• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮುನಿಶ್ರೀ ತರುಣ ಸಾಗರ ವಿಧಿವಶ: ಜೈನ ಮಂದಿರದಲ್ಲೇ ಕೊನೆಯುಸಿರು

Tulunadu News Posted On September 1, 2018


  • Share On Facebook
  • Tweet It

ನವದೆಹಲಿ: ಅನಾರೋಗ್ಯದಿಂದ ಬಳಲುತ್ತಿದ್ದ ಪ್ರಖ್ಯಾತ ಜೈನ ಮುನಿ ಶ್ರೀ ತರುಣ ಸಾಗರ ಅವರು ಇಂದು ಬೆಳಿಗ್ಗೆ ಇಹಲೋಕ ತ್ಯಜಿಸಿದರು. ಅವರಿಗೆ 51 ವರ್ಷ ವಯಸ್ಸಾಗಿತ್ತು. ದೆಹಲಿಯ ಕೃಷ್ಣ ನಗರದಲ್ಲಿರುವ ರಾಧಪುರಿ ಜೈನ್ ದೇವಾಲಯದಲ್ಲಿ ಬೆಳಗ್ಗಿನ ಜಾವ 3 ಗಂಟೆಯ ವೇಳೆಗೆ ಅವರು ಕೊನೆಯುಸಿರೆಳೆದರು.

ಬಹಳ ದಿನಗಳಿಂದ ಜಾಂಡೀಸ್ ನಿಂದ ಬಳಲುತ್ತಿದ್ದ ಅವರನ್ನು 20 ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆರೋಗ್ಯ ತೀರಾ ಹದಗೆಟ್ಟಿದ್ದರೂ ಕಳೆದ ಎರಡು ದಿನಗಳಿಂದ ಔಷಧವನ್ನೂ ಸೇವಿಸದೆ ಇದ್ದರು. ಜೊತೆಗೆ ಜೈನ ಮಂದಿರಕ್ಕೆ ತಮ್ಮನ್ನು ಕರೆದೊಯ್ಯುವಂತೆ ಅವರೇ ಒತ್ತಾಯಿಸಿದ ಹಿನ್ನೆಲೆಯಲ್ಲಿ ಅವರನ್ನು ಜೈನ ಮಂದಿರಕ್ಕೆ ಕರೆದುಕೊಂಡು ಬರಲಾಗಿತ್ತು.

ಮಧ್ಯಪ್ರದೇಶದ ದಾಹೋಹ್ ಜಿಲ್ಲೆಯಲ್ಲಿ ಜೂನ್ 26, 1967 ರಲ್ಲಿ ಜನಿಸಿದ ತರುಣ ಸಾಗರ ಅವರ ಮೂಲ ಹೆಸರು ಪವನ್ ಕುಮಾರ್ ಜೈನ್. 1981 ಮಾರ್ಚ್ 8 ರಂದು ಮನೆ ಬಿಟ್ಟು ಹೊರಬಂದ ಅವರು ಸನ್ಯಾಸ ಸ್ವೀಕರಿಸಿದ್ದರು. ದಿಗಂಬರ ಪಂಥದ ಅನುಯಾಯಿಯಾಗಿದ್ದ ತರುಣ ಸಾಗರ ಅವರಿಗೆ ಲಕ್ಷಾಂತರ ಜನ ಭಕ್ತರಿದ್ದರು. ಅವರ ನಿಧನಕ್ಕೆ ದೇಶದಾದ್ಯಮಟ ಗಣ್ಯರು ಕಂಬನಿ ಮಿಡಿದಿದ್ದಾರೆ. ಅವರ ಅಂತ್ಯ ಸಂಸ್ಕಾರ ಉತ್ತರ ಪ್ರದೇಶದ ಮುರಾದ್ ನಗರದ ತರುಣಸಾಗರಂ ನಲ್ಲಿ ನಡೆಯಲಿದೆ.

  • Share On Facebook
  • Tweet It


- Advertisement -


Trending Now
ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
Tulunadu News March 26, 2023
ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
Tulunadu News March 25, 2023
Leave A Reply

  • Recent Posts

    • ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
    • ಲೋಕಾಯುಕ್ತ ಬಲಗೊಂಡಿದೆ ಎನ್ನುವ ಸ್ಯಾಂಪಲ್!
    • ಚುನಾವಣಾ ಪೂರ್ವದ ಕೊನೆಯ ನಾಟಕಕ್ಕೆ ಕಾಂಗ್ರೆಸ್ ರೆಡಿ!!
  • Popular Posts

    • 1
      ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • 2
      ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • 3
      ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • 4
      ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • 5
      ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search