• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಮಂಗಳೂರಿನ ಪಿಂಕಿ ‘ಕ್ಯೂಟೆಸ್ಟ್ ಇಂಡಿಯನ್ ಡಾಗ್ ಅಲೈವ್’ ಫೈನಲಿಸ್ಟ್

Tulunadu News Posted On August 28, 2018
0


0
Shares
  • Share On Facebook
  • Tweet It

ಮಂಗಳೂರು: ಮಂಗಳೂರಿನ ಒಂದು ನಾಯಿ ಇದೀಗ ದೇಶದ ಗಮನ ಸೆಳೆದಿದೆ. ಪೇಟಾ ಇಂಡಿಯಾ ನಡೆಸುವ ಬೀದಿಯಿಂದ ರಕ್ಷಿಸಲಾಗುವ ಶ್ವಾನಗಳಿಗಾಗಿ ನಡೆಸುವ ಕ್ಯೂಟೆಸ್ಟ್ ಇಂಡಿಯನ್ ಡಾಗ್ ಅಲೈವ್ ಸ್ಪರ್ಧೆಯ ಅಂತಿಮ ಸುತ್ತಿಗೆ ಆಯ್ಕೆಯಾಗಿದೆ. ಈ ಸ್ಪರ್ಧೆಯ ಅಂತಿಮ ಹಂತಕ್ಕೆ ದೇಶದಿಂದ ಆಯ್ಕೆಯಾಗಿರುವ ಹತ್ತು ಶ್ವಾನಗಳ ಪೈಕಿ ಕರ್ನಾಟಕದಿಂದ ಆಯ್ಕೆಯಾಗಿರುವ ಏಕೈಕ ನಾಯಿ ಇದು. ಪೇಟಾ ಇಂಡಿಯಾ ಈ ಬಾರಿ ದೇಶದ ವಿವಿಧ ಭಾಗಗಳ ಒಟ್ಟು ಹತ್ತು ಶ್ವಾನಗಳನ್ನು ಅಂತಿಮ ಸುತ್ತಿಗೆ ಆಯ್ಕೆ ಮಾಡಲಾಗಿದ್ದು, ಈ ಪೈಕಿ ನಗರದ ಜೀನ್ ಕ್ರಾಸ್ತಾ ರಕ್ಷಿಸಿ ಪೋಷಿಸಿದ ಪಿಂಕಿ ಹೆಸರಿನ ಶ್ವಾನ ಸ್ಥಾನ ಪಡೆದುಕೊಂಡಿದೆ.

ಕಳೆದ ಎಂಟು ವರ್ಷಗಳಿಂದ ಹಲವು ಶ್ವಾನಗಳನ್ನು ರಕ್ಷಣೆ ಮಾಡುತ್ತಿರುವ ಜೀನ್ ಕ್ರಾಸ್ತಾ ಕಳೆದ ವರ್ಷ ಜುಲೈ ನಲ್ಲಿ ಮಂಗಳಾ ಸ್ಟೇಡಿಯಂ ಬಳಿ ಸಾಗುತ್ತಿರುವಾಗ ನಿರ್ಮಾಣ ಹಂತದ ಕಟ್ಟಡದೊಳಗೆ ನಾಯಿ ಮರಿಯೊಂದು ಸಿಲುಕಿ ಅಳುತ್ತಿದ್ದ ದೃಶ್ಯವನ್ನು ನೋಡಿದ್ದರು. ನಂತರ ನಾಯಿ ಮರಿಯನ್ನು ತಮ್ಮ ಮನೆಗೆ ತೆಗೆದುಕೊಂಡ ಹೋದ ಕ್ರಾಸ್ತಾ ಅವರು ಅದನ್ನು ಉಪಚರಿಸಿದರು. ನಂತರ ಮನೆಯ ಮಂದಿಯ ವಿಶ್ವಾಸಕ್ಕೆ ಪಾತ್ರಳಾಗುವ ನಾಯಿ ಮರಿಯನ್ನು ಮನೆಯಲ್ಲೇ ಸಾಕುತ್ತಿದ್ದಾರೆ.

ಬೀದಿ ಬದಿಯಲ್ಲಿ ಅನ್ನ- ನೀರಿಲ್ಲದೆ ಅಲೆಯುತ್ತಿರುವ , ಕಟ್ಟಡ ಅಥವಾ ಇತರೆಡೆಗಳಲ್ಲಿ ಬಂಧಿಯಾಗಿರುವ, ಮಾಲಕನನ್ನು ಕಳೆದುಕೊಂಡು ಅಲೆದಾಡುವ ಶ್ವಾನಗಳನ್ನು ಅಥವಾ ಜೀವನ್ಮರಣ ಹೋರಾಟದ ಸ್ಥಿತಿಯಲ್ಲಿರುವುದನ್ನು ರಕ್ಷಿಸಿ ಅವುಗಳನ್ನು ಸಾಕಿದವರು, ತಮ್ಮ ಪ್ರೀತಿಯಲ್ಲಿ ಬೆಳೆದ ಶ್ವಾನಗಳ ಭಾವಚಿತ್ರಗಳನ್ನು ಕ್ಯೂಟೆಸ್ಟ್ ಇಂಡಿಯನ್ ಡಾಗ್ ಅಲೈವ್ ಸ್ಪರ್ಧೆಗೆ ಕಳುಹಿಸಿ ಕೊಡಬಹುದು. ಅದರಂತೆ ದೇಶದಾದ್ಯಂತ ಸುಮಾರು ಸಾವಿರಕ್ಕೂ ಹೆಚ್ಚು ದೇಶೀಯ ತಳಿಯ ರಕ್ಷಿಸಲ್ಪಟ್ಟ ಶ್ವಾನಗಳ ಫೋಟೋಗಳು ಪೇಟಾ ಸಂಸ್ಥೆಗೆ ಬಂದಿದ್ದವು.

ಶ್ವಾನಗಳ ರಕ್ಷಣೆಯ ಕಥೆಗಳನ್ನು ಆಲಿಸಿ ಮತ್ತು ಚಿತ್ರಗಳನ್ನು ಪರಿಶೀಲಿಸಿ ಸ್ಪರ್ಧೆಗೆ ಆಯ್ಕೆ ಮಾಡಲಾಗುತ್ತದೆ. ಈ ಬಾರಿ ದೇಶದ ವಿವಿಧ ಭಾಗಗಳ ಒಟ್ಟು ಹತ್ತು ಶ್ವಾನಗಳನ್ನು ಅಂತಿಮ ಸುತ್ತಿಗೆ ಆಯ್ಕೆ ಮಾಡಲಾಗಿದ್ದು, ಮಂಗಳೂರಿನ ಪಿಂಕಿ ಫೈನಲಿಸ್ಟ್. ಜೀನ್ ಕ್ರಾಸ್ತಾ ಅವರು ನಾಯಿ ಮರಿಯನ್ನು ರಕ್ಷಿಸುವ ಸಂದರ್ಭದಲ್ಲಿ ಆರು ತಿಂಗಳ ಚಿಕ್ಕ ಮರಿಯಾಗಿತ್ತು. ಈಗ ಸುಮಾರು ಒಂದೂವರೆ ವರ್ಷವಾಗಿದೆ. “ಪಿಂಕಿಯ ಮೂಗು ಮತ್ತು ಬೆರಳಿನ ಕೆಳಭಾಗದಲ್ಲಿ ಪಿಂಕ್ ಬಣ್ಣವಿತ್ತು. ಅದಕ್ಕಾಗಿ ಪಿಂಕಿ ಎಂದು ಹೆಸರಿಟ್ಟಿದ್ದೆವು. ಇದೀಗ ಕ್ಯೂಟೆಸ್ಟ್ ಇಂಡಿಯನ್ ಡಾಗ್ ಅಲೈವ್ ಕಂಟೆಸ್ಟ್ ಸ್ಪರ್ಧೆಯಲ್ಲಿ ಫೈನಲ್ ಗೆ ಆಯ್ಕೆಯಾಗಿರುವುದು ಸಂತಸ ತಂದಿದೆ” ಎನ್ನುತ್ತಾರೆ ನಾಯಿ ಮಾಲಕ ಜೀನ್ ಕ್ರಾಸ್ತಾ. ಕ್ಯೂಟೆಸ್ಟ್ ಇಂಡಿಯನ್ ಡಾಗ್ ಅಲೈವ್ ಕಂಟೆಸ್ಟ್ ಫೈನಲ್ ಸ್ಪರ್ಧೆ ಇಂದು ಮಂಗಳವಾರ ನಡೆಯಲಿದ್ದು, ನಾಳೆ ಅಂತಿಮ ಫಲಿತಾಂಶ ಬರಲಿದೆ.

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
  • Popular Posts

    • 1
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 2
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 3
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 4
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 5
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!

  • Privacy Policy
  • Contact
© Tulunadu Infomedia.

Press enter/return to begin your search