• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ರಕ್ಷಣಾ ಕಾರ್ಯ ನಿರ್ವಹಿಸಿದ ಪೊಲೀಸರ ಹೆಸರು ರಾಜ್ಯ ಪ್ರಶಸ್ತಿಗೆ ಶಿಫಾರಸ್ಸು

Tulunadu News Posted On August 31, 2018
0


0
Shares
  • Share On Facebook
  • Tweet It

ಮಂಗಳೂರು : ಕೊಡಗಿನ ಗಡಿಭಾಗದ ಜೋಡುಪಾಲ ,ಮದೆನಾಡು ಸೆರೀದಂತೆ ಇನ್ನಿತರಕಡೆ ಜಲಸ್ಪೋಟ ಸೇರಿದಂತೆ ಭೂಕುಸಿತ ದುರಂತ ಸಂದರ್ಭದಲ್ಲಿ ಅಪಾಯ ಲೆಕ್ಕಿಸದೇ ನೂರಾರು ಜನರ ಪ್ರಾಣ ರಕ್ಷಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ಅಧಿಕಾರಿ ಗಣೇಶ್ ಗೌಡ ಸೇರಂದತೆ ಇನ್ನಿತರ ಸಿಬ್ಬಂದಿ ಗಳಿಗೆ ಬಹುಮಾನ ಘೋಷಿಸಲಾಗಿದ್ದು ಮುಂದಿನ ವರ್ಷ ಮುಖ್ಯ ಮಂತ್ರಿ ಪದಕಕ್ಕೂ ಇವರ ಹೆಸರು ಶೀಫಾರಸ್ಸು ಮಾಡಲಾಗುವುದೆಂದು ರಾಜ್ಯ ಕಾನೂನು ಸುವ್ಯವಸ್ತೆ ವಿಭಾಗದ ಎಡಿಜಿಪಿ ಕಮಲ್ ಪಂಥ್ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ದುರಂತ ಸಂಭವಿಸಿದ ಸಂದರ್ಭದಲ್ಲಿ ಹಿರಿಯ ಅಧಿಕಾರಿಗಳ ಅದೇಶಕ್ಕೆ ಕಾಯದೇ ತಮ್ಮ ಅಧಿಕಾರ ವ್ಯಾಪ್ತಿಗೆ ಒಳಪಡದ ಸ್ಥಳಕ್ಕೆ ತೆರಳಿ ಅಪಾಯ ಲೆಕ್ಕಿಸದೇ ನೂರಾರು ಜನರ ಪ್ರಾಣ ರಕ್ಷಣೆ ಮಾಡಿದ ಪೊಲೀಸ್ ಅಧಿಕಾರಿಗಳು ಹಾಗು ಸಿಬಂಧಿಗಳ ಸಾಹಸ ವನ್ನುಕೊಂಡಾಡಿದರು. ಇದು ಪೊಲೀಸ್ ಇಲಾಖೆಯ ನಿಸ್ವಾರ್ಥ ಸೇವೆಯ ಪ್ರತೀಕ ಎಂದು ಅಭಿಪ್ರಾಯ ಪಟ್ಟರು. ಪೊಲೀಸರೊಂದಿಗೆ ಕೈ ಜೋಡಿಸಿದ್ದ ಕೆಲ ಯುವಕರ ಕಾರ್ಯವನ್ನು ಕಮಲ್ ಪಂಥ್ ಶ್ಲಾಘಿಸಿದರು.

ಮಂಗಳೂರು ನಗರ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆಗೆ ಬೆಂಗಳೂರು ಮಾದರಿಯಲ್ಲಿ ಪೊಲೀಸ್ ಸಿಬ್ಬಂದಿಯನ್ನು ನೇಮಕ ಮಾಡಲು ಚಿಂತಿಸಲಾಗಿದೆ ಎಂದು ಅವರು ತಿಳಿಸಿದರು.ರಾಜ್ಯದಲ್ಲಿ ವಿವಿಧ‌ ಪೊಲೀಸ್ ಠಾಣೆಗಳಲ್ಲಿ ಅಗತ್ಯವಿರುವ ಪೊಲೀಸ್ ಸಿಬ್ಬಂದಿ ನೇಮಕಾತಿ ಬಗ್ಗೆ ಚರ್ಚಿಸಲಾಗಿದೆ.

ದಕ್ಷಿಣ ಕನ್ನಡ ಮತ್ತು ಮಂಗಳೂರು ಪೊಲೀಸ್ ವ್ಯಾಪ್ತಿಯಲ್ಲಿ ಕೆಲಸ ಜಾಸ್ತಿಯಿರುವ ಹಿನ್ನೆಲೆಯಲ್ಲಿ ಬೆಂಗಳೂರು ಮಾದರಿಯಲ್ಲೇ ಪೊಲೀಸ್ ಸಿಬ್ಬಂದಿ ನೇಮಕ ಮಾಡುವುದುದರ ಬಗ್ಗೆ ಚಿಂತಿಸಲಾಗಿದೆ. ಅಲ್ಲದೆ ಧರ್ಮವೀರ್ ಸಮಿತಿ ನೀಡಿರುವ ವರದಿಯ ಆಧಾರದಲ್ಲಿ ಯೋಜನೆ ರೂಪಿಸಲಾಗುವುದೆಂದು ಅವರು ಹೇಳಿದರು. ರಾಜ್ಯಾದ್ಯಂತ ಡ್ರಗ್ ಮಾಫಿಯಾವನ್ನು ಬುಡದಿಂದ ಕಿತ್ತೋಗೆಯಲು ಪೊಲೀಸ್ ಇಲಾಖೆ ಮುಂದಾಗಿದೆ. ಅಲ್ಲದೇ ಡ್ರಗ್ಸ್ ಮಾಫಿಯಾದಲ್ಲಿ ಕೈಜೋಡಿಸುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

0
Shares
  • Share On Facebook
  • Tweet It




Trending Now
ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
Tulunadu News November 18, 2025
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
  • Popular Posts

    • 1
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search