• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಮಂಗಳೂರಿನಲ್ಲಿ ಅದ್ದೂರಿಯಾಗಿ ನಡೆದ ಮೊಸರು ಕುಡಿಕೆ ಉತ್ಸವ

Tulunadu News Posted On September 4, 2018
0


0
Shares
  • Share On Facebook
  • Tweet It

ಮಂಗಳೂರು: ಮಹಾರಾಷ್ಟ್ರದಲ್ಲಿ ದಹಿಹಾಂಡಿ (ಮೊಸರಿನ ಮಡಿಕೆ ಒಡೆಯುವ) ಗೋವಿಂದರ ಟೋಲಿ ಬಹಳ ಪ್ರಸಿದ್ಧ. ದಹಿಹಾಂಡಿ ಒಡೆಯುವ ಈ ಉತ್ಸವವನ್ನು ಕಣ್ತುಂಬಿಕೊಳ್ಳಲು ದೇಶ ವಿದೇಶದಿಂದ ಪ್ರವಾಸಿಗರು ಮುಂಬೈನ ಗಲ್ಲಿ ಗಲ್ಲಿಗಳಿಂದ ಬರುತ್ತಾರೆ. ಮಹಾರಾಷ್ಟ್ರದಲ್ಲಿ ಆಯೋಜಿಸಲಾಗುವ ದಹಿಹಾಂಡಿ ಒಡೆಯುವ ಉತ್ಸವದಂತೆಯೇ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ‘ಮೊಸರು ಕುಡಿಕೆ’ ಉತ್ಸವ ಆಯೋಜಿಲಾಗುತ್ತದೆ. ಮಂಗಳೂರಿನಲ್ಲಿ ನಡೆಯುವ ಈ ಮೊಸರು ಕುಡಿಕೆ ಉತ್ಸವವನ್ನು ನೋಡುವುದೇ ಕಣ್ಣಿಗೆ ಹಬ್ಬ. ನಗರದಾದ್ಯಂತ ಸೋಮವಾರ ಮೊಸರು ಕುಡಿಕೆ ಉತ್ಸವ ಅತ್ಯಂತ ಶ್ರದ್ಧೆ, ಭಕ್ತಿ, ಸಂಭ್ರಮ, ಸಡಗರದಿಂದ ಆಚರಿಸಲಾಯಿತು.

109ನೇ ವರ್ಷದ ಮೊಸರು ಕುಡಿಕೆ ಉತ್ಸವ ಮೊಸರು ಕುಡಿಕೆ ಕಟ್ಟೆಯಲ್ಲಿ ಜರುಗಿದ್ದು, ಮೊಸರು, ನೀರು, ಹಾಲು, ನಾನಾ ವಸ್ತುಗಳನ್ನು ಎತ್ತರದ ಕಮಾನುಗಳಲ್ಲಿ ಕಟ್ಟಲಾದ ಮಣ್ಣಿನ ಮಡಕೆಯಲ್ಲಿ ಹಾಕಿ ಇಡಲಾಗುತ್ತದೆ. ಆ ನಂತರ ಗೋವಿಂದಾ… ಹಾಡಿನೊಂಡಿಗೆ ಬರುವ ಸಾಹಸಿ ಯುವಕರ ತಂಡ ಇದನ್ನು ಒಡೆದುಕೊಂಡು ಬರುವ ದೃಶ್ಯ ನೋಡುವುದೇ ಮನಮೋಹಕ. ಸಂಜೆ ನಗರದ ಹಲವಾರು ವೃತ್ತಗಳಲ್ಲಿ ವೈಭವಪೂರ್ಣ ದೃಶ್ಯಾವಳಿ, ಕಲಾ ರೂಪಕಗಳು, ನಾನಾ ಸಂಘ ಸಂಸ್ಥೆಗಳ ಟ್ಯಾಬ್ಲೋಗಗಳಿಂದ ಕೂಡಿದ ಶ್ರೀಕೃಷ್ಣ ಪರಮಾತ್ಮನ ಶೋಭಾಯಾತ್ರೆ ನಡೆಯಿತು.

