• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಮುನಿಶ್ರೀ ತರುಣ ಸಾಗರ ವಿಧಿವಶ: ಜೈನ ಮಂದಿರದಲ್ಲೇ ಕೊನೆಯುಸಿರು

Tulunadu News Posted On September 1, 2018
0


0
Shares
  • Share On Facebook
  • Tweet It

ನವದೆಹಲಿ: ಅನಾರೋಗ್ಯದಿಂದ ಬಳಲುತ್ತಿದ್ದ ಪ್ರಖ್ಯಾತ ಜೈನ ಮುನಿ ಶ್ರೀ ತರುಣ ಸಾಗರ ಅವರು ಇಂದು ಬೆಳಿಗ್ಗೆ ಇಹಲೋಕ ತ್ಯಜಿಸಿದರು. ಅವರಿಗೆ 51 ವರ್ಷ ವಯಸ್ಸಾಗಿತ್ತು. ದೆಹಲಿಯ ಕೃಷ್ಣ ನಗರದಲ್ಲಿರುವ ರಾಧಪುರಿ ಜೈನ್ ದೇವಾಲಯದಲ್ಲಿ ಬೆಳಗ್ಗಿನ ಜಾವ 3 ಗಂಟೆಯ ವೇಳೆಗೆ ಅವರು ಕೊನೆಯುಸಿರೆಳೆದರು.

ಬಹಳ ದಿನಗಳಿಂದ ಜಾಂಡೀಸ್ ನಿಂದ ಬಳಲುತ್ತಿದ್ದ ಅವರನ್ನು 20 ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆರೋಗ್ಯ ತೀರಾ ಹದಗೆಟ್ಟಿದ್ದರೂ ಕಳೆದ ಎರಡು ದಿನಗಳಿಂದ ಔಷಧವನ್ನೂ ಸೇವಿಸದೆ ಇದ್ದರು. ಜೊತೆಗೆ ಜೈನ ಮಂದಿರಕ್ಕೆ ತಮ್ಮನ್ನು ಕರೆದೊಯ್ಯುವಂತೆ ಅವರೇ ಒತ್ತಾಯಿಸಿದ ಹಿನ್ನೆಲೆಯಲ್ಲಿ ಅವರನ್ನು ಜೈನ ಮಂದಿರಕ್ಕೆ ಕರೆದುಕೊಂಡು ಬರಲಾಗಿತ್ತು.

ಮಧ್ಯಪ್ರದೇಶದ ದಾಹೋಹ್ ಜಿಲ್ಲೆಯಲ್ಲಿ ಜೂನ್ 26, 1967 ರಲ್ಲಿ ಜನಿಸಿದ ತರುಣ ಸಾಗರ ಅವರ ಮೂಲ ಹೆಸರು ಪವನ್ ಕುಮಾರ್ ಜೈನ್. 1981 ಮಾರ್ಚ್ 8 ರಂದು ಮನೆ ಬಿಟ್ಟು ಹೊರಬಂದ ಅವರು ಸನ್ಯಾಸ ಸ್ವೀಕರಿಸಿದ್ದರು. ದಿಗಂಬರ ಪಂಥದ ಅನುಯಾಯಿಯಾಗಿದ್ದ ತರುಣ ಸಾಗರ ಅವರಿಗೆ ಲಕ್ಷಾಂತರ ಜನ ಭಕ್ತರಿದ್ದರು. ಅವರ ನಿಧನಕ್ಕೆ ದೇಶದಾದ್ಯಮಟ ಗಣ್ಯರು ಕಂಬನಿ ಮಿಡಿದಿದ್ದಾರೆ. ಅವರ ಅಂತ್ಯ ಸಂಸ್ಕಾರ ಉತ್ತರ ಪ್ರದೇಶದ ಮುರಾದ್ ನಗರದ ತರುಣಸಾಗರಂ ನಲ್ಲಿ ನಡೆಯಲಿದೆ.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search