್ಕೆ; ವರವರರಾವ್ ಜೊತೆಗೆ ಇನ್ನೂ ಏಳು ಜನರನ್ನು ಮೋದಿ ಹತ್ಯೆ ಸಂಚು ಪ್ರಕರಣದಲ್ಲಿ ವಶಕ್ಕೆ ಪಡೆಯಲಾಗಿದ್ದು, ಅವರಲ್ಲಿ ಇಬ್ಬರು ಪತ್ರಕರ್ತರು, ಇಎಫ್‌ಎಲ್‌ಯು ವಿಶ್ವವಿದ್ಯಾಲಯದ ಪ್ರೊಫೆಸರ್ ಒಬ್ಬರು ಇದ್ದಾರೆ ಎನ್ನಲಾಗಿದೆ. ವರವರರಾವ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಬ್ಯಾಂಕ್ ಖಾತೆ, ಇ-ಮೇಲ್ ತನಿಖೆ; ವರವರರಾವ್ ಅವರ ಬ್ಯಾಂಕ್ ಖಾತೆ, ಇ-ಮೇಲ್ ಸೇರಿ ಎಲ್ಲವನ್ನೂ ತನಿಖೆಗೆ ಒಳಪಡಿಸಲಾಗಿದೆ. ಕೆಲವು ತಿಂಗಳುಗಳ ಹಿಂದೆ ಅಷ್ಟೆ ಕೊರೆಗಾಂವ್ ಗಲಭೆ ತನಿಖೆ ವೇಳೆಯಲ್ಲಿ ಮೋದಿ ಅವರನ್ನು ರಾಜೀವ್ ಮಾದರಿಯಲ್ಲಿ ಹತ್ಯೆ ಮಾಡಬೇಕು ಎಂದು ಬರೆದಿದ್ದ ಪತ್ರವೊಂದು ಪೊಲೀಸರಿಗೆ ದೊರೆತಿತ್ತು. ಹಾಗಾಗಿ ಮೋದಿ ಅವರಿಗೆ ಗರಿಷ್ಟ ಭದ್ರತೆ ನೀಡಲಾಗುತ್ತಿದೆ.

ಆತ್ಮಹತ್ಯೆ ಬಾಂಬ್ ಸ್ಫೋಟಿಸಲು ಸಂಚು; ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರನ್ನು ತಮಿಳುನಾಡಿನ ಶ್ರೀಪೆರಂಬೂರಿನಲ್ಲಿ ಮಾನವ ಬಾಂಬ್ ಮೂಲಕ ಎಲ್‌ಟಿಟಿಇ ಉಗ್ರರು ಹತ್ಯೆ ಮಾಡಿದ್ದರು. ಅದೇ ಮಾದರಿಯಲ್ಲಿ ಮೋದಿ ಅವರನ್ನು ಹತ್ಯೆ ಮಾಡಲು ಸಂಚು ರೂಪಿಸಲಾಗಿದೆ.

ಬೇರೆ ರಾಜ್ಯಗಳಿಗೂ ಪೊಲೀಸರ ಭೇಟಿ; ವರವರರಾವ್ ಅವರು ನೆರವು ಬೇಡಿದ್ದ ವ್ಯಕ್ತಿಗಳನ್ನೂ ವಿಶೇಷ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಜಾರ್ಖಂಡ್, ಗೋವಾ, ಆಂಧ್ರಪ್ರದೇಶ, ದೆಹಲಿಗಳಿಗೂ ವಿಶೇಷ ಪೊಲೀಸ್ ದಳ ಭೇಟಿ ನೀಡಿ ಈಗಾಗಲೇ ತನಿಖೆ ಆರಂಭಿಸಿದೆ.

 

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search