• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಗುರುವಾಯನಕೆರೆಯಲ್ಲೇ ಟ್ರಾಫಿಕ್‌ ಜಾಮ್‌; ಪೊಲೀಸರ ಜತೆ ಸಂಚಾರ ನಿಯಂತ್ರಿಸಿದ ತಹಶೀಲ್ದಾರ್‌

Tulunadu News Posted On August 31, 2018
0


0
Shares
  • Share On Facebook
  • Tweet It

ಬೆಳ್ತಂಗಡಿ: ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಘನ ವಾಹನ ಸಂಚಾರಕ್ಕೆ ಅವಕಾಶ ನೀಡುವ ಕುರಿತು ದ.ಕ.ಜಿಲ್ಲಾಡಳಿತ ಹಾಗೂ ಪೊಲೀಸ್‌ ಇಲಾಖೆಯ ಗೊಂದಲದಿಂದಾಗಿ ಗುರುವಾರ ಬೆಳಗ್ಗೆ ಗುರುವಾಯನಕೆರೆಯಲ್ಲೇ ಟ್ರಾಫಿಕ್‌ ಜಾಮ್‌ ಉಂಟಾಗಿ ಕೊನೆಗೆ ಬೆಳ್ತಂಗಡಿ ತಹಶೀಲ್ದಾರ್‌ ಮದನ್‌ಮೋಹನ್‌ ಅವರೇ ಫೀಲ್ಡಿಗಿಳಿದು ಟ್ರಾಫಿಕ್‌ ನಿಯಂತ್ರಿಸಿದ ಘಟನೆ ಸಂಭವಿಸಿದೆ.

ಟ್ರಾಫಿಕ್‌ ಜಾಮ್‌; ಜಿಲ್ಲಾಧಿಕಾರಿ ಆದೇಶದ ಮಧ್ಯೆಯೂ ಪೊಲೀಸರು ಘನ ವಾಹನಗಳಿಗೆ ಸಂಚಾರಕ್ಕೆ ಅವಕಾಶ ನೀಡುತ್ತಿದ್ದಾರೆ ಎಂದು ಆರೋಪದ ಮಾತುಗಳು ಕೇಳಿಬಂದ ಹಿನ್ನೆಲೆಯಲ್ಲಿ ಆ. 29ರಿಂದ ತರಕಾರಿ, ಅಡುಗೆ ಅನಿಲ ಸಿಲಿಂಡರ್‌ ಸಹಿತ ಆಹಾರ ಸಾಮಗ್ರಿಗಳ ವಾಹನಗಳನ್ನು ಹೊರತುಪಡಿಸಿ ಉಳಿದ ಎಲ್ಲ ಲಾರಿಗಳನ್ನು ಚಾರ್ಮಾಡಿ ಘಾಟಿಯಲ್ಲಿ ತೆರಳದಂತೆ ಗುರುವಾಯನಕೆರೆಯಲ್ಲಿ ತಡೆಹಿಡಿಯಲಾಗಿತ್ತು.

ಹೀಗಾಗಿ ಎಲ್ಲ ಲಾರಿಗಳು ಗುರುವಾಯನಕೆರೆಯಲ್ಲಿ ಬಂದು ನಿಂತಿದ್ದವು. ಇದರಿಂದ ಗುರುವಾರ ಬೆಳಗ್ಗೆ ಇತರ ವಾಹನಗಳು ಹೆಚ್ಚಾಗಿ ಟ್ರಾಫಿಕ್‌ ಜಾಮ್‌ ಉಂಟಾಯಿತು. ಬಳಿಕ ತಹಶೀಲ್ದಾರ್‌ ಸ್ಥಳಕ್ಕೆ ಆಗಮಿಸಿ, ಪೊಲೀಸರಿಗೆ ಮನವರಿಕೆ ಮಾಡಿ 6 ಚಕ್ರಗಳ ಲಾರಿಗಳಿಗೆ ಘಾಟಿ ರಸ್ತೆಯಲ್ಲಿ ಅವಕಾಶ ನೀಡುವಂತೆ ತಿಳಿಸಿದರು.

ಸಹಜ ಸ್ಥಿತಿಗೆ; ಇದರಿಂದ ಗುರುವಾಯನಕೆರೆಯಲ್ಲಿ ನಿಂತಿದ್ದ ಎಲ್ಲ ಲಾರಿಗಳು ಏಕಕಾಲದಲ್ಲಿ ಹೊರಟ ಪರಿಣಾಮ ಬೆಳ್ತಂಗಡಿ, ಉಜಿರೆ ಭಾಗದಲ್ಲೂ ವಾಹನಗಳ ಒತ್ತಡ ಹೆಚ್ಚಾಗಿತ್ತು. ಎಲ್ಲ ಲಾರಿಗಳು ತೆರಳಿದ ಬಳಿಕ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿತು

 

0
Shares
  • Share On Facebook
  • Tweet It




Trending Now
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
  • Popular Posts

    • 1
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 2
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • 3
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!

  • Privacy Policy
  • Contact
© Tulunadu Infomedia.

Press enter/return to begin your search