• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಸಕಲೇಶಪುರ, ಸುಬ್ರಹ್ಮಣ್ಯ ಘಾಟ್ ರಸ್ತೆ ನಡುವೆ ಅಲ್ಲಲ್ಲಿ ಭೂಕುಸಿತ; ನಾಲ್ಕು ರೈಲುಗಳ ಸಂಚಾರ ರದ್ದು

Tulunadu News Posted On August 28, 2018
0


0
Shares
  • Share On Facebook
  • Tweet It

ಸಕಲೇಶಪುರ: ನೈಋತ್ಯ ರೈಲ್ವೆ ವಲಯದ ಮೈಸೂರು ವಿಭಾಗದಲ್ಲಿ ಸಕಲೇಶಪುರ ಹಾಗೂ ಸುಬ್ರಹ್ಮಣ್ಯ ಘಾಟ್ ರಸ್ತೆ ನಡುವೆ ಅಲ್ಲಲ್ಲಿ ಭೂಕುಸಿತ ಉಂಟಾಗಿರುವುದರಿಂದ ನಾಲ್ಕು ರೈಲುಗಳ ಸಂಚಾರವನ್ನು ರದ್ದುಪಡಿಸಲಾಗಿದೆ.  ನೈಋತ್ಯ ರೈಲ್ವೆಯ ಮೈಸೂರು ರೈಲ್ವೆ ವಿಭಾಗದಲ್ಲಿನ ದೋಣಿಗಲ್, ಯಡಕುಮರಿ ಹಾಗೂ ಕಡಗರವಳ್ಳಿ ವಿಭಾಗದಲ್ಲಿ ಹಲವೆಡೆ ಭೂ ಕುಸಿತ ಉಂಟಾಗಿದೆ.

ಈ ಹಿನ್ನೆಲೆಯಲ್ಲಿ ನಾಲ್ಕು ರೈಲುಗಳ ಸಂಚಾರ ರದ್ದುಪಡಿಸಲಾಗಿದೆ. ರೈಲು ಸಂಖ್ಯೆ 16517 ಬೆಂಗಳೂರು ಕ್ರಾಂತಿವೀರ ಸಂಗೊಳ್ಳಿ ರೈಲ್ವೆ ನಿಲ್ದಾಣದಿಂದ ಕಣ್ಣೂರು, ಕಾರವಾರ ಎಕ್ಸ್‌ಪ್ರೆಸ್ ರೈಲು ಆಗಸ್ಟ್ 28ರ ಸಂಚಾರವನ್ನು ರದ್ದುಪಡಿಸಲಾಗಿದೆ.

ಅದೇ ರೀತಿ ರೈಲು ಸಂಖ್ಯೆ 16511 ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಕಣ್ಣೂರು-ಕಾರವಾರ ಎಕ್ಸ್‌ಪ್ರೆಸ್ ರೈಲು ಆಗಸ್ಟ್ 29ರಿಂದ 31ರವರೆಗೆ ಮೂರು ದಿನಗಳ ಕಾಲ ರದ್ದುಪಡಿಸಲಾಗಿದೆ. ಅಲ್ಲದೆ ಕಣ್ಣೂರು-ಕಾರವಾರದಿಂದ ಬೆಂಗಳೂರಿಗೆ ಬರುವ ರೈಲು ಸಂಖ್ಯೆ 16518ರ ಆಗಸ್ಟ್ 29ರ ಸಂಚಾರವನ್ನು ರದ್ದುಪಡಿಸಲಾಗಿದೆ. ಅಲ್ಲದೆ ಕಣ್ಣೂರಿನಿಂದ ಬೆಂಗಳೂರಿಗೆ ಬರುವ ಇದೇ ರೈಲು ಸಂಚಾರವನ್ನು ಆಗಸ್ಟ್ 30ರಿಂದ ಸೆಪ್ಟೆಂಬರ್ 1ರವರೆಗೆ ಮೂರು ದಿನಗಳ ಕಾಲ ರದ್ದುಪಡಿಸಲಾಗಿದೆ ಎಂದು ನೈಋತ್ಯ ಪ್ರಕಟಣೆ ತಿಳಿಸಿದೆ.

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
  • Popular Posts

    • 1
      ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!

  • Privacy Policy
  • Contact
© Tulunadu Infomedia.

Press enter/return to begin your search