• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಮಂಗಳೂರಿನಲ್ಲಿ ಅದ್ದೂರಿಯಾಗಿ ನಡೆದ ಮೊಸರು ಕುಡಿಕೆ ಉತ್ಸವ

Tulunadu News Posted On September 4, 2018
0


0
Shares
  • Share On Facebook
  • Tweet It

ಮಂಗಳೂರು: ಮಹಾರಾಷ್ಟ್ರದಲ್ಲಿ ದಹಿಹಾಂಡಿ (ಮೊಸರಿನ ಮಡಿಕೆ ಒಡೆಯುವ) ಗೋವಿಂದರ ಟೋಲಿ ಬಹಳ ಪ್ರಸಿದ್ಧ. ದಹಿಹಾಂಡಿ ಒಡೆಯುವ ಈ ಉತ್ಸವವನ್ನು ಕಣ್ತುಂಬಿಕೊಳ್ಳಲು ದೇಶ ವಿದೇಶದಿಂದ ಪ್ರವಾಸಿಗರು ಮುಂಬೈನ ಗಲ್ಲಿ ಗಲ್ಲಿಗಳಿಂದ ಬರುತ್ತಾರೆ. ಮಹಾರಾಷ್ಟ್ರದಲ್ಲಿ ಆಯೋಜಿಸಲಾಗುವ ದಹಿಹಾಂಡಿ ಒಡೆಯುವ ಉತ್ಸವದಂತೆಯೇ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ‘ಮೊಸರು ಕುಡಿಕೆ’ ಉತ್ಸವ ಆಯೋಜಿಲಾಗುತ್ತದೆ. ಮಂಗಳೂರಿನಲ್ಲಿ ನಡೆಯುವ ಈ ಮೊಸರು ಕುಡಿಕೆ ಉತ್ಸವವನ್ನು ನೋಡುವುದೇ ಕಣ್ಣಿಗೆ ಹಬ್ಬ. ನಗರದಾದ್ಯಂತ ಸೋಮವಾರ ಮೊಸರು ಕುಡಿಕೆ ಉತ್ಸವ ಅತ್ಯಂತ ಶ್ರದ್ಧೆ, ಭಕ್ತಿ, ಸಂಭ್ರಮ, ಸಡಗರದಿಂದ ಆಚರಿಸಲಾಯಿತು.

109ನೇ ವರ್ಷದ ಮೊಸರು ಕುಡಿಕೆ ಉತ್ಸವ ಮೊಸರು ಕುಡಿಕೆ ಕಟ್ಟೆಯಲ್ಲಿ ಜರುಗಿದ್ದು, ಮೊಸರು, ನೀರು, ಹಾಲು, ನಾನಾ ವಸ್ತುಗಳನ್ನು ಎತ್ತರದ ಕಮಾನುಗಳಲ್ಲಿ ಕಟ್ಟಲಾದ ಮಣ್ಣಿನ ಮಡಕೆಯಲ್ಲಿ ಹಾಕಿ ಇಡಲಾಗುತ್ತದೆ. ಆ ನಂತರ ಗೋವಿಂದಾ… ಹಾಡಿನೊಂಡಿಗೆ ಬರುವ ಸಾಹಸಿ ಯುವಕರ ತಂಡ ಇದನ್ನು ಒಡೆದುಕೊಂಡು ಬರುವ ದೃಶ್ಯ ನೋಡುವುದೇ ಮನಮೋಹಕ. ಸಂಜೆ ನಗರದ ಹಲವಾರು ವೃತ್ತಗಳಲ್ಲಿ ವೈಭವಪೂರ್ಣ ದೃಶ್ಯಾವಳಿ, ಕಲಾ ರೂಪಕಗಳು, ನಾನಾ ಸಂಘ ಸಂಸ್ಥೆಗಳ ಟ್ಯಾಬ್ಲೋಗಗಳಿಂದ ಕೂಡಿದ ಶ್ರೀಕೃಷ್ಣ ಪರಮಾತ್ಮನ ಶೋಭಾಯಾತ್ರೆ ನಡೆಯಿತು.

ನಗರದ ಅತ್ತಾವರ , ಕದ್ರಿ, ಮಣ್ಣಗುಡ್ಡ, ಉರ್ವಾ, ಕಾವೂರು ಸೇರದಂತೆ ಇತರೆಡೆ ಮೊಸರು ಕುಡಿಕೆ ಕಟ್ಟೆಯಲ್ಲಿ ಪ್ರದರ್ಶನ ಹಾಗೂ ಗೌರವಾರ್ಪಣೆಗಳೊಂದಿಗೆ ಸಮಾಪನಗೊಂಡಿತು. ನಗರದಲ್ಲಿ ವೈಭವ ಪೂರ್ಣ ಮೊಸರು ಕುಡಿಕೆ ಮೆರವಣಿಗೆ, ಕೊಟ್ಟಾರ, ಉರ್ವಸ್ಟೋರ್ ಮಾರ್ಗವಾಗಿ ಅಶೋಕನಗರದವರೆಗೆ ನಡೆಯಿತು. ದಾರಿ ನಡುವೆ ಭಕ್ತಿ ಸಂಗೀತ ಸಂಜೆ, ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಮೊಸರು ಕುಡಿಕೆ ಉತ್ಸವ ಸಾಂಪ್ರದಾಯಿಕವಾಗಿ ನಡೆಯಿತು.

ಕಾವೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವತಿಯಿಂದ ಮೊಸರು ಕುಡಿಕೆ ಉತ್ಸವ ಆಯೋಜಿಸಲಾಗಿತ್ತು. ಕಾವೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆವರಣದಿಂದ ಭವ್ಯಾಲಂಕೃತವಾದ ಮಂಟಪದಲ್ಲಿ ಶ್ರೀ ಕೃಷ್ಣನ ವಿಗ್ರಹವನ್ನು ನಾನಾ ವೇಷ ಭೂಷಣಗಳಿಂದೊಡಗೂಡಿದ ವಿದ್ಯುದ್ದೀಪಾಲಂಕೃತವಾದ ಟ್ಯಾಬ್ಲೋಗಳೊಂದಿಗೆ ಮೊಸರು ಕುಡಿಕೆಯ ವೈಭವದ ಮೆರವಣಿಗೆ ಕಾವೂರು ಕೇಂದ್ರ ಮೊಸರು ಕುಡಿಕೆ ಮೈದಾನಕ್ಕೆ ಆಗಮಿಸಿತು.

0
Shares
  • Share On Facebook
  • Tweet It




Trending Now
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
  • Popular Posts

    • 1
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • 2
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು

  • Privacy Policy
  • Contact
© Tulunadu Infomedia.

Press enter/return to begin your search