• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಗುರುವಾಯನಕೆರೆಯಲ್ಲೇ ಟ್ರಾಫಿಕ್‌ ಜಾಮ್‌; ಪೊಲೀಸರ ಜತೆ ಸಂಚಾರ ನಿಯಂತ್ರಿಸಿದ ತಹಶೀಲ್ದಾರ್‌

Tulunadu News Posted On August 31, 2018
0


0
Shares
  • Share On Facebook
  • Tweet It

ಬೆಳ್ತಂಗಡಿ: ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಘನ ವಾಹನ ಸಂಚಾರಕ್ಕೆ ಅವಕಾಶ ನೀಡುವ ಕುರಿತು ದ.ಕ.ಜಿಲ್ಲಾಡಳಿತ ಹಾಗೂ ಪೊಲೀಸ್‌ ಇಲಾಖೆಯ ಗೊಂದಲದಿಂದಾಗಿ ಗುರುವಾರ ಬೆಳಗ್ಗೆ ಗುರುವಾಯನಕೆರೆಯಲ್ಲೇ ಟ್ರಾಫಿಕ್‌ ಜಾಮ್‌ ಉಂಟಾಗಿ ಕೊನೆಗೆ ಬೆಳ್ತಂಗಡಿ ತಹಶೀಲ್ದಾರ್‌ ಮದನ್‌ಮೋಹನ್‌ ಅವರೇ ಫೀಲ್ಡಿಗಿಳಿದು ಟ್ರಾಫಿಕ್‌ ನಿಯಂತ್ರಿಸಿದ ಘಟನೆ ಸಂಭವಿಸಿದೆ.

ಟ್ರಾಫಿಕ್‌ ಜಾಮ್‌; ಜಿಲ್ಲಾಧಿಕಾರಿ ಆದೇಶದ ಮಧ್ಯೆಯೂ ಪೊಲೀಸರು ಘನ ವಾಹನಗಳಿಗೆ ಸಂಚಾರಕ್ಕೆ ಅವಕಾಶ ನೀಡುತ್ತಿದ್ದಾರೆ ಎಂದು ಆರೋಪದ ಮಾತುಗಳು ಕೇಳಿಬಂದ ಹಿನ್ನೆಲೆಯಲ್ಲಿ ಆ. 29ರಿಂದ ತರಕಾರಿ, ಅಡುಗೆ ಅನಿಲ ಸಿಲಿಂಡರ್‌ ಸಹಿತ ಆಹಾರ ಸಾಮಗ್ರಿಗಳ ವಾಹನಗಳನ್ನು ಹೊರತುಪಡಿಸಿ ಉಳಿದ ಎಲ್ಲ ಲಾರಿಗಳನ್ನು ಚಾರ್ಮಾಡಿ ಘಾಟಿಯಲ್ಲಿ ತೆರಳದಂತೆ ಗುರುವಾಯನಕೆರೆಯಲ್ಲಿ ತಡೆಹಿಡಿಯಲಾಗಿತ್ತು.

ಹೀಗಾಗಿ ಎಲ್ಲ ಲಾರಿಗಳು ಗುರುವಾಯನಕೆರೆಯಲ್ಲಿ ಬಂದು ನಿಂತಿದ್ದವು. ಇದರಿಂದ ಗುರುವಾರ ಬೆಳಗ್ಗೆ ಇತರ ವಾಹನಗಳು ಹೆಚ್ಚಾಗಿ ಟ್ರಾಫಿಕ್‌ ಜಾಮ್‌ ಉಂಟಾಯಿತು. ಬಳಿಕ ತಹಶೀಲ್ದಾರ್‌ ಸ್ಥಳಕ್ಕೆ ಆಗಮಿಸಿ, ಪೊಲೀಸರಿಗೆ ಮನವರಿಕೆ ಮಾಡಿ 6 ಚಕ್ರಗಳ ಲಾರಿಗಳಿಗೆ ಘಾಟಿ ರಸ್ತೆಯಲ್ಲಿ ಅವಕಾಶ ನೀಡುವಂತೆ ತಿಳಿಸಿದರು.

ಸಹಜ ಸ್ಥಿತಿಗೆ; ಇದರಿಂದ ಗುರುವಾಯನಕೆರೆಯಲ್ಲಿ ನಿಂತಿದ್ದ ಎಲ್ಲ ಲಾರಿಗಳು ಏಕಕಾಲದಲ್ಲಿ ಹೊರಟ ಪರಿಣಾಮ ಬೆಳ್ತಂಗಡಿ, ಉಜಿರೆ ಭಾಗದಲ್ಲೂ ವಾಹನಗಳ ಒತ್ತಡ ಹೆಚ್ಚಾಗಿತ್ತು. ಎಲ್ಲ ಲಾರಿಗಳು ತೆರಳಿದ ಬಳಿಕ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿತು

 

0
Shares
  • Share On Facebook
  • Tweet It




Trending Now
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
  • Popular Posts

    • 1
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • 2
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!

  • Privacy Policy
  • Contact
© Tulunadu Infomedia.

Press enter/return to begin your search