• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ದಂಪತಿಯ ಮೇಲೆ ಹಲ್ಲೆ ಮಾಡಿ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಸುಲಿಗೆ ಪ್ರಕರಣ; ಆರೋಪಿಯ ಬಂಧನ

Tulunadu News Posted On August 28, 2018
0


0
Shares
  • Share On Facebook
  • Tweet It

ಮಂಗಳೂರು; ಮಾರಕಾಯುಧಗಳಿಂದ ಹಲ್ಲೆ ನಡೆಸಿ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಸುಲಿಗೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ತೀರ್ಥಹಳ್ಳಿ ನಿವಾಸಿಯಾದ ಗುಂಡಪ್ಪ ಗೌಡ ಅವರ ಮಗ ಪ್ರವೀಣ್ ಕೆ.ಜಿ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಯಿಂದ ಅಂದಾಜು ರೂ.೭೫೦೦೦ ಮೌಲ್ಯದ ೩ ಪವನ್ ಚಿನ್ನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಘಟನೆಯ ವಿವರ; ಮೊಡಂಕಾಪು ಎಂಬಲ್ಲಿನ ನಿವಾಸಿ ಜನಾರ್ಧನ ಹೊಳ್ಳ ಮತ್ತು ಅವರ ಹೆಂಡತಿ ಇಬ್ಬರೇ ಮನೆಯಲ್ಲಿರುವಾಗ ಮನೆಗೆ ಹೊಕ್ಕಿದ ಇಬ್ಬರು ಅಪರಿಚಿತ ವ್ಯಕ್ತಿಗಳು ಮಾರಕಾಯುಧಗಳಿಂದ ಸದ್ರಿ ಜನಾರ್ಧನ್‌ರವರಿಗೆ ಹಲ್ಲೆ ಮಾಡಿ ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಸುಲಿಗೆ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಪೊಲೀಸ್ ಅಧೀಕ್ಷಕರಾದ ಡಾ.ಬಿ ಆರ್ ರವಿಕಾಂತೇ ಗೌಡ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಸಜಿತ್ ವಿ.ಜೆ ಮತ್ತು ಎಎಸ್‌ಪಿ ರವರಾದ ಋಷಿಕೇಶ್ ಸೋನವಾಣೆ ಅವರ ಸೂಕ್ತ ಮಾರ್ಗದರ್ಶನದಂತೆ ಬಂಟ್ವಾಳ ವೃತ್ತನಿರೀಕ್ಷಕರಾದ ಟಿ.ಡಿ ನಾಗರಾಜ್, ಅಪರಾಧ ಪತ್ತೆ ದಳದಲ್ಲಿದ್ದ ಚಂದ್ರಶೇಖರ್ ಪಿಎಸ್‌ಐ ಬಂಟ್ವಾಳ ನಗರ ಪೊಲೀಸ್ ಠಾಣೆ, ಹರೀಶ್ ಎಂ.ಆರ್ ಅಪರಾಧ ವಿಭಾಗ ಪಿಎಸ್‌ಐ ಬಂಟ್ವಾಳ ನಗರ ಪೊಲೀಸ್ ಠಾಣೆ, ಎಎಸ್‌ಐ ಸಂಜೀವ ಕೆ, ಸಿಬ್ಬಂಧಿಗಳಾದ ಸುರೇಶ್ ಪಡರ, ಸುಜು, ಅಬ್ದುಲ್ ಕರೀಂ, ಗಿರೀಶ್, ಯೋಗಿಶ್, ಕುಮಾರ್ ಹೆಚ್.ಕೆ, ವಿವೇಕ ಕೆ, ಮಲ್ಲಿಕ್ ವಿ, ಉಮೇಶ್ ಹೆಚ್, ಹನಮಂತ ತಳವಾರ್, ಪ್ರಶಾಂತ್, ಲಕ್ಷ್ಮಣ್, ಕೇದಾರ್ ಅವರು ಭಾಗವಹಿಸಿದ್ದರು. ಈ ಬಗ್ಗೆ ಬಂಟ್ವಾಳ ನಗರ ಠಾಣಾ ಅ.ಕ್ರ ೩೬೫/೨೦೧೮ ಕಲಂ: ೪೪೮.೩೯೭. ಐಪಿಸಿ. ಪ್ರಕರಣ ದಾಖಲಾಗಿದೆ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • 3
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search