• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಅಪಘಾತದಲ್ಲಿ ಎನ್‌ಟಿಆರ್ ಪುತ್ರ ನಂದಮೂರಿ ಹರಿಕೃಷ್ಣ ದುರ್ಮರಣ

Tulunadu News Posted On August 29, 2018
0


0
Shares
  • Share On Facebook
  • Tweet It

ಹೈದರಾಬಾದ್: ತೆಲುಗು ಚಿತ್ರರಂಗದ ಖ್ಯಾತ ನಟ ಎನ್‌.ಟಿ ರಾಮರಾವ್ ಅವರ ಮಗ, ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರ ಬಾಮೈದ ನಂದಮೂರಿ ಹರಿಕೃಷ್ಣ (61) ಬುಧವಾರ ನಸುಕಿನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಅಭಿಮಾನಿಯ ಮದುವೆಯಲ್ಲಿ ಭಾಗವಹಿಸಲು 4.30ರ ಸಮಯದಲ್ಲಿ ಅವರು ಮನೆಯಿಂದ ಹೊರಟಿದ್ದರು.

ನೆಲ್ಲೂರು ಜಿಲ್ಲೆಯ ಕಾವಲಿಗೆ ತೆರಳುತ್ತಿದ್ದಾಗ ತೆಲಂಗಾಣದ ನಲ್ಗೊಂಡ ಬಳಿಯ ಅನ್ನೆಪರ್ತಿಯಲ್ಲಿ ಈ ಅಪಘಾತ ಸಂಭವಿಸಿದೆ. ತಲೆಗೆ ತೀವ್ರವಾಗಿ ಗಾಯಗೊಂಡಿದ್ದ ಹರಿಕೃಷ್ಣ ಅವರನ್ನು ಕಾಮಿನೇನಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸ್ವಯಂ ಕಾರುಚಾಲನೆ ಮಾಡುತ್ತಿದ್ದ ಹರಿಕೃಷ್ಣ, ಅತಿ ವೇಗದಿಂದ ಚಲಾಯಿಸುತ್ತಿದ್ದರು. ಆಗ ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿಯಾಗಿದೆ ಎನ್ನಲಾಗಿದೆ. ಅವರ ಜತೆಗಿದ್ದ ಇನ್ನೂ ಇಬ್ಬರಿಗೆ ಗಾಯಗಳಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಹರಿಕೃಷ್ಣ ಅವರಿಗೆ ಮೊದಲ ಪತ್ನಿಯಿಂದ ಜಾನಕಿ ರಾಮ್, ಕಲ್ಯಾಣ ರಾಮ್ ಮತ್ತು ಸುಹಾಸಿನಿ ಎಂಬ ಮಕ್ಕಳಿದ್ದಾರೆ. ಬಳಿಕ ಮತ್ತೊಂದು ಮದುವೆಯಾಗಿದ್ದ ಅವರಿಗೆ ಜೂನಿಯರ್ ಎನ್‌ಟಿಆರ್ ಎಂದೇ ಖ್ಯಾತರಾದ ತಾರಕ ರಾಮರಾವ್ ಜನಿಸಿದ್ದರು. ಹರಿಕೃಷ್ಣ ಅವರ ಮೊದಲ ಮಗ ನಂದಮೂರಿ ಜಾನಕಿರಾಮ್ 2014ರಲ್ಲಿ ಕಾರು ಅಪಘಾತದಲ್ಲಿ ಮೃತಪಟ್ಟಿದ್ದರು. ಜೂನಿಯರ್ ಎನ್‌ಟಿಆರ್ ಕೂಡ 2009ರಲ್ಲಿ ಕಾರು ಅಪಘಾತದಲ್ಲಿ ಗಾಯಗೊಂಡಿದ್ದರು. 1956ರ ಸೆಪ್ಟೆಂಬರ್ 2ರಂದು ಆಂಧ್ರಪ್ರದೇಶದ ನಿಮ್ಮಕರುದಲ್ಲಿ ಜನಿಸಿದ್ದ ಹರಿಕೃಷ್ಣ ಬಾಲನಟನಾಗಿ ಕಾಣಿಸಿಕೊಂಡಿದ್ದರು.

ತೆಲುಗು ಚಿತ್ರರಂಗದ ಖ್ಯಾತ ನಟ, ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ನಂದಮೂರಿ ತಾರಕ ರಾಮರಾವ್ (ಎನ್‌ಟಿಆರ್) ಅವರ ನಾಲ್ಕನೆಯ ಮಗನಾಗಿದ್ದ ಹರಿಕೃಷ್ಣ, ತೆಲುಗು ದೇಶಂ ಪಾರ್ಟಿಯಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದರು. ಶ್ರೀ ಕೃಷ್ಣಾವತಾರಂ ಚಿತ್ರದ ಮೂಲಕ 1964ರಲ್ಲಿ ಬಾಲ ಕೃಷ್ಣನ ಪಾತ್ರದಲ್ಲಿ ಮೊದಲ ಬಾರಿಗೆ ತೆರೆ ಮೇಲೆ ಕಾಣಿಸಿದ್ದಕೊಂಡಿದ್ದ ಹರಿಕೃಷ್ಣ, ತಲ್ಲ ಪೆಲ್ಲಮಾ, ತಾತಮ್ಮ ಕಾಲ, ರಾಮ್ ರಹೀಮ್, ದಾನ ವೀರ ಶೂರ ಕರ್ಣ ಸಿನಿಮಾಗಳಲ್ಲಿ ನಟಿಸಿದ್ದರು. 1977ರಿಂದ 1998ರವರೆಗೂ ಅವರು ಮತ್ತೆ ಬಣ್ಣಹಚ್ಚಿರಲಿಲ್ಲ. ಶ್ರೀ ರಾಮುಲಯ್ಯಾ ಸಿನಿಮಾದ ಮೂಲಕ ಮತ್ತೆ ಬೆಳ್ಳಿತೆರೆಗೆ ಪ್ರವೇಶಿಸಿದ್ದರು. ಸೀತಾರಾಮ ರಾಜು, ಲಹಿರಿ ಲಹಿರಿ ಲಹಿರಿಲೊ, ಶಿವರಾಮ ರಾಜು, ಸೀತಯ್ಯಾ, ಟೈಗರ್ ಹರಿಶ್ಚಂದ್ರ ಪ್ರಸಾದ್, ಸ್ವಾಮಿ ಚಿತ್ರಗಳಲ್ಲಿ ನಟಿಸಿದ್ದರು.

0
Shares
  • Share On Facebook
  • Tweet It




Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Najlepsze bonusy i sloty w polskim kasynie online
Tulunadu News May 29, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ

  • Privacy Policy
  • Contact
© Tulunadu Infomedia.

Press enter/return to begin your search