• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಬಂಧಿತರಾದವರು ದೇಶದ ಭದ್ರತೆಗೆ ಕಂಟಕ

Tulunadu News Posted On August 31, 2018
0


0
Shares
  • Share On Facebook
  • Tweet It

ಮಂಗಳೂರು: ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣದಲ್ಲಿ ಬಂಧಿತರಾದವರು ದೇಶದ ಭದ್ರತೆಗೆ ಕಂಟಕ ಎಂದು ಕೇಂದ್ರ ಸಚಿವ ಡಿ ವಿ ಸದಾನಂದ ಗೌಡ ವಾಗ್ದಾಳಿ ನಡೆಸಿದರು. ಪುತ್ತೂರು ನಗರ ಸಭೆಯ 31 ವಾರ್ಡ್ ಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಮತದಾನ ಮಾಡಿ ಮಾತನಾಡಿದ ಅವರು ಪ್ರಧಾನಿ ನರೇಂದ್ರ ಮೋದಿ ಹತ್ಯೆಗೆ ಸಂಚು ರೂಪಿಸಿದ್ದ ಹಾಗೂ ಭೀಮಾ ಕೋರೆಗಾಂವ್ ಗ್ರಾಮದಲ್ಲಿ ನಡೆದ ಹಿಂಸಾಚಾರಕ್ಕೆ ಪ್ರಚೋದನೆ ಆರೋಪದ ಮೇಲೆ ಐವರನ್ನು ಬಂಧಿಸಲಾಗಿದೆ.

ದೇಶದ ಭದ್ರತೆಯ ದೃಷ್ಟಿಯಿಂದ ಈ ಕಠಿಣ ಕ್ರಮ ಜರುಗಿಸಲಿದೆ. ಪ್ರತಿಪಕ್ಷಗಳಿಗೆ ಬೇರೆ ವಿಚಾರವಿಲ್ಲದ ಕಾರಣ ಇದನ್ನೇ ದೊಡ್ಡ ವಿಷಯವನ್ನಾಗಿ ಮಾಡುತ್ತಿವೆ ಎಂದು ಅವರು ಕಿಡಿಕಾರಿದರು. ಬೆಂಗಳೂರು – ಮಂಗಳೂರಿನ ಪ್ರಮುಖ ಸಂಪರ್ಕ ಕೊಂಡಿಯಾಗಿರುವ ಶಿರಾಡಿಘಾಟ್ ರಸ್ತೆ ವಾಹನ ಸಂಚಾರಕ್ಕೆ ಶೀಘ್ರ ತೆರೆಯಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ ಅವರು ಈ ಸಂಬಂಧ ಲೋಕೋಪಯೋಗಿ ಸಚಿವ ಎಚ್.ಡಿ‌.ರೇವಣ್ಣ ಜೊತೆ ಮಾತನಾಡಿದ್ದೇನೆ.

ಘಾಟ್ ರಸ್ತೆಯನ್ನು 6 ತಿಂಗಳು ಬಂದ್ ಮಾಡಲು ಸಹಮತವಿಲ್ಲ. ಈ ರೀತಿ ಮಾಡಿ ದಕ್ಷಿಣಕನ್ನಡ, ಉಡುಪಿ ಜಿಲ್ಲೆಯ ಜನರನ್ನು ಬೇರ್ಪಡಿಸುವ ಪ್ರಯತ್ನ ನಡೆಸುತ್ತಿದ್ದಾರಾ? ಎಂದು ಸಂಶಯ ವ್ಯಕ್ತಪಡಿಸಿದರು. ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಮತ್ತು ಪುತ್ತೂರು ನಗರಸಭೆ ಹಾಗು ಬಂಟ್ವಾಳ ಪುರಸಭೆಗೆ ಚುನಾವಣೆ ನಡೆಯುತ್ತಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಉತ್ತಮ ಸಾಧನೆ ಮಾಡಲಿದೆ. ಹೆಚ್ಚಿನ ಕಡೆಯಲ್ಲಿ ಗೆಲುವು ಸಾಧಿಸಿ ಮೂರು ಸ್ಥಳೀಯ ಸಂಸ್ಥೆಯಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಸದಾನಂದ ಗೌಡ ಅವರು ವಿಶ್ವಾಸ ವ್ಯಕ್ತಪಡಿಸಿದರು.

0
Shares
  • Share On Facebook
  • Tweet It




Trending Now
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Tulunadu News February 19, 2026
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
  • Popular Posts

    • 1
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • 2
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search