• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ರಕ್ಷಣಾ ಕಾರ್ಯ ನಿರ್ವಹಿಸಿದ ಪೊಲೀಸರ ಹೆಸರು ರಾಜ್ಯ ಪ್ರಶಸ್ತಿಗೆ ಶಿಫಾರಸ್ಸು

Tulunadu News Posted On August 31, 2018
0


0
Shares
  • Share On Facebook
  • Tweet It

ಮಂಗಳೂರು : ಕೊಡಗಿನ ಗಡಿಭಾಗದ ಜೋಡುಪಾಲ ,ಮದೆನಾಡು ಸೆರೀದಂತೆ ಇನ್ನಿತರಕಡೆ ಜಲಸ್ಪೋಟ ಸೇರಿದಂತೆ ಭೂಕುಸಿತ ದುರಂತ ಸಂದರ್ಭದಲ್ಲಿ ಅಪಾಯ ಲೆಕ್ಕಿಸದೇ ನೂರಾರು ಜನರ ಪ್ರಾಣ ರಕ್ಷಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ಅಧಿಕಾರಿ ಗಣೇಶ್ ಗೌಡ ಸೇರಂದತೆ ಇನ್ನಿತರ ಸಿಬ್ಬಂದಿ ಗಳಿಗೆ ಬಹುಮಾನ ಘೋಷಿಸಲಾಗಿದ್ದು ಮುಂದಿನ ವರ್ಷ ಮುಖ್ಯ ಮಂತ್ರಿ ಪದಕಕ್ಕೂ ಇವರ ಹೆಸರು ಶೀಫಾರಸ್ಸು ಮಾಡಲಾಗುವುದೆಂದು ರಾಜ್ಯ ಕಾನೂನು ಸುವ್ಯವಸ್ತೆ ವಿಭಾಗದ ಎಡಿಜಿಪಿ ಕಮಲ್ ಪಂಥ್ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ದುರಂತ ಸಂಭವಿಸಿದ ಸಂದರ್ಭದಲ್ಲಿ ಹಿರಿಯ ಅಧಿಕಾರಿಗಳ ಅದೇಶಕ್ಕೆ ಕಾಯದೇ ತಮ್ಮ ಅಧಿಕಾರ ವ್ಯಾಪ್ತಿಗೆ ಒಳಪಡದ ಸ್ಥಳಕ್ಕೆ ತೆರಳಿ ಅಪಾಯ ಲೆಕ್ಕಿಸದೇ ನೂರಾರು ಜನರ ಪ್ರಾಣ ರಕ್ಷಣೆ ಮಾಡಿದ ಪೊಲೀಸ್ ಅಧಿಕಾರಿಗಳು ಹಾಗು ಸಿಬಂಧಿಗಳ ಸಾಹಸ ವನ್ನುಕೊಂಡಾಡಿದರು. ಇದು ಪೊಲೀಸ್ ಇಲಾಖೆಯ ನಿಸ್ವಾರ್ಥ ಸೇವೆಯ ಪ್ರತೀಕ ಎಂದು ಅಭಿಪ್ರಾಯ ಪಟ್ಟರು. ಪೊಲೀಸರೊಂದಿಗೆ ಕೈ ಜೋಡಿಸಿದ್ದ ಕೆಲ ಯುವಕರ ಕಾರ್ಯವನ್ನು ಕಮಲ್ ಪಂಥ್ ಶ್ಲಾಘಿಸಿದರು.

ಮಂಗಳೂರು ನಗರ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆಗೆ ಬೆಂಗಳೂರು ಮಾದರಿಯಲ್ಲಿ ಪೊಲೀಸ್ ಸಿಬ್ಬಂದಿಯನ್ನು ನೇಮಕ ಮಾಡಲು ಚಿಂತಿಸಲಾಗಿದೆ ಎಂದು ಅವರು ತಿಳಿಸಿದರು.ರಾಜ್ಯದಲ್ಲಿ ವಿವಿಧ‌ ಪೊಲೀಸ್ ಠಾಣೆಗಳಲ್ಲಿ ಅಗತ್ಯವಿರುವ ಪೊಲೀಸ್ ಸಿಬ್ಬಂದಿ ನೇಮಕಾತಿ ಬಗ್ಗೆ ಚರ್ಚಿಸಲಾಗಿದೆ.

ದಕ್ಷಿಣ ಕನ್ನಡ ಮತ್ತು ಮಂಗಳೂರು ಪೊಲೀಸ್ ವ್ಯಾಪ್ತಿಯಲ್ಲಿ ಕೆಲಸ ಜಾಸ್ತಿಯಿರುವ ಹಿನ್ನೆಲೆಯಲ್ಲಿ ಬೆಂಗಳೂರು ಮಾದರಿಯಲ್ಲೇ ಪೊಲೀಸ್ ಸಿಬ್ಬಂದಿ ನೇಮಕ ಮಾಡುವುದುದರ ಬಗ್ಗೆ ಚಿಂತಿಸಲಾಗಿದೆ. ಅಲ್ಲದೆ ಧರ್ಮವೀರ್ ಸಮಿತಿ ನೀಡಿರುವ ವರದಿಯ ಆಧಾರದಲ್ಲಿ ಯೋಜನೆ ರೂಪಿಸಲಾಗುವುದೆಂದು ಅವರು ಹೇಳಿದರು. ರಾಜ್ಯಾದ್ಯಂತ ಡ್ರಗ್ ಮಾಫಿಯಾವನ್ನು ಬುಡದಿಂದ ಕಿತ್ತೋಗೆಯಲು ಪೊಲೀಸ್ ಇಲಾಖೆ ಮುಂದಾಗಿದೆ. ಅಲ್ಲದೇ ಡ್ರಗ್ಸ್ ಮಾಫಿಯಾದಲ್ಲಿ ಕೈಜೋಡಿಸುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search