• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಪುತ್ತೂರು ನಗರಸಭೆ ಬಿಜೆಪಿ ತೆಕ್ಕೆಗೆ, ಉಳ್ಳಾಲ, ಬಂಟ್ವಾಳದಲ್ಲಿ ಅತಂತ್ರ, ಕೈಗೆ ಮುಖಭಂಗ

Tulunadu News Posted On September 4, 2018
0


0
Shares
  • Share On Facebook
  • Tweet It

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ 2 ನಗರ ಸಭೆ ಹಾಗೂ 1 ಪುರಸಭೆಗೆ ನಡೆದ ಚನಾವಣೆಯ ಫಲಿತಾಂಶ ಹೊರ ಬಿದ್ದಿದೆ. ಉಳ್ಳಾಲ ಮತ್ತು ಪುತ್ತೂರು ನಗರಸಭೆ ಹಾಗೂ ಬಂಟ್ವಾಳದ ಪುರಸಭೆಗೆ ನಡೆದ ಚುನಾವಣೆಯ ಫಲಿತಾಂಶ ಪ್ರಕಟವಾಗಿದೆ. ಈ ಮೂರು ಕಡೆ ನಡೆದ ಜಿದ್ದಾಜಿದ್ದಿನ ಹೋರಾಟದಲ್ಲಿ ಪುತ್ತೂರಿನಲ್ಲಿ ಬಿಜೆಪಿ ಭಾರೀ ಅಂತರದ ಗೆಲುವಿನೊಂದಿಗೆ ಜಯಭೇರಿ ಬಾರಿಸಿದೆ. ಉಳ್ಳಾಲ ಹಾಗು ಬಂಟ್ವಾಳದಲ್ಲಿ ಸ್ಪಷ್ಟ ಬಹುಮತ ಯಾರಿಗೂ ದೊರೆಯದೆ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ.

ಉಳ್ಳಾಲ ನಗರ ಸಭೆಯ ಒಟ್ಟು 31 ಸ್ಥಾನಗಳ ಪೈಕಿ ಬಿಜೆಪಿ 6, ಕಾಂಗ್ರೆಸ್ 13 , ಎಸ್ ಡಿಪಿಐ 6, ಜೆಡಿ ಎಸ್ 4 ಸೇರಿದಂತೆ 2 ಪಕ್ಷೇತರ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ರಾಜ್ಯ ವಸತಿ ಖಾತೆ ಸಚಿವ ಹಾಗು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಅವರ ಸ್ವ ಕ್ಷೇತ್ರ ಉಳ್ಳಾಲದಲ್ಲಿ ಕಾಂಗ್ರೆಸ್ ಗೆ ಸ್ಪಷ್ಟ ಬಹುಮತ ದೊರೆಯದೇ ಮುಖಭಂಗವಾಗಿದೆ. ಇಲ್ಲಿ ಗಮನಿಸ ಬೇಕಾದ ಇನ್ನೊಂದು ಅಂಶ ಎಂದರೆ ಎಸ್ ಡಿಪಿಐ 6 ಹಾಗೂ ಜೆಡಿಎಸ್ 4 ಸ್ಥಾನಗಳಲ್ಲಿ ಗೆಲುವು ಸಾಧಿಸಿ ಕಾಂಗ್ರೆಸ್ ಸ್ಥಾನಗಳನ್ನು ಕಬಳಿಸಿವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉಳ್ಳಾಲದಲ್ಲಿ ಬಿಜೆಪಿ ದುರ್ಬಲ ಎಂದೇ ಪರಿಗಣಿಸಲಾಗುತ್ತದೆ.

ಬಿಜೆಪಿ ಇಲ್ಲಿ ಕೇವಲ 6 ಸ್ಥಾನಗಳಿಗೆ ತೃಪ್ತಿಪಟ್ಟಿದೆ. ಇನ್ನೊಂದು ಕುತೂಹಲದ ಅಂಶ ಎಂದರೆ 16 ನೇ ವಾರ್ಡ್ ನ ಫಲಿತಾಂಶವನ್ನು ಟಾಸ್ ಹಾಕುವ ಮೂಲಕ ನಿರ್ಧರಿಸಲಾಗಿದೆ. ಈ ವಾರ್ಡ್ ನ ಮತ ಎಣಿಕೆ ಸಂದರ್ಭದಲ್ಲಿ ಕಾಂಗ್ರೆಸ್ ಹಾಗು ಬಿಜೆಪಿ ಅಭ್ಯರ್ಥಿಗಳು ಸಮಾನವಾಗಿ 370 ಮತಗಳನ್ನು ಪಡೆದಿದ್ದರು. ಈ ಹಿನ್ನೆಲೆಯಲ್ಲಿ ಟಾಸ್ ಗೆಲ್ಲುವ ಮೂಲಕ ಬಿಜೆಪಿ ಅಭ್ಯರ್ಥಿ ರಾಜೇಶ್ ಜಯ ಸಾಧಿಸಿದ್ದಾರೆ. ಉಳ್ಳಾಲದ ಈ ಫಲಿತಾಂಶದ ಮೂಲಕ ಸಚಿವ ಯು .ಟಿ ಖಾದರ್ ಅವರಿಗೆ ಮುಖಭಂಗವಾಗಿದೆ ಎಂದು ಹೇಳಲಾಗಿದೆ.

0
Shares
  • Share On Facebook
  • Tweet It




Trending Now
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
  • Popular Posts

    • 1
      ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • 2
      ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • 3
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search