• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ರಕ್ಷಣಾ ಕಾರ್ಯ ನಿರ್ವಹಿಸಿದ ಪೊಲೀಸರ ಹೆಸರು ರಾಜ್ಯ ಪ್ರಶಸ್ತಿಗೆ ಶಿಫಾರಸ್ಸು

Tulunadu News Posted On August 31, 2018
0


0
Shares
  • Share On Facebook
  • Tweet It

ಮಂಗಳೂರು : ಕೊಡಗಿನ ಗಡಿಭಾಗದ ಜೋಡುಪಾಲ ,ಮದೆನಾಡು ಸೆರೀದಂತೆ ಇನ್ನಿತರಕಡೆ ಜಲಸ್ಪೋಟ ಸೇರಿದಂತೆ ಭೂಕುಸಿತ ದುರಂತ ಸಂದರ್ಭದಲ್ಲಿ ಅಪಾಯ ಲೆಕ್ಕಿಸದೇ ನೂರಾರು ಜನರ ಪ್ರಾಣ ರಕ್ಷಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ಅಧಿಕಾರಿ ಗಣೇಶ್ ಗೌಡ ಸೇರಂದತೆ ಇನ್ನಿತರ ಸಿಬ್ಬಂದಿ ಗಳಿಗೆ ಬಹುಮಾನ ಘೋಷಿಸಲಾಗಿದ್ದು ಮುಂದಿನ ವರ್ಷ ಮುಖ್ಯ ಮಂತ್ರಿ ಪದಕಕ್ಕೂ ಇವರ ಹೆಸರು ಶೀಫಾರಸ್ಸು ಮಾಡಲಾಗುವುದೆಂದು ರಾಜ್ಯ ಕಾನೂನು ಸುವ್ಯವಸ್ತೆ ವಿಭಾಗದ ಎಡಿಜಿಪಿ ಕಮಲ್ ಪಂಥ್ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ದುರಂತ ಸಂಭವಿಸಿದ ಸಂದರ್ಭದಲ್ಲಿ ಹಿರಿಯ ಅಧಿಕಾರಿಗಳ ಅದೇಶಕ್ಕೆ ಕಾಯದೇ ತಮ್ಮ ಅಧಿಕಾರ ವ್ಯಾಪ್ತಿಗೆ ಒಳಪಡದ ಸ್ಥಳಕ್ಕೆ ತೆರಳಿ ಅಪಾಯ ಲೆಕ್ಕಿಸದೇ ನೂರಾರು ಜನರ ಪ್ರಾಣ ರಕ್ಷಣೆ ಮಾಡಿದ ಪೊಲೀಸ್ ಅಧಿಕಾರಿಗಳು ಹಾಗು ಸಿಬಂಧಿಗಳ ಸಾಹಸ ವನ್ನುಕೊಂಡಾಡಿದರು. ಇದು ಪೊಲೀಸ್ ಇಲಾಖೆಯ ನಿಸ್ವಾರ್ಥ ಸೇವೆಯ ಪ್ರತೀಕ ಎಂದು ಅಭಿಪ್ರಾಯ ಪಟ್ಟರು. ಪೊಲೀಸರೊಂದಿಗೆ ಕೈ ಜೋಡಿಸಿದ್ದ ಕೆಲ ಯುವಕರ ಕಾರ್ಯವನ್ನು ಕಮಲ್ ಪಂಥ್ ಶ್ಲಾಘಿಸಿದರು.

ಮಂಗಳೂರು ನಗರ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆಗೆ ಬೆಂಗಳೂರು ಮಾದರಿಯಲ್ಲಿ ಪೊಲೀಸ್ ಸಿಬ್ಬಂದಿಯನ್ನು ನೇಮಕ ಮಾಡಲು ಚಿಂತಿಸಲಾಗಿದೆ ಎಂದು ಅವರು ತಿಳಿಸಿದರು.ರಾಜ್ಯದಲ್ಲಿ ವಿವಿಧ‌ ಪೊಲೀಸ್ ಠಾಣೆಗಳಲ್ಲಿ ಅಗತ್ಯವಿರುವ ಪೊಲೀಸ್ ಸಿಬ್ಬಂದಿ ನೇಮಕಾತಿ ಬಗ್ಗೆ ಚರ್ಚಿಸಲಾಗಿದೆ.

ದಕ್ಷಿಣ ಕನ್ನಡ ಮತ್ತು ಮಂಗಳೂರು ಪೊಲೀಸ್ ವ್ಯಾಪ್ತಿಯಲ್ಲಿ ಕೆಲಸ ಜಾಸ್ತಿಯಿರುವ ಹಿನ್ನೆಲೆಯಲ್ಲಿ ಬೆಂಗಳೂರು ಮಾದರಿಯಲ್ಲೇ ಪೊಲೀಸ್ ಸಿಬ್ಬಂದಿ ನೇಮಕ ಮಾಡುವುದುದರ ಬಗ್ಗೆ ಚಿಂತಿಸಲಾಗಿದೆ. ಅಲ್ಲದೆ ಧರ್ಮವೀರ್ ಸಮಿತಿ ನೀಡಿರುವ ವರದಿಯ ಆಧಾರದಲ್ಲಿ ಯೋಜನೆ ರೂಪಿಸಲಾಗುವುದೆಂದು ಅವರು ಹೇಳಿದರು. ರಾಜ್ಯಾದ್ಯಂತ ಡ್ರಗ್ ಮಾಫಿಯಾವನ್ನು ಬುಡದಿಂದ ಕಿತ್ತೋಗೆಯಲು ಪೊಲೀಸ್ ಇಲಾಖೆ ಮುಂದಾಗಿದೆ. ಅಲ್ಲದೇ ಡ್ರಗ್ಸ್ ಮಾಫಿಯಾದಲ್ಲಿ ಕೈಜೋಡಿಸುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

0
Shares
  • Share On Facebook
  • Tweet It




Trending Now
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
  • Popular Posts

    • 1
      ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • 2
      ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • 3
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search