ನಗರದ ಅತ್ತಾವರ , ಕದ್ರಿ, ಮಣ್ಣಗುಡ್ಡ, ಉರ್ವಾ, ಕಾವೂರು ಸೇರದಂತೆ ಇತರೆಡೆ ಮೊಸರು ಕುಡಿಕೆ ಕಟ್ಟೆಯಲ್ಲಿ ಪ್ರದರ್ಶನ ಹಾಗೂ ಗೌರವಾರ್ಪಣೆಗಳೊಂದಿಗೆ ಸಮಾಪನಗೊಂಡಿತು. ನಗರದಲ್ಲಿ ವೈಭವ ಪೂರ್ಣ ಮೊಸರು ಕುಡಿಕೆ ಮೆರವಣಿಗೆ, ಕೊಟ್ಟಾರ, ಉರ್ವಸ್ಟೋರ್ ಮಾರ್ಗವಾಗಿ ಅಶೋಕನಗರದವರೆಗೆ ನಡೆಯಿತು. ದಾರಿ ನಡುವೆ ಭಕ್ತಿ ಸಂಗೀತ ಸಂಜೆ, ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಮೊಸರು ಕುಡಿಕೆ ಉತ್ಸವ ಸಾಂಪ್ರದಾಯಿಕವಾಗಿ ನಡೆಯಿತು.

ಕಾವೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವತಿಯಿಂದ ಮೊಸರು ಕುಡಿಕೆ ಉತ್ಸವ ಆಯೋಜಿಸಲಾಗಿತ್ತು. ಕಾವೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆವರಣದಿಂದ ಭವ್ಯಾಲಂಕೃತವಾದ ಮಂಟಪದಲ್ಲಿ ಶ್ರೀ ಕೃಷ್ಣನ ವಿಗ್ರಹವನ್ನು ನಾನಾ ವೇಷ ಭೂಷಣಗಳಿಂದೊಡಗೂಡಿದ ವಿದ್ಯುದ್ದೀಪಾಲಂಕೃತವಾದ ಟ್ಯಾಬ್ಲೋಗಳೊಂದಿಗೆ ಮೊಸರು ಕುಡಿಕೆಯ ವೈಭವದ ಮೆರವಣಿಗೆ ಕಾವೂರು ಕೇಂದ್ರ ಮೊಸರು ಕುಡಿಕೆ ಮೈದಾನಕ್ಕೆ ಆಗಮಿಸಿತು.

0
Shares
  • Share On Facebook
  • Tweet It




Trending Now
ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
Tulunadu News July 18, 2025
ಉತ್ತರಾಖಂಡದ ಎಲ್ಲಾ 17000 ಸರಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ ಅದೇಶ!
Tulunadu News July 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
    • ಉತ್ತರಾಖಂಡದ ಎಲ್ಲಾ 17000 ಸರಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ ಅದೇಶ!
    • ಯುವಕನನ್ನು ಲವ್ ಜಿಹಾದ್ ಮಾಡಿದ್ಲಾ ಮುಸ್ಲಿಂ ಯುವತಿ! ಹಿಂದೂ ಯುವಕ ಕಂಗಾಲು...
    • ಮೋದಿ ಮಾತ್ರ ವಾರಕ್ಕೆ 100 ಗಂಟೆ ಕೆಲಸ ಮಾಡ್ತಾರೆ- ಸಂಸದ ತೇಜಸ್ವಿಗೆ ಹೇಳಿದ ನಾರಾಯಣ್ ಮೂರ್ತಿ
    • ಗಂಡ ತಲೆಹಿಡುಕ ಎಂದ ಸಂತ್ರಸ್ತೆಗೆ ಪೊಲೀಸ್ ಪೇದೆಯೇ ಮುಕ್ಕಿದ ಮಂಗಳೂರಿನ ನೋವಿನ ಕಥೆ!
    • ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
    • ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
    • ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!
  • Popular Posts

    • 1
      ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
    • 2
      ಉತ್ತರಾಖಂಡದ ಎಲ್ಲಾ 17000 ಸರಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ ಅದೇಶ!
    • 3
      ಯುವಕನನ್ನು ಲವ್ ಜಿಹಾದ್ ಮಾಡಿದ್ಲಾ ಮುಸ್ಲಿಂ ಯುವತಿ! ಹಿಂದೂ ಯುವಕ ಕಂಗಾಲು...
    • 4
      ಮೋದಿ ಮಾತ್ರ ವಾರಕ್ಕೆ 100 ಗಂಟೆ ಕೆಲಸ ಮಾಡ್ತಾರೆ- ಸಂಸದ ತೇಜಸ್ವಿಗೆ ಹೇಳಿದ ನಾರಾಯಣ್ ಮೂರ್ತಿ
    • 5
      ಗಂಡ ತಲೆಹಿಡುಕ ಎಂದ ಸಂತ್ರಸ್ತೆಗೆ ಪೊಲೀಸ್ ಪೇದೆಯೇ ಮುಕ್ಕಿದ ಮಂಗಳೂರಿನ ನೋವಿನ ಕಥೆ!

  • Privacy Policy
  • Contact
© Tulunadu Infomedia.

Press enter/return to begin your search