• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮಂಗಳೂರಿನ ಪಿಂಕಿ ‘ಕ್ಯೂಟೆಸ್ಟ್ ಇಂಡಿಯನ್ ಡಾಗ್ ಅಲೈವ್’ ಫೈನಲಿಸ್ಟ್

Tulunadu News Posted On August 28, 2018


  • Share On Facebook
  • Tweet It

ಮಂಗಳೂರು: ಮಂಗಳೂರಿನ ಒಂದು ನಾಯಿ ಇದೀಗ ದೇಶದ ಗಮನ ಸೆಳೆದಿದೆ. ಪೇಟಾ ಇಂಡಿಯಾ ನಡೆಸುವ ಬೀದಿಯಿಂದ ರಕ್ಷಿಸಲಾಗುವ ಶ್ವಾನಗಳಿಗಾಗಿ ನಡೆಸುವ ಕ್ಯೂಟೆಸ್ಟ್ ಇಂಡಿಯನ್ ಡಾಗ್ ಅಲೈವ್ ಸ್ಪರ್ಧೆಯ ಅಂತಿಮ ಸುತ್ತಿಗೆ ಆಯ್ಕೆಯಾಗಿದೆ. ಈ ಸ್ಪರ್ಧೆಯ ಅಂತಿಮ ಹಂತಕ್ಕೆ ದೇಶದಿಂದ ಆಯ್ಕೆಯಾಗಿರುವ ಹತ್ತು ಶ್ವಾನಗಳ ಪೈಕಿ ಕರ್ನಾಟಕದಿಂದ ಆಯ್ಕೆಯಾಗಿರುವ ಏಕೈಕ ನಾಯಿ ಇದು. ಪೇಟಾ ಇಂಡಿಯಾ ಈ ಬಾರಿ ದೇಶದ ವಿವಿಧ ಭಾಗಗಳ ಒಟ್ಟು ಹತ್ತು ಶ್ವಾನಗಳನ್ನು ಅಂತಿಮ ಸುತ್ತಿಗೆ ಆಯ್ಕೆ ಮಾಡಲಾಗಿದ್ದು, ಈ ಪೈಕಿ ನಗರದ ಜೀನ್ ಕ್ರಾಸ್ತಾ ರಕ್ಷಿಸಿ ಪೋಷಿಸಿದ ಪಿಂಕಿ ಹೆಸರಿನ ಶ್ವಾನ ಸ್ಥಾನ ಪಡೆದುಕೊಂಡಿದೆ.

ಕಳೆದ ಎಂಟು ವರ್ಷಗಳಿಂದ ಹಲವು ಶ್ವಾನಗಳನ್ನು ರಕ್ಷಣೆ ಮಾಡುತ್ತಿರುವ ಜೀನ್ ಕ್ರಾಸ್ತಾ ಕಳೆದ ವರ್ಷ ಜುಲೈ ನಲ್ಲಿ ಮಂಗಳಾ ಸ್ಟೇಡಿಯಂ ಬಳಿ ಸಾಗುತ್ತಿರುವಾಗ ನಿರ್ಮಾಣ ಹಂತದ ಕಟ್ಟಡದೊಳಗೆ ನಾಯಿ ಮರಿಯೊಂದು ಸಿಲುಕಿ ಅಳುತ್ತಿದ್ದ ದೃಶ್ಯವನ್ನು ನೋಡಿದ್ದರು. ನಂತರ ನಾಯಿ ಮರಿಯನ್ನು ತಮ್ಮ ಮನೆಗೆ ತೆಗೆದುಕೊಂಡ ಹೋದ ಕ್ರಾಸ್ತಾ ಅವರು ಅದನ್ನು ಉಪಚರಿಸಿದರು. ನಂತರ ಮನೆಯ ಮಂದಿಯ ವಿಶ್ವಾಸಕ್ಕೆ ಪಾತ್ರಳಾಗುವ ನಾಯಿ ಮರಿಯನ್ನು ಮನೆಯಲ್ಲೇ ಸಾಕುತ್ತಿದ್ದಾರೆ.

ಬೀದಿ ಬದಿಯಲ್ಲಿ ಅನ್ನ- ನೀರಿಲ್ಲದೆ ಅಲೆಯುತ್ತಿರುವ , ಕಟ್ಟಡ ಅಥವಾ ಇತರೆಡೆಗಳಲ್ಲಿ ಬಂಧಿಯಾಗಿರುವ, ಮಾಲಕನನ್ನು ಕಳೆದುಕೊಂಡು ಅಲೆದಾಡುವ ಶ್ವಾನಗಳನ್ನು ಅಥವಾ ಜೀವನ್ಮರಣ ಹೋರಾಟದ ಸ್ಥಿತಿಯಲ್ಲಿರುವುದನ್ನು ರಕ್ಷಿಸಿ ಅವುಗಳನ್ನು ಸಾಕಿದವರು, ತಮ್ಮ ಪ್ರೀತಿಯಲ್ಲಿ ಬೆಳೆದ ಶ್ವಾನಗಳ ಭಾವಚಿತ್ರಗಳನ್ನು ಕ್ಯೂಟೆಸ್ಟ್ ಇಂಡಿಯನ್ ಡಾಗ್ ಅಲೈವ್ ಸ್ಪರ್ಧೆಗೆ ಕಳುಹಿಸಿ ಕೊಡಬಹುದು. ಅದರಂತೆ ದೇಶದಾದ್ಯಂತ ಸುಮಾರು ಸಾವಿರಕ್ಕೂ ಹೆಚ್ಚು ದೇಶೀಯ ತಳಿಯ ರಕ್ಷಿಸಲ್ಪಟ್ಟ ಶ್ವಾನಗಳ ಫೋಟೋಗಳು ಪೇಟಾ ಸಂಸ್ಥೆಗೆ ಬಂದಿದ್ದವು.

ಶ್ವಾನಗಳ ರಕ್ಷಣೆಯ ಕಥೆಗಳನ್ನು ಆಲಿಸಿ ಮತ್ತು ಚಿತ್ರಗಳನ್ನು ಪರಿಶೀಲಿಸಿ ಸ್ಪರ್ಧೆಗೆ ಆಯ್ಕೆ ಮಾಡಲಾಗುತ್ತದೆ. ಈ ಬಾರಿ ದೇಶದ ವಿವಿಧ ಭಾಗಗಳ ಒಟ್ಟು ಹತ್ತು ಶ್ವಾನಗಳನ್ನು ಅಂತಿಮ ಸುತ್ತಿಗೆ ಆಯ್ಕೆ ಮಾಡಲಾಗಿದ್ದು, ಮಂಗಳೂರಿನ ಪಿಂಕಿ ಫೈನಲಿಸ್ಟ್. ಜೀನ್ ಕ್ರಾಸ್ತಾ ಅವರು ನಾಯಿ ಮರಿಯನ್ನು ರಕ್ಷಿಸುವ ಸಂದರ್ಭದಲ್ಲಿ ಆರು ತಿಂಗಳ ಚಿಕ್ಕ ಮರಿಯಾಗಿತ್ತು. ಈಗ ಸುಮಾರು ಒಂದೂವರೆ ವರ್ಷವಾಗಿದೆ. “ಪಿಂಕಿಯ ಮೂಗು ಮತ್ತು ಬೆರಳಿನ ಕೆಳಭಾಗದಲ್ಲಿ ಪಿಂಕ್ ಬಣ್ಣವಿತ್ತು. ಅದಕ್ಕಾಗಿ ಪಿಂಕಿ ಎಂದು ಹೆಸರಿಟ್ಟಿದ್ದೆವು. ಇದೀಗ ಕ್ಯೂಟೆಸ್ಟ್ ಇಂಡಿಯನ್ ಡಾಗ್ ಅಲೈವ್ ಕಂಟೆಸ್ಟ್ ಸ್ಪರ್ಧೆಯಲ್ಲಿ ಫೈನಲ್ ಗೆ ಆಯ್ಕೆಯಾಗಿರುವುದು ಸಂತಸ ತಂದಿದೆ” ಎನ್ನುತ್ತಾರೆ ನಾಯಿ ಮಾಲಕ ಜೀನ್ ಕ್ರಾಸ್ತಾ. ಕ್ಯೂಟೆಸ್ಟ್ ಇಂಡಿಯನ್ ಡಾಗ್ ಅಲೈವ್ ಕಂಟೆಸ್ಟ್ ಫೈನಲ್ ಸ್ಪರ್ಧೆ ಇಂದು ಮಂಗಳವಾರ ನಡೆಯಲಿದ್ದು, ನಾಳೆ ಅಂತಿಮ ಫಲಿತಾಂಶ ಬರಲಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search