• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಸಕಲೇಶಪುರ, ಸುಬ್ರಹ್ಮಣ್ಯ ಘಾಟ್ ರಸ್ತೆ ನಡುವೆ ಅಲ್ಲಲ್ಲಿ ಭೂಕುಸಿತ; ನಾಲ್ಕು ರೈಲುಗಳ ಸಂಚಾರ ರದ್ದು

Tulunadu News Posted On August 28, 2018


  • Share On Facebook
  • Tweet It

ಸಕಲೇಶಪುರ: ನೈಋತ್ಯ ರೈಲ್ವೆ ವಲಯದ ಮೈಸೂರು ವಿಭಾಗದಲ್ಲಿ ಸಕಲೇಶಪುರ ಹಾಗೂ ಸುಬ್ರಹ್ಮಣ್ಯ ಘಾಟ್ ರಸ್ತೆ ನಡುವೆ ಅಲ್ಲಲ್ಲಿ ಭೂಕುಸಿತ ಉಂಟಾಗಿರುವುದರಿಂದ ನಾಲ್ಕು ರೈಲುಗಳ ಸಂಚಾರವನ್ನು ರದ್ದುಪಡಿಸಲಾಗಿದೆ.  ನೈಋತ್ಯ ರೈಲ್ವೆಯ ಮೈಸೂರು ರೈಲ್ವೆ ವಿಭಾಗದಲ್ಲಿನ ದೋಣಿಗಲ್, ಯಡಕುಮರಿ ಹಾಗೂ ಕಡಗರವಳ್ಳಿ ವಿಭಾಗದಲ್ಲಿ ಹಲವೆಡೆ ಭೂ ಕುಸಿತ ಉಂಟಾಗಿದೆ.

ಈ ಹಿನ್ನೆಲೆಯಲ್ಲಿ ನಾಲ್ಕು ರೈಲುಗಳ ಸಂಚಾರ ರದ್ದುಪಡಿಸಲಾಗಿದೆ. ರೈಲು ಸಂಖ್ಯೆ 16517 ಬೆಂಗಳೂರು ಕ್ರಾಂತಿವೀರ ಸಂಗೊಳ್ಳಿ ರೈಲ್ವೆ ನಿಲ್ದಾಣದಿಂದ ಕಣ್ಣೂರು, ಕಾರವಾರ ಎಕ್ಸ್‌ಪ್ರೆಸ್ ರೈಲು ಆಗಸ್ಟ್ 28ರ ಸಂಚಾರವನ್ನು ರದ್ದುಪಡಿಸಲಾಗಿದೆ.

ಅದೇ ರೀತಿ ರೈಲು ಸಂಖ್ಯೆ 16511 ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಕಣ್ಣೂರು-ಕಾರವಾರ ಎಕ್ಸ್‌ಪ್ರೆಸ್ ರೈಲು ಆಗಸ್ಟ್ 29ರಿಂದ 31ರವರೆಗೆ ಮೂರು ದಿನಗಳ ಕಾಲ ರದ್ದುಪಡಿಸಲಾಗಿದೆ. ಅಲ್ಲದೆ ಕಣ್ಣೂರು-ಕಾರವಾರದಿಂದ ಬೆಂಗಳೂರಿಗೆ ಬರುವ ರೈಲು ಸಂಖ್ಯೆ 16518ರ ಆಗಸ್ಟ್ 29ರ ಸಂಚಾರವನ್ನು ರದ್ದುಪಡಿಸಲಾಗಿದೆ. ಅಲ್ಲದೆ ಕಣ್ಣೂರಿನಿಂದ ಬೆಂಗಳೂರಿಗೆ ಬರುವ ಇದೇ ರೈಲು ಸಂಚಾರವನ್ನು ಆಗಸ್ಟ್ 30ರಿಂದ ಸೆಪ್ಟೆಂಬರ್ 1ರವರೆಗೆ ಮೂರು ದಿನಗಳ ಕಾಲ ರದ್ದುಪಡಿಸಲಾಗಿದೆ ಎಂದು ನೈಋತ್ಯ ಪ್ರಕಟಣೆ ತಿಳಿಸಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